Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು ಶುಕ್ರವಾರ ತೆರವುಗೊಳಿಸಲು ಆರಂಭಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ನಡೆದ ಟ್ಯ್ರಾಕ್ಟರ್‌ ರ್‍ಯಾಲಿ ವೇಳೆ ಅನಪೇಕ್ಷಿತ ಘಟನೆಗಳು ನಡೆದಿದ್ದವು. ದೀಪ್ ಸಿಧು ನೇತೃತ್ವದ ಒಂದು ರೈತ ಗುಂಪು ಉದ್ದೇಶಿತ ಮಾರ್ಗ ಉಲ್ಲಂಘಿಸಿ ಕೆಂಪುಕೋಟೆಗೆ ತೆರಳಿ ಧಾರ್ಮಿಕ ಬಾವುಟ ಹಾರಿಸಿತ್ತು. ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು, ಸಿಂಘು, ಗಾಜಿಪುರ ಹಾಗೂ ಟಿಕ್ರಿ ಗಡಿಗಳಲ್ಲಿ ಕಬ್ಬಿಣದ ಮೊಳೆಗಳು, ಸಿಮೆಂಟ್‌ ಬ್ಯಾರಿಕೇಡ್‌, ಚೂಪಾದ ತಂತಿ, ಕಬ್ಬಿಣದ ಬ್ಯಾರಿಕೇಡ್‌ ಸೇರಿದಂತೆ ಐದು ಪದರಗಳಲ್ಲಿ ಬ್ಯಾರಿಕೇಡ್‌ ನಿರ್ಮಿಸಿದ್ದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಗಾಜಿಪುರ ಗಡಿಯಿಂದ ಎತ್ತಂಗಡಿ ಮಾಡಿಸಲು ಪೊಲೀಸರು ಪ್ರಯತ್ನಿಸಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಗಾಜಿಪುರ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಗಾಜಿಪುರದ NH9 ಹೆದ್ದಾರಿ ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಮೊಳೆಗಳನ್ನು ಪೊಲೀಸ್‌ ಅಧಿಕಾರಿಗಳು ಮತ್ತು ಕಾರ್ಮಿಕರು ತೆಗೆಯಲಾರಂಭಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌, ’ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ರಸ್ತೆಗಳು ತೆರೆದರೆ ನಾವು ನಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಂಸತ್ತಿಗೆ ಹೋಗುತ್ತೇವೆ. ನಮ್ಮ ಟ್ಯ್ರಾಕ್ಟರ್‌ಗಳು ಮೊದಲು ದೆಹಲಿಗೆ ಹೋಗುತ್ತವೆ. ರಸ್ತೆ ತಡೆ ನಮ್ಮ ಪ್ರತಿಭಟನೆಯ ಭಾಗವಲ್ಲ. ನಾವು ರಸ್ತೆಯನ್ನು ನಿರ್ಬಂಧಿಸಿಲ್ಲ” ಎಂದಿದ್ದಾರೆ.

ಟಿಕ್ರಿ ಗಡಿಯಲ್ಲಿಯೂ ಗುರುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುತ್ತಿರುವ ದೃಶ್ಯಗಳನ್ನು ಎಎನ್‌ಐ ಟ್ವಿಟ್‌ ಮಾಡಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ಅಕ್ಟೋಬರ್ 21 ರ ಹೇಳಿಕೆಯ ನಂತರ ಈ ಕ್ರಮ ಜರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂದು ಅಕ್ಟೋಬರ್‌ 21ರಂದು ಸುಪ್ರೀಂ ಕೋರ್ಟ್‌‌ ಪ್ರತಿಭಟನಾ ರೈತರನ್ನುದ್ದೇಶಿಸಿ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಹಾಕಲಾಗಿದ್ದ ಬಹು ಹಂತದ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆರವುಗೊಳಿಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...