Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...