Homeಚಳವಳಿರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

ರೈತರ ಕರಾಳ ದಿನ ಆಚರಣೆಗೆ ಭಾರಿ ಬೆಂಬಲ- ಎಲ್ಲೆಡೆ ಕಪ್ಪು ಧ್ವಜಗಳ ಹಾರಾಟ

- Advertisement -
- Advertisement -

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ತಮ್ಮ ಹೋರಾಟ ಮುಂದುವರೆಸಿರುವ ರೈತರು ಇಂದು ಕರಾಳ ದಿನ ಆಚರಣೆಗೆ ಕರೆ ನೀಡಿದ್ದು, ಭಾರಿ ಬೆಂಬಲ ವ್ಯಕ್ತವಾಗಿದೆ. ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಪ್ಪು ಬಾವುಟಗಳು ಹಾರಾಡುತ್ತಿವೆ.

ದೆಹಲಿಯ ಪ್ರತಿಭಟನಾ ಸ್ಥಳಗಳಲ್ಲಿನ ಗಡಿಗಳಿಗೆ ಈಗಾಗಲೇ ಸಾವಿರಾರು ರೈತರು ಸೇರಿಕೊಂಡಿದ್ದಾರೆ. ದೇಶದಲ್ಲಿ ಕೊರೊನಾ ಪರಿಸ್ಥಿತಿಯಿಂದ ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಇದರ ನಡುವೆಯೇ ರೈತರು ಕರಾಳ ದಿನ ಆಚರಣೆಗೆ ಕರೆ ನೀಡಿದ್ದಾರೆ. ರೈತರ ಕರೆಗೆ ದೇಶಾದ್ಯಂತ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಕೊರೊನಾ ಘಜಿಯಾಬಾದ್‌ನ ಗಾಝಿಪುರ್‌ ಗಡಿಯಲ್ಲಿನ ರೈತರು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದ್ದಾರೆ.

“ನಾವು ಕಪ್ಪು ಧ್ವಜದ ಜೊತೆಗೆ ತ್ರಿವರ್ಣವನ್ನು ಸಹ ಹಾರಿಸುತ್ತಿದ್ದೇವೆ. ಪ್ರತಿಭಟನೆಗೆ 6 ತಿಂಗಳು ತುಂಬುತ್ತಿವೆ. ಆದರೆ ಸರ್ಕಾರ ನಮ್ಮ ಬೇಡಿಕೆಯನ್ನು ಕೇಳುತ್ತಿಲ್ಲ. ಆದ್ದರಿಂದ ರೈತರು ಕಪ್ಪು ಧ್ವಜಗಳನ್ನು ಹಾರಿಸುತ್ತಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಸಲಾಗುತ್ತಿದೆ. ನಾವು ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿದ್ದೇವೆ. ಜನರು ಎಲ್ಲಿದ್ದಾರೋ ಅಲ್ಲಿಂದಲೇ ಧ್ವಜಗಳನ್ನು ಹಾರಿಸುತ್ತಾ ಪ್ರತಿಭಟನೆಗೆ ಬೆಂಬಲ ನೀಡುತ್ತಿದ್ದಾರೆ” ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: ಮಾಸ್ಟರ್‌ಸ್ಟ್ರೋಕ್’: ಪ್ರಧಾನಿ ಮೋದಿ ಬಗ್ಗೆ ’ನಿರುದ್ಯೋಗಿ ಭಕ್ತ’ನ 56 ಪುಟಗಳ ಖಾಲಿ ಪುಸ್ತಕ!

ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್‌ನ ರೈತರು ಇಂದು ‘ಕಪ್ಪು ದಿನ’ ಆಚರಿಸಿ, ತಮ್ಮ ಮನೆಗಳ ಮೇಲೆ ಮತ್ತು ತಮ್ಮ ಟ್ರಾಕ್ಟರುಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸಿದ್ದಾರೆ.

Punjab: People put up black flags at their houses and on their tractors in Chabba village of Amritsar, as the farmers protesting against the Farm Laws, observe 'Black Day' today.
PC: ANI

ಟ್ವಿಟರ್‌ನಲ್ಲಿ ರೈತರಿಗೆ ಕರಾಳದಿನ (#Black_Day_Of_Farmers) ಮತ್ತು ರಾಷ್ಟ್ರೀಯ ಕರಾಳ ದಿನ ( #NationalBlackDay) ಹ್ಯಾಷ್‌ಟ್ಯಾಗ್‌ ಟ್ರೆಂಡಿಂಗ್ ಆಗಿದದೆ. ಲಕ್ಷಾಂತರ ಮಂದಿ ಟ್ವೀಟ್ ಮಾಡಿ, ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡಿ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

’ಕಾನೂನನ್ನು ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಕಾನೂನುಬಾಹಿರ ಚಟುವಟಿಕ ಅವಕಾಶವಿಲ್ಲ’ ಎಂದು ದೆಹಲಿ ಪೊಲೀಸ್ ಪಿಆರ್‌ಒ ಚಿನ್ಮಯ್ ಬಿಸ್ವಾಲ್ ಹೇಳಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳು ಸೇರಿದಂತೆ ಎಲ್ಲಾ ಗಡಿ ಕೇಂದ್ರಗಳಲ್ಲಿ ಪೊಲೀಸ್ ಪಡೆಗಳನ್ನು ಈಗಾಗಲೇ ನಿಯೋಜಿಸಲಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ಸೆಂಟ್ರಲ್‌ ವಿಸ್ತಾ ಯೋಜನೆ ಮತ್ತು ದೆಹಲಿಯ ಮೂಲಕ ಭಾರತವನ್ನು ವಶಪಡಿಸಿಕೊಳ್ಳುವ ಬಿಜೆಪಿ ಸರ್ಕಾರದ ಆಕ್ರಮಣಕಾರಿ ತಂತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...