Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...