Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...