Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...