Homeಚಳವಳಿರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

ರೈತ ಹೋರಾಟ: ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ ತೆರವುಗೊಳಿಸುತ್ತಿರುವ ಪೊಲೀಸರು

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ಕಳೆದ 11 ತಿಂಗಳಿನಿಂದ ಸಾವಿರಾರು ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿ ಗಡಿಗಳಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್‌ಗಳನ್ನು ದೆಹಲಿ ಪೊಲೀಸರು ಶುಕ್ರವಾರ ತೆರವುಗೊಳಿಸಲು ಆರಂಭಿಸಿದ್ದಾರೆ.

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26ರಂದು ನಡೆದ ಟ್ಯ್ರಾಕ್ಟರ್‌ ರ್‍ಯಾಲಿ ವೇಳೆ ಅನಪೇಕ್ಷಿತ ಘಟನೆಗಳು ನಡೆದಿದ್ದವು. ದೀಪ್ ಸಿಧು ನೇತೃತ್ವದ ಒಂದು ರೈತ ಗುಂಪು ಉದ್ದೇಶಿತ ಮಾರ್ಗ ಉಲ್ಲಂಘಿಸಿ ಕೆಂಪುಕೋಟೆಗೆ ತೆರಳಿ ಧಾರ್ಮಿಕ ಬಾವುಟ ಹಾರಿಸಿತ್ತು. ನಂತರ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಪೊಲೀಸರು, ಸಿಂಘು, ಗಾಜಿಪುರ ಹಾಗೂ ಟಿಕ್ರಿ ಗಡಿಗಳಲ್ಲಿ ಕಬ್ಬಿಣದ ಮೊಳೆಗಳು, ಸಿಮೆಂಟ್‌ ಬ್ಯಾರಿಕೇಡ್‌, ಚೂಪಾದ ತಂತಿ, ಕಬ್ಬಿಣದ ಬ್ಯಾರಿಕೇಡ್‌ ಸೇರಿದಂತೆ ಐದು ಪದರಗಳಲ್ಲಿ ಬ್ಯಾರಿಕೇಡ್‌ ನಿರ್ಮಿಸಿದ್ದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಗಾಜಿಪುರ ಗಡಿಯಿಂದ ಎತ್ತಂಗಡಿ ಮಾಡಿಸಲು ಪೊಲೀಸರು ಪ್ರಯತ್ನಿಸಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ರೈತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಗಾಜಿಪುರ ಗಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಗಾಜಿಪುರದ NH9 ಹೆದ್ದಾರಿ ರಸ್ತೆಗೆ ಹಾಕಲಾಗಿದ್ದ ಕಬ್ಬಿಣದ ಮೊಳೆಗಳನ್ನು ಪೊಲೀಸ್‌ ಅಧಿಕಾರಿಗಳು ಮತ್ತು ಕಾರ್ಮಿಕರು ತೆಗೆಯಲಾರಂಭಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಕುರಿತು ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್‌ ಟಿಕಾಯತ್‌, ’ರೈತರು ಎಲ್ಲಿ ಬೇಕಾದರೂ ಬೆಳೆಗಳನ್ನು ಮಾರಾಟ ಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದರು. ರಸ್ತೆಗಳು ತೆರೆದರೆ ನಾವು ನಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಂಸತ್ತಿಗೆ ಹೋಗುತ್ತೇವೆ. ನಮ್ಮ ಟ್ಯ್ರಾಕ್ಟರ್‌ಗಳು ಮೊದಲು ದೆಹಲಿಗೆ ಹೋಗುತ್ತವೆ. ರಸ್ತೆ ತಡೆ ನಮ್ಮ ಪ್ರತಿಭಟನೆಯ ಭಾಗವಲ್ಲ. ನಾವು ರಸ್ತೆಯನ್ನು ನಿರ್ಬಂಧಿಸಿಲ್ಲ” ಎಂದಿದ್ದಾರೆ.

ಟಿಕ್ರಿ ಗಡಿಯಲ್ಲಿಯೂ ಗುರುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ತೆರವುಗೊಳಿಸುತ್ತಿರುವ ದೃಶ್ಯಗಳನ್ನು ಎಎನ್‌ಐ ಟ್ವಿಟ್‌ ಮಾಡಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್‌ ಅಕ್ಟೋಬರ್ 21 ರ ಹೇಳಿಕೆಯ ನಂತರ ಈ ಕ್ರಮ ಜರುಗಿದೆ.

ಪ್ರತಿಭಟನಾಕಾರರು ಸಾರ್ವಜನಿಕ ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸುವಂತಿಲ್ಲ ಎಂದು ಅಕ್ಟೋಬರ್‌ 21ರಂದು ಸುಪ್ರೀಂ ಕೋರ್ಟ್‌‌ ಪ್ರತಿಭಟನಾ ರೈತರನ್ನುದ್ದೇಶಿಸಿ ಹೇಳಿಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಗಡಿಗಳಲ್ಲಿ ಹಾಕಲಾಗಿದ್ದ ಬಹು ಹಂತದ ಬ್ಯಾರಿಕೇಡ್‌ಗಳನ್ನು ಪೊಲೀಸರು ತೆರವುಗೊಳಿಸಲು ಮುಂದಾಗಿದ್ದಾರೆ.


ಇದನ್ನೂ ಓದಿ: ಲಸಿಕೆ ಖರೀದಿಗೆ ವಿದೇಶಿ ಬ್ಯಾಂಕ್‌ಗಳಿಂದ ಸಾಲ ಪಡೆಯಲು ಮುಂದಾದ ಭಾರತ: ಇಂಧನ ತೆರಿಗೆ ಎಲ್ಲಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...