Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...