Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು ಶುಕ್ರವಾರ ತೆರವುಗೊಳಿಸಲು ಆರಂಭಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ನಡೆದ ಟ್ಯ್ರಾಕ್ಟರ್‌ ರ್‍ಯಾಲಿ ವೇಳೆ ಅನಪೇಕ್ಷಿತ ಘಟನೆಗಳು ನಡೆದಿದ್ದವು. ದೀಪ್ ಸಿಧು ನೇತೃತ್ವದ ಒಂದು ರೈತ ಗುಂಪು ಉದ್ದೇಶಿತ ಮಾರ್ಗ ಉಲ್ಲಂಘಿಸಿ ಕೆಂಪುಕೋಟೆಗೆ ತೆರಳಿ ಧಾರ್ಮಿಕ ಬಾವುಟ ಹಾರಿಸಿತ್ತು. ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು, ಸಿಂಘು, ಗಾಜಿಪುರ ಹಾಗೂ ಟಿಕ್ರಿ ಗಡಿಗಳಲ್ಲಿ ಕಬ್ಬಿಣದ ಮೊಳೆಗಳು, ಸಿಮೆಂಟ್‌ ಬ್ಯಾರಿಕೇಡ್‌, ಚೂಪಾದ ತಂತಿ, ಕಬ್ಬಿಣದ ಬ್ಯಾರಿಕೇಡ್‌ ಸೇರಿದಂತೆ ಐದು ಪದರಗಳಲ್ಲಿ ಬ್ಯಾರಿಕೇಡ್‌ ನಿರ್ಮಿಸಿದ್ದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಗಾಜಿಪುರ ಗಡಿಯಿಂದ ಎತ್ತಂಗಡಿ ಮಾಡಿಸಲು ಪೊಲೀಸರು ಪ್ರಯತ್ನಿಸಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಗಾಜಿಪುರ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಗಾಜಿಪುರದ NH9 ಹೆದ್ದಾರಿ ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಮೊಳೆಗಳನ್ನು ಪೊಲೀಸ್‌ ಅಧಿಕಾರಿಗಳು ಮತ್ತು ಕಾರ್ಮಿಕರು ತೆಗೆಯಲಾರಂಭಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌, ’ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ರಸ್ತೆಗಳು ತೆರೆದರೆ ನಾವು ನಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಂಸತ್ತಿಗೆ ಹೋಗುತ್ತೇವೆ. ನಮ್ಮ ಟ್ಯ್ರಾಕ್ಟರ್‌ಗಳು ಮೊದಲು ದೆಹಲಿಗೆ ಹೋಗುತ್ತವೆ. ರಸ್ತೆ ತಡೆ ನಮ್ಮ ಪ್ರತಿಭಟನೆಯ ಭಾಗವಲ್ಲ. ನಾವು ರಸ್ತೆಯನ್ನು ನಿರ್ಬಂಧಿಸಿಲ್ಲ” ಎಂದಿದ್ದಾರೆ.

ಟಿಕ್ರಿ ಗಡಿಯಲ್ಲಿಯೂ ಗುರುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುತ್ತಿರುವ ದೃಶ್ಯಗಳನ್ನು ಎಎನ್‌ಐ ಟ್ವಿಟ್‌ ಮಾಡಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ಅಕ್ಟೋಬರ್ 21 ರ ಹೇಳಿಕೆಯ ನಂತರ ಈ ಕ್ರಮ ಜರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂದು ಅಕ್ಟೋಬರ್‌ 21ರಂದು ಸುಪ್ರೀಂ ಕೋರ್ಟ್‌‌ ಪ್ರತಿಭಟನಾ ರೈತರನ್ನುದ್ದೇಶಿಸಿ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಹಾಕಲಾಗಿದ್ದ ಬಹು ಹಂತದ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆರವುಗೊಳಿಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...