Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...