Homeಚಳವಳಿರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ರೈತ ಹೋರಾಟ: ಜಾತಿ ಕಟ್ಟುಪಾಡುಗಳನ್ನು ಮುರಿಯುತ್ತಿರುವ ಮಹಾಪಂಚಾಯತ್!

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಮನವಿ ಮಾಡಿದ್ದಾರೆ.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸುವ ರೈತರು ದೇಶಾದ್ಯಂತ ಪ್ರತಿಭಟನೆ ವಿಸ್ತರಿಸುವ ಯೋಜನೆಯ ಭಾಗವಾಗಿ ದಲಿತರೊಂದಿಗೆ ಕೈಜೋಡಿಸುತ್ತಿದ್ದಾರೆ. ರೈತ ಪ್ರತಿಭಟನೆ, ಮಹಾಪಂಚಾಯತ್ ಜಾತಿ ಕಟ್ಟುಪಾಡು ಮುರಿಯುತ್ತಿವೆ. ಜೊತೆಗೆ ಪ್ರತಿಭಟನೆಗೆ ವಿಶಾಲವಾದ ನೆಲೆಯನ್ನು ನೀಡುವುದು ಇವುಗಳ ಉದ್ದೇಶವಾಗಿದೆ.

ಹರಿಯಾಣದ ಹಿಸಾರ್ ಜಿಲ್ಲೆಯ ಬಾರ್ವಾಲಾ ಪಟ್ಟಣದಲ್ಲಿ ಶನಿವಾರ(ಫೆ.20) ದಲಿತರೊಂದಿಗೆ ಮಹಾಪಂಚಾಯತ್ ನಡೆಯಿತು. ಇದರಲ್ಲಿ ಕೃಷಿ ಒಕ್ಕೂಟದ ಮುಖಂಡ ಗುರ್ನಮ್ ಚಧುನಿ ಭಾಗವಹಿಸಿದ್ದರು. ಹರಿಯಾಣದ ಜನಸಂಖ್ಯೆಯಲ್ಲಿ ಶೇಕಡಾ 20 ರಷ್ಟು ಜನ ಪರಿಶಿಷ್ಟ ಜಾತಿಗೆ  ಸೇರಿದವರಿದ್ದಾರೆ.

ಮಹಾಪಂಚಾಯತ್‌ನಲ್ಲಿ ರೈತರು ತಮ್ಮ ಮನೆಗಳಲ್ಲಿ ಅಂಬೇಡ್ಕರ್ ಫೋಟೊ, ದಲಿತರು ತಮ್ಮ ಮನೆಗಳಲ್ಲಿ  ಸರ್ ಛೋಟು ರಾಮ್ ಫೋಟೊ ಹಾಕುವಂತೆ ಮನವಿ ಮಾಡಲಾಯಿತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಸರ್‌ ಛೋಟು ರಾಮ್ ಸ್ಪೂರ್ತಿ – ರೈತ ಮುಖಂಡರು

ಮಹಾಪಂಚಾಯತ್‌ನಲ್ಲಿ ಮಾತನಾಡಿದ ರೈತ ಮುಖಂಡ ಗುರ್ನಾಮ್ ಚಧುನಿ, ರೈತರು ಮತ್ತು ದಲಿತರ ನಡುವೆ ಹೆಚ್ಚಿನ ಒಗ್ಗಟ್ಟು ಮೂಡಿಸಬೇಕೆಂದು ಕರೆ ನೀಡಿದರು. ರೈತರು ತಮ್ಮ ಮನೆಗಳಲ್ಲಿ ದಲಿತ ಐಕಾನ್ ಬಿ.ಆರ್.ಅಂಬೇಡ್ಕರ್ ಅವರ ಚಿತ್ರಗಳನ್ನು ಹೊಂದುವಂತೆ ನಿರ್ಣಯವನ್ನು ಅಂಗೀಕರಿಸಲಾಯಿತು. ಬ್ರಿಟೀಷ್ ಭಾರತದ ಪ್ರಮುಖ ರೈತ ಮುಖಂಡ ಸರ್ ಛೋಟು ರಾಮ್ ಅವರ ಚಿತ್ರಗಳನ್ನು ದಲಿತರು ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುವಂತೆ ಕೇಳಲಾಯಿತು.

“ನಮ್ಮ ಹೋರಾಟವು ಸರ್ಕಾರದ ವಿರುದ್ಧ ಮಾತ್ರವಲ್ಲದೆ ಬಂಡವಾಳಶಾಹಿಗಳ ವಿರುದ್ಧವೂ ಆಗಿದೆ” ಎಂದು ಚಧುನಿ ಹೇಳಿದರು. “ಸರ್ಕಾರವು ಇಲ್ಲಿಯವರೆಗೆ ನಮ್ಮನ್ನು ವಿಭಜಿಸುತ್ತ ಬಂದಿದೆ. ಕೆಲವೊಮ್ಮೆ ಜಾತಿಯ ಹೆಸರಿನಲ್ಲಿ ಅಥವಾ ಕೆಲವೊಮ್ಮೆ ಧರ್ಮದ ಹೆಸರಿನಲ್ಲಿ ಈ ವಿಭಜನೆ ನಡೆಯುತ್ತಿದೆ. ಸರ್ಕಾರದ ಈ ಪಿತೂರಿಯನ್ನು ಅರ್ಥಮಾಡಿಕೊಳ್ಳಿ” ಎಂದು ರೈತರಿಗೆ ಕಿವಿಮಾತು ಹೇಳಿದರು.

’ಇನ್ನು ಮುಂದೆ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಇಂತಹ ಮಹಾಪಂಚಾಯತ್‌ಗಳ ಅಗತ್ಯವಿಲ್ಲ. ಪಂಜಾಬ್ ಮತ್ತು ಹರಿಯಾಣಗಳಿಗೆ ಕೃಷಿ ಕಾನೂನುಗಳ ಬಗ್ಗೆ ತಿಳಿದಿದೆ. ಈಗ ಇತರ ರಾಜ್ಯಗಳತ್ತ ಗಮನ ಹರಿಸಬೇಕಾಗಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ರೈತ ಹೋರಾಟ: 24 ವರ್ಷದ ಯುವಕ ಬಲ್ಜಿತ್ ಸಿಂಗ್ ಅವಿರೋಧವಾಗಿ ಸರ್‌ಪಂಚ್‌ ಆದ ಕಥೆ

ಮೂರು ಕೃಷಿ ಕಾನೂನುಗಳ ವಿರುದ್ಧದ ಯುದ್ಧವು ರೈತರಿಗೆ ಮಾತ್ರವಲ್ಲ ಎಂದು ಕಾರ್ಮಿಕರು ಅರ್ಥಮಾಡಿಕೊಳ್ಳಬೇಕು. ಕಾರ್ಮಿಕ ವರ್ಗವು ಹೆಚ್ಚು ತೊಂದರೆ ಅನುಭವಿಸುತ್ತಿದೆ. ಆದ್ದರಿಂದ, ಈ ಆಂದೋಲನಕ್ಕೆ ಹೆಚ್ಚು ಹೆಚ್ಚು ಕೊಡುಗೆ ನೀಡುವಂತೆ ನಾನು ಕಾರ್ಮಿಕ ವರ್ಗವನ್ನು ವಿನಂತಿಸುತ್ತೇನೆ ” ಎಂದು ಮನವಿ ಮಾಡಿದ್ದಾರೆ.

ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಯಾರಿಗಾದರೂ ಮತ ಚಲಾಯಿಸುವಂತೆ ಚಧುನಿ ಕೇಳಿಕೊಂಡರು.

ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು ಮತ್ತು ಎಂಎಸ್‌ಪಿ ಖಾತ್ರಿಗೊಳಿಸುವ ಕಾನೂನು ಜಾರಿಗೊಳಿಸಬೇಕೆಂದು ಆಗ್ರಹಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ದೆಹಲಿ ಗಡಿಗಳ ಜೊತೆಗೆ ಉತ್ತರಪ್ರದೇಶ, ಹರಿಯಾಣ, ರಾಜಸ್ಥಾನ ಮತ್ತು ಪಂಜಾಬ್‌ಗಳಲ್ಲಿ ರೈತರ ಬೃಹತ್ ಮಹಾಪಂಚಾಯತ್  ನಡೆಯುತ್ತಿವೆ.

ರಾಜ್ಯದಲ್ಲಿಯೂ ಸಮಾಜವಾದಿ ಹೋರಾಟದ ಜಿಲ್ಲೆ, ಮುಖ್ಯಮಂತ್ರಿಗಳ ತವರೂರು ಶಿವಮೊಗ್ಗದಲ್ಲಿ ಮೊದಲ ಬೃಹತ್ ‘ರೈತ ಮಹಾಪಂಚಾಯತ್’ ನಡೆಸಲು ವೇದಿಕೆ ಸಜ್ಜಾಗಿದೆ. ರೈತ ಸಂಘಟನೆಗಳ ಮತ್ತು ಪ್ರಗತಿಪರ ಸಂಘಟನೆಗಳ ಮಹಾಸಭೆ ನಡೆದಿದ್ದು, ಮಾರ್ಚ್ 15 ರಂದು ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾ ಪಂಚಾಯತ್ ನಡೆಸಲು ತೀರ್ಮಾನಿಸಲಾಗಿದೆ.


ಇದನ್ನೂ ಓದಿ: ಮಾರ್ಚ್ 15 ಕ್ಕೆ ಶಿವಮೊಗ್ಗದಲ್ಲಿ ಬೃಹತ್ ರೈತ ಮಹಾಪಂಚಾಯತ್: ಚಳವಳಿ ಬಲಪಡಿಸಲು ರೈತಮುಖಂಡರ ಒಕ್ಕೊರಲ ಸಂಕಲ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...