Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...