ದೆಹಲಿಯ ಕೆಲವು ಭಾಗಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಾಷ್ಟ್ರ ರಾಜಧಾನಿ ಜನ ಪರದಾಡಬೇಕಾದ ಸ್ಥಿತಿ ಬಂದಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಇತ್ತ ಸಿಂಘು ಗಡಿ ಭಾಗದಲ್ಲೂ ಹೆಚ್ಚು ಮಳೆಯಾಗಿದ್ದು, ರೈತ ಹೋರಾಟಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ.
ಸಿಂಘು ಗಡಿಯಲ್ಲಿನ ರಸ್ತೆಗಲ್ಲಿ ಮಳೆ ನೀರು ತುಂಬಿಕೊಂಡಿದ್ದು, ರಸ್ತೆಗಳೇ ಸರಿಯಾಗಿ ಕಾಣಿಸುತ್ತಿಲ್ಲ. ರೈತರ ಹುಲ್ಲಿನ ಗುಡುಸಲುಗಳು ಭಾರಿ ಮಳೆಗೆ ಸಿಲುಕಿ ನಾಶವಾಗಿವೆ. ಜಡಿ ಮಳೆಗ ಸಿಲುಕಿದ ಪ್ರತಿಭಟನಾಕಾರರು ತಮ್ಮ ಟೆಂಟ್ಗಳು, ಗುಡಿಸಲುಗಳನ್ನು ರಕ್ಷಿಸಿಕೊಳ್ಳುವಲ್ಲಿ ತೊಡಗಿದ್ದಾರೆ.
ಇತ್ತ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ತೀವ್ರತೆಯ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: ರೈತ ಹೋರಾಟದ ಸಾವುಗಳ ಬಗ್ಗೆ ಮಾಹಿತಿ ಇಲ್ಲ ಎಂದ ಕೇಂದ್ರ: ಪಂಜಾಬ್ ಅಂಕಿ-ಅಂಶ ತಿಳಿಸಿದ್ದೇ ಬೇರೆ!
ಭಾರಿ ಮಳೆಗೆ ಯಮುನಾ ನದಿ ನೀರು ಅಪಾಯದ ಮಟ್ಟವನ್ನು ಸಮೀಪಿಸುತ್ತಿದೆ. ಭಾನುವಾರ ಬೆಳಿಗ್ಗೆ 205.30 ಮೀಟರ್ಗಳಷ್ಟು ನೀರು ತುಂಬಿಕೊಂಡಿದೆ. ಯಮುನಾ ನದಿಯ ನೀರಿನ ಅಪಾಯದ ಮಟ್ಟ 205.33 ಮೀಟರ್ ಇದೆ.
ನಗರದಲ್ಲಿ ಭಾರೀ ಮಳೆಯಿಂದಾಗಿ ಮಾಡೆಲ್ ಟೌನ್ನ ನೈನಿ ಕೆರೆಯ ಬಳಿ ವಾಸಿಸುತ್ತಿರುವ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಕಳೆದ ಕೆಲವು ದಿನಗಳಿಂದ ಕೆರೆಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (NDMC) ನಲ್ಲಿ ಈ ಬಗ್ಗೆ ಹಲವಾರು ದೂರುಗಳನ್ನು ದಾಖಲಿಸಲಾಗಿದೆ, ಆದರೆ, ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದನ್ನೂ ಓದಿ: ನೆರೆ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಟ್ಟಿದ್ದಾಗಿ ಬಿಜೆಪಿ ಜಾಹೀರಾತು: ವಾಸ್ತವದಲ್ಲಿ ಬೀದಿಯಲ್ಲಿರುವ ಸಂತ್ರಸ್ತರು