Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು ಶುಕ್ರವಾರ ತೆರವುಗೊಳಿಸಲು ಆರಂಭಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ನಡೆದ ಟ್ಯ್ರಾಕ್ಟರ್‌ ರ್‍ಯಾಲಿ ವೇಳೆ ಅನಪೇಕ್ಷಿತ ಘಟನೆಗಳು ನಡೆದಿದ್ದವು. ದೀಪ್ ಸಿಧು ನೇತೃತ್ವದ ಒಂದು ರೈತ ಗುಂಪು ಉದ್ದೇಶಿತ ಮಾರ್ಗ ಉಲ್ಲಂಘಿಸಿ ಕೆಂಪುಕೋಟೆಗೆ ತೆರಳಿ ಧಾರ್ಮಿಕ ಬಾವುಟ ಹಾರಿಸಿತ್ತು. ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು, ಸಿಂಘು, ಗಾಜಿಪುರ ಹಾಗೂ ಟಿಕ್ರಿ ಗಡಿಗಳಲ್ಲಿ ಕಬ್ಬಿಣದ ಮೊಳೆಗಳು, ಸಿಮೆಂಟ್‌ ಬ್ಯಾರಿಕೇಡ್‌, ಚೂಪಾದ ತಂತಿ, ಕಬ್ಬಿಣದ ಬ್ಯಾರಿಕೇಡ್‌ ಸೇರಿದಂತೆ ಐದು ಪದರಗಳಲ್ಲಿ ಬ್ಯಾರಿಕೇಡ್‌ ನಿರ್ಮಿಸಿದ್ದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಗಾಜಿಪುರ ಗಡಿಯಿಂದ ಎತ್ತಂಗಡಿ ಮಾಡಿಸಲು ಪೊಲೀಸರು ಪ್ರಯತ್ನಿಸಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಗಾಜಿಪುರ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಗಾಜಿಪುರದ NH9 ಹೆದ್ದಾರಿ ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಮೊಳೆಗಳನ್ನು ಪೊಲೀಸ್‌ ಅಧಿಕಾರಿಗಳು ಮತ್ತು ಕಾರ್ಮಿಕರು ತೆಗೆಯಲಾರಂಭಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌, ’ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ರಸ್ತೆಗಳು ತೆರೆದರೆ ನಾವು ನಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಂಸತ್ತಿಗೆ ಹೋಗುತ್ತೇವೆ. ನಮ್ಮ ಟ್ಯ್ರಾಕ್ಟರ್‌ಗಳು ಮೊದಲು ದೆಹಲಿಗೆ ಹೋಗುತ್ತವೆ. ರಸ್ತೆ ತಡೆ ನಮ್ಮ ಪ್ರತಿಭಟನೆಯ ಭಾಗವಲ್ಲ. ನಾವು ರಸ್ತೆಯನ್ನು ನಿರ್ಬಂಧಿಸಿಲ್ಲ” ಎಂದಿದ್ದಾರೆ.

ಟಿಕ್ರಿ ಗಡಿಯಲ್ಲಿಯೂ ಗುರುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುತ್ತಿರುವ ದೃಶ್ಯಗಳನ್ನು ಎಎನ್‌ಐ ಟ್ವಿಟ್‌ ಮಾಡಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ಅಕ್ಟೋಬರ್ 21 ರ ಹೇಳಿಕೆಯ ನಂತರ ಈ ಕ್ರಮ ಜರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂದು ಅಕ್ಟೋಬರ್‌ 21ರಂದು ಸುಪ್ರೀಂ ಕೋರ್ಟ್‌‌ ಪ್ರತಿಭಟನಾ ರೈತರನ್ನುದ್ದೇಶಿಸಿ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಹಾಕಲಾಗಿದ್ದ ಬಹು ಹಂತದ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆರವುಗೊಳಿಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...