Homeಮುಖಪುಟರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ರೈತ ಉತ್ಪನ್ನಗಳ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ಬೇಕು

ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ರೈತರು ಚೆನ್ನಾಗಿ ಬಲ್ಲರು.

- Advertisement -
- Advertisement -

ಈ ದೇಶದ ದುರಂತವೆಂದರೆ ಇಡೀ ಜಗತ್ತು ಕೊರೊನಾ ಸಾಂಕ್ರಾಮಿಕದಿಂದ ತತ್ತರಿಸಿ ಬಾಯಿಗೆ ಮಾಸ್ಕ್ ಹಾಕಿ ಮೂಕವಾಗಿದ್ದಾಗ ಕೇಂದ್ರ ಸರ್ಕಾರ ಲಾಕ್‌ಡೌನ್ ಘೋಷಿಸಿ ತರಾತುರಿಯಲ್ಲಿ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಮಸೂದೆ, ಬೆಳೆ ಬೆಲೆ ಖಾತರಿ ಒಪ್ಪಂದ ಮಸೂದೆ, ಹಾಗೂ ತೋಟಗಾರಿಕಾ ಸೇವೆಗಳ ಜೀವನಾವಶ್ಯಕ ಮಸೂದೆ – ಎಂಬೀ ಮೂರು ಮಸೂದೆಗಳನ್ನು ಸಂಸತ್ತಿನಲ್ಲಿ ಸಾವಧಾನವಾಗಿ ಚರ್ಚಿಸದೆ, ತೀವ್ರ ವಿರೋಧದ ನಡುವೆಯೂ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಅವಶ್ಯಕತೆ, ಅವಸರ ಏನಿತ್ತು?

ಇದು ಕೇವಲ ಕಾರ್ಪೊರೆಟ್ ವಲಯವನ್ನು ಸಂಪ್ರೀತೀತಗೊಳಿಸುವುದಕ್ಕಾಗಿ ಎಂಬುದು ಶಾಲಾಮಕ್ಕಳಿಗೂ ತಿಳಿದ ವಿಚಾರ. ದೂರಗಾಮಿ ಚಿಂತನೆ ಇಲ್ಲದ ಈ ಮಸೂದೆಗಳು ಕ್ರಮೇಣ ರೈತಾಪಿ ವರ್ಗದ ಸ್ವಾತಂತ್ರ್ಯವನ್ನು ಕಸಿದುಕೊಂಡು ಕಾರ್ಪೊರೆಟರ ಗುಲಾಮರನ್ನಾಗಿ ಮಾಡುತ್ತವೆಯಲ್ಲವೆ? ಬೆಂಬಲ ಬೆಲೆ ನೀಡುವ ಮಾರುಕಟ್ಟೆ ವ್ಯವಹಾರವನ್ನು ನಿಭಾಯಿಸುವ ಜವಾಬ್ದಾರಿಯಿಂದ ಸರ್ಕಾರ ತಪ್ಪಿಸಿಕೊಳ್ಳುವ ಹುನ್ನಾರವಲ್ಲದೆ ಇದು ಬೇರೆ ಅಲ್ಲ. ಈ ಮಸೂದೆಗಳು ಮೇಲುನೋಟಕ್ಕೆ ಆಕರ್ಷಕವಾಗಿ ಕಂಡುಬಂದರೂ ಕ್ರಮೇಣ ರೈತರನ್ನು ದಿವಾಳಿ ಎಬ್ಬಿಸಿ ವಲಸಿಗರನ್ನಾಗಿ ಮಾಡುತ್ತವೆಯಲ್ಲವೆ?

ಆಗ ಗತ್ಯಂತರವಿಲ್ಲದೆ ಈ ಕೃಷಿಕ ಕಾರ್ಮಿಕ ವರ್ಗವು ಪಟ್ಟಣಗಳತ್ತ ಪಯಣಿಸುತ್ತಾರೆ. ಇಲ್ಲಿ ಕೂಲಿ ಕಂಟ್ರಾಕ್ಟ್‌ದಾರರ ಮೌಸ್‌ಟ್ರ್ಯಾಪ್‌ಗೆ (ಇಲಿಬೋನು) ಅನಿವಾರ್ಯವಾಗಿ ಸಿಕ್ಕಿ ಬೀಳುತ್ತಾರೆ. ಇಲ್ಲಿಗೆ ಮುಗಿಯಿತು – ’ಸರ್ವರಿಗೆ ಸಮಬಾಳು; ಸರ್ವರಿಗೆ ಸಮಪಾಲು’ ಎಂಬ ಸಮಾಜವಾದ ಹಾಗೂ ಗಾಂಧೀಜಿಯ ಗ್ರಾಮ ಸ್ವರಾಜ್ಯದ ಕನಸು. ಇಂಥ ಸಂಘರ್ಷಾತ್ಮಕ ಮಸೂದೆಗಳನ್ನು ಜಾರಿಗೊಳಿಸುವ ಮುನ್ನ ಅದರ ಕರಡು ಪ್ರತಿಗಳನ್ನು ಸಾರ್ವಜನಿಕ ವಲಯಕ್ಕೆ ಬಿಟ್ಟು ಚರ್ಚಿಸುವುದು, ರೈತ ನಾಯಕರನ್ನು ಕರೆದು ಮಾತುಕತೆ ಆಡುವುದು ಇತ್ಯಾದಿ ಏನೂ ನಡೆಯಲಿಲ್ಲ. ’ಜಗವೆಲ್ಲ ಮೌನವಾಗಿರುವಾಗ ಇವನೊಬ್ಬನೆದ್ದ’ ಎಂಬಂತೆ ಕೇಂದ್ರ ಸರ್ಕಾರ ಏಕಾಏಕಿ ಈ ಮಸೂದೆಗಳನ್ನು ಜಾರಿಗೊಳಿಸಿ ರೈತ ವರ್ಗವನ್ನು ರೊಚ್ಚಿಗೇಳಿಸಿತು.

ಇದರ ಪರಿಣಾಮವಾಗಿ ಅಖಿಲ ಭಾರತ ರೈತಸಂಘಟನೆಗಳು ಈಗ ಒಟ್ಟಾಗಿ ನವೆಂಬರ್ 26ರಿಂದ ಸುರಿವ ಹಿಮದಲ್ಲಿ ಕೊರೆವ ಚಳಿಯಲ್ಲಿ ದೇಶದ ನಾನಾ ಭಾಗಗಳಿಂದ ಬಂದು ಸರ್ಕಾರದ ಅಡೆತಡೆ ಅಡ್ಡಿ ಆತಂಕ ಪೊಲೀಸರ ಲಾಠಿ ಏಟು ಯಾವುದಕ್ಕೂ ಜಗ್ಗದೆ ಕುಗ್ಗದೆ ನುಗ್ಗಿ ದಿಲ್ಲಿ ದರ್ಬಾರಿನ ದಿಡ್ಡಿ ಬಾಗಿಲ ಬಳಿ 15 ದಿನಗಳಿಂದ ಬೀಡುಬಿಟ್ಟಿದ್ದಾರೆ. ಒಂದಿಬ್ಬರ ಬಲಿದಾನವೂ ಆಗಿದೆ. ಇದಾಗಿ ವಾರಗಳು ಕಳೆಯುತ್ತ ಬಂದರೂ ಕೂಡ ಅನ್ನದಾತರನ್ನು ತಕ್ಷಣ ಕರೆದು ಅವರ ಅಹವಾಲನ್ನು ಆಲಿಸುವ ಸೌಜನ್ಯವಾಗಲಿ ವ್ಯವಧಾನವಾಗಲಿ ಸರ್ಕಾರಕ್ಕಿಲ್ಲವಾಗಿದೆ. ಈ ರೈತ ಪ್ರತಿಭಟನೆಯು ವಿರೋಧ ಪಕ್ಷಗಳ ಪಿತೂರಿ, ದೇಶದ್ರೋಹಿಗಳ ಕೈವಾಡ, ಇದರಲ್ಲಿ ನಕ್ಸಲರು, ಖಲಿಸ್ತಾನರು ಸೇರಿಕೊಂಡಿದ್ದಾರೆ ಎಂದು ಮುಂತಾಗಿ ಕೇಂದ್ರ ನಾಯಕರು ಲಘುವಾಗಿ ಮಾತಾಡಿದ್ದಾರೆ. ಈ ಧೋರಣೆ ನಿಜಕ್ಕೂ ಅಕ್ಷಮ್ಯ. ಯಾಕೆಂದರೆ ಪ್ರತಿಭಟನಾ ನಿರತ ರೈತರು ಈ ಸಂಚಿನ ನುಡಿಗಳನ್ನು ಮುಂಚಿತವಾಗಿಯೇ ಊಹಿಸಿದವರಾಗಿದ್ದಾರೆ. ಅವರ ಪ್ರತಿಭಟನೆಯಲ್ಲಿ ಕೇಂದ್ರಸರ್ಕಾರ ಆರೋಪಿಸಿರುವ ಯಾವ ವಿರೋಧ ಪಕ್ಷದವರಾಗಲಿ, ಯಾವ ದೇಶವಿರೋಧಿ ದುಷ್ಕರ್ಮಿಗಳಾಗಲಿ ತೂರಿ ಬರದಂತೆ ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ.

ಈಗ ರೈತರು ಸಾಕಷ್ಟು ಪ್ರಬುದ್ಧರಾಗಿದ್ದಾರೆ. ಅವರ ಆಗುಹೋಗುಗಳನ್ನು ಅವರೇ ಕುಳಿತು ಚರ್ಚಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಮರ್ಥರವರು. ಹೊಗಳಿಕೆಯ ಮೂಲಕ ಕಾಗೆಯ ಬಾಯಿ ಮಾಂಸದ ತುಂಡನ್ನು ಕಸಿಯುವ ಗುಳ್ಳೆ ನರಿಯಂತ ರಾಜಕಾರಣಿಗಳ ಮಸಲತ್ತು ಏನೆಂಬುದನ್ನು ಅವರು ಚೆನ್ನಾಗಿ ಬಲ್ಲರು. ಇದು ಶತಮಾನಗಳ ಅನುಭವದಿಂದ ಬಂದ ಪಾಠ. ಅವರಿಗೀಗ ಬೇರೆಯವರ ನೆರವು ಬೇಕಾಗಿಲ್ಲ. ಯಾವ ದೇಶದಲ್ಲಿ ರೈತರು, ದಲಿತ ಮಹಿಳೆಯರು, ಮಕ್ಕಳು ಶಾಂತಿ ಸಮಾಧಾನ ನೆಮ್ಮದಿಯಿಂದ ಬದುಕು ಸಾಗಿಸುತ್ತಾರೋ ಆ ದೇಶ ಸುಭಿಕ್ಷವಾಗಿರುತ್ತದೆ ಎಂಬುದು ನಮ್ಮ ಪೂರ್ವಿಕರ ಅನುಭವದ ನುಡಿ. ಆದರೆ ಅದಕ್ಕೀಗ ಭಂಗ ಬರುತ್ತಿದೆ.

ಆದ್ದರಿಂದ ಪ್ರಸ್ತುತ ಪ್ರಧಾನಿ ಮೋದಿ ಅವರ ಬಿಜೆಪಿ ಸರ್ಕಾರವು ತನ್ನ ಹಮ್ಮು-ಬಿಮ್ಮುಗಳನ್ನು ಬದಿಗಿಟ್ಟು ರೈತ ನಾಯಕರನ್ನು ಆಹ್ವಾನಿಸಿ ತಾವು ಕೈಗೊಂಡ ರೈತ ವಿರೋಧಿ ಮಸೂದೆಗಳನ್ನು ಬೇಷರತ್ತಾಗಿ ಹಿಂದೆ ತೆಗೆದುಕೊಳ್ಳಬೇಕು. ಬಾಯಿ ಮಾತಿಗೆ ಬದಲಾಗಿ ಬೆಂಬಲ ಬೆಲೆಗೆ ಲಿಖಿತ ವಾಗ್ದಾನ ನೀಡಬೇಕು. ಹಾಗೂ ಇದುವರೆಗೂ ತಮಗೆ ನೀಡಿದ ತೊಂದರೆಗೆ ಕ್ಷಮೆ ಇರಲಿ ಎಂದೂ ತನ್ನ ದೊಡ್ಡತನವನ್ನು ಮೆರೆಯಬೇಕು.

  • ಪ್ರೊ. ಶಿವರಾಮಯ್ಯ

ಕನ್ನಡ ಪ್ರಾಧ್ಯಾಪಕರಾಗಿ ನಿವೃತ್ತಿ. ತಮ್ಮ ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳ ಜೊತೆಗೆ ಜನಪರ ಹೋರಾಟಗಳಲ್ಲಿ ಗುರುತಿಸಿಕೊಂಡವರು.


ಇದನ್ನೂ ಓದಿ: ಮೋದಿಯವರ ಅಹಂ ದೊಡ್ಡದೋ, ರೈತಶಕ್ತಿ ದೊಡ್ಡದೋ ತೀರ್ಮಾನವಾಗಲಿದೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...