Homeಚಳವಳಿರೈತ ಹೋರಾಟ: ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

ರೈತ ಹೋರಾಟ: ಪ್ರತಿಭಟನಾ ಸ್ಥಳವನ್ನು ತೊರೆಯುವುದಿಲ್ಲ ಎಂದ ನಿಹಾಂಗ್ ಸದಸ್ಯರು

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ರದ್ದತಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ದೆಹಲಿ-ಹರಿಯಾಣ ಗಡಿಯಲ್ಲಿರುವ ನಿಹಾಂಗ್ ಸಮೂಹದ ಸದಸ್ಯರು ಪ್ರತಿಭಟನಾ ಸ್ಥಳವನ್ನು ತೊರೆಯುವ ಸಾಧ್ಯತೆಯಿಲ್ಲ ಎಂದು ಹೇಳಿದ್ದಾರೆ.

“ಸಿಂಘು ಗಡಿಯಲ್ಲಿ ಬುಧವಾರ ಧಾರ್ಮಿಕ ಕ್ರಮದ ಮಹಾಪಂಚಾಯತ್ ನಡೆದಿದ್ದು, ಗುರುವಾರ ಸಾಮೂಹಿಕ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುವುದು” ಎಂದು ನಿಹಾಂಗ್‌ಗಳ ಮುಖಂಡರೊಬ್ಬರು ತಿಳಿಸಿದ್ದಾರೆ.

“ನಾವು ಸಿಂಘು ಗಡಿಯನ್ನು ಬಿಟ್ಟು ಹೋಗುವ ಸಾಧ್ಯತೆಯಿಲ್ಲ. ನಾವು ರೈತರನ್ನು ಬೆಂಬಲಿಸಲು ಇಲ್ಲಿದ್ದೇವೆ” ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಕೊಲೆ: ನಿಹಾಂಗ್‌‌ ಬೆಂಬಲಿತ ವ್ಯಕ್ತಿ ಪೊಲೀಸರಿಗೆ ಶರಣು

ದಲಿತ ಯುವಕ ಲಖ್ಬೀರ್ ಸಿಂಗ್ ಹತ್ಯೆ ಪ್ರಕರಣದಲ್ಲಿ ನಿಹಾಂಗ್ ಸಿಖ್ಖರನ್ನು ಬಂಧಿಸಿದ ಮೇಲೆ ನಾವು ಪ್ರತಿಭಟನಾ ಸ್ಥಳವನ್ನು ತೊರೆಯುವುದಾಗಿ ಹಲವರು ಹೇಳಿದ್ದರು. ಈ ಕುರಿತು ಧಾರ್ಮಿಕ ಸಭೆಗಳನ್ನು ನಡೆಸಲಾಗಿತ್ತು. ಬುಧವಾರ (ಅ.27) ಧಾರ್ಮಿಕ ಮಹಾಪಂಚಾಯತ್ ನಡೆದಿದ್ದು, ಇಂದು ನಿರ್ಧಾರ ಘೋಷಿಸಲಾಗುತ್ತದೆ.

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದ ನೇತೃತ್ವ ವಹಿಸಿರುವ ರೈತ ಸಂಘಗಳ ಒಕ್ಕೂಟ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ, ಸಿಖ್ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ ದಲಿತ ಯುವಕನನ್ನು ಹತ್ಯೆ ಮಾಡಿದ್ದ ನಿಹಾಂಗ್‌ಗಳನ್ನು ಪ್ರತಿಭಟನಾ ಸ್ಥಳವನ್ನು ಬಿಟ್ಟು ಹೋಗುವಂತೆ ಹೇಳಿತ್ತು.

ಪಂಜಾಬ್‌ನ ತರನ್ ತರನ್ ಜಿಲ್ಲೆಯ ಚೀಮಾ ಕಲಾನ್ ಗ್ರಾಮದ 35 ವರ್ಷದ ದಲಿತ ಯುವಕ ಲಖ್ಬೀರ್ ಸಿಂಗ್  ಅಕ್ಟೋಬರ್ 15 ರಂದು ಸಿಂಘು ಗಡಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಸಿಖ್ ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ ಆರೋಪದಲ್ಲಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಇಬ್ಬರು ನಿಹಾಂಗ್ ಸದಸ್ಯರನ್ನು ಬಂಧಿಸಲಾಗಿದೆ .ಸಂಪೂರ್ಣ ತನಿಖೆಗೆ ಸಂಯುಕ್ತ ಕಿಸಾನ್ ಮೋರ್ಚ ಮತ್ತು ಸಂತ್ರಸ್ತರ ಕುಟುಂಬ ಆಗ್ರಹಿಸಿದೆ.

ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಿಹಾಂಗ್ ಸಿಖ್ ಸರಬ್ಜಿತ್ ಸಿಂಗ್ ಪದೇ ಪದೇ ಮೃತ ಲಖ್ಬೀರ್‌ ಸಿಂಗ್ ಗ್ರಾಮಕ್ಕೆ ಭೇಟಿ ನೀಡಿರುವದನ್ನು ಗ್ರಾಮದ ನಿವಾಸಿಗಳು ದೃಢಪಡಿಸಿದ್ದಾರೆ. ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಬಿಜೆಪಿ ಸಚಿವರೊಂದಿಗೆ ಸಭೆ ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ.

“ನಾವು ಈ ವರ್ಷದ ಜುಲೈ ತಿಂಗಳಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿ ಇತರ ಬಿಜೆಪಿ ಮುಖಂಡರನ್ನು ರಹಸ್ಯವಾಗಿ ಭೇಟಿಯಾಗಿದ್ದು ನಿಜ. ಸಿಂಘು ಗಡಿಯಲ್ಲಿನಲ್ಲಿ ಧರಣಿ ನಿಲ್ಲಿಸಲು 10 ಲಕ್ಷ ರೂ ಮತ್ತು ಕುದುರೆಗಳ ಆಮಿಷವೊಡ್ಡಿದ್ದರು” ಎಂದು ನಿಹಾಂಗ್ ಬಾಬಾ ಅಮನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು:ನಿಹಾಂಗ್ ಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...