Homeಚಳವಳಿಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

ಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 6 ತಿಂಗಳಿನಿಂದ ರಾಜಸ್ಥಾನ-ಹರಿಯಾಣ ಗಡಿ ಶಹಜಾನ್‌ಪುರದಲ್ಲಿ ನಡೆಯುತ್ತಿರುವ  ರೈತ ಹೋರಾಟಕ್ಕೆ ಮಳೆ ಭಾರಿ ಪೆಟ್ಟು ನೀಡಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ರೈತ ಪ್ರತಿಭಟನಾಕಾರರ ಶೇಕಡಾ 90 ರಷ್ಟು ಗುಡಿಸಲುಗಳು ಮತ್ತು ಟೆಂಟ್‌ಗಳಿಗೆ ಹಾನಿ ಉಂಟಾಗಿದೆ.

ಬಿರುಗಾಳಿಗೆ ಟೆಂಟ್‌ಗಳಿಗೆ ಇದ್ದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಪ್ರತಿಭಟನಾ ನಿರತ ರೈತರು ನಿದ್ದೆಯಿಲ್ಲದೆ ರಾತ್ರಿಯನ್ನು ಕಳೆದಿದ್ದು, ಪ್ರತಿಭಟನಾ ಸ್ಥಳದ ಪಕ್ಕದ ಡಾಬಾ ಮತ್ತು ಕೆಲ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಘಟನೆಯಲ್ಲಿ ಟೆಂಟ್‌ ಬಿದ್ದು ಮೂವರು ರೈತರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಭಾರಿ ಮಳೆಗೆ ಟೆಂಟ್‌ಗಳು, ಗುಡಿಸಲುಗಳು, ಚಾಪೆ, ಕುರ್ಚಿಗಳು, ಧ್ವನಿವರ್ಧಕಗಳು, ಫ್ಯಾನ್‌, ಕೂಲರ್‌ಗಳು, ಹುಕ್ಕಾಗಳು, ಪಾತ್ರೆಗಳು ಇತ್ಯಾದಿ ದೆಹಲಿ-ಜೈಪುರ ಹೆದ್ದಾರಿ ಮತ್ತು ಹತ್ತಿರದ ಹೊಲಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

 

“ಬಿರುಗಾಳಿ ಆರಂಭವಾದಾಗ ನಾವು ತಕ್ಷಣ ಹೊರಬಂದು ಡಾಬಾದಲ್ಲಿ ಆಶ್ರಯ ಪಡೆದಿದ್ದೇವೆ. ಆದರೆ, ನಮ್ಮ ಸಹಚರರೊಬ್ಬರು ಟೆಂಟ್ ಒಳಗೆ ಉಳಿದಿದ್ದರು. ಟೆಂಟ್ ಅವರ ಮೇಲೆ ಬಿದ್ದು ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈತರೆಲ್ಲಾ ರಾತ್ರಿ ಪೂರ್ತಿ ಹಾಸಿಗೆಗಳ ಮೇಲೆ ಕುಳಿತುಕೊಂಡು ಕಾಲ ಕಳೆದಿದ್ದಾರೆ ”ಎಂದು ಅಖಿಲ ಭಾರತ ಕಿಸಾನ್ ಸಭಾದ ಮುಖಂಡ ರಘುವೀರ್ ಸಿಂಗ್ ಹೇಳಿದ್ದಾರೆ.

“ಚಂಡಮಾರುತದಿಂದ ನಮ್ಮ ಟೆಂಟ್‌ಗಳು ವ್ಯಾಪಕ ಹಾಣಿಗೊಳಗಾಗಿವೆ. ಯಾವುದೇ ಟೆಂಟ್, ಗುಡಿಸಲುಗಳ ಛಾವಣಿ ಉಳಿದಿಲ್ಲ. ಮಳೆ ನಮ್ಮ ಟೆಂಟ್‌ಗಳನ್ನು ಮಾತ್ರ ಮುರಿದಿದೆ, ಚೈತನ್ಯವಲ್ಲ. ನಾವು ಮೊದಲ ದಿನದಿಂದ ಇಂತಹ ಪ್ರತಿಕೂಲತೆಯನ್ನು ಎದುರಿಸಿದ್ದೇವೆ. ಇದನ್ನು ಸಹ ನಿವಾರಿಸುತ್ತೇವೆ ”ಎಂದು ಹಿರಿಯ ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಬಿರುಗಾಳಿಯ ಹೊಡೆತದಿಂದ ಮತ್ತೆ ಎಚ್ಚೆತ್ತಿರುವ ರೈತರು, ಪ್ರತಿಭಟನೆಯನ್ನು ಮುಂದುವರಿಸಲು ತಮ್ಮ ತಾತ್ಕಾಲಿಕ ವಾಸಸ್ಥಾನವನ್ನು ಪುನರ್ನಿರ್ಮಿಸಲು ಪ್ರಾರಂಭಿಸಿದ್ದಾರೆ ಎಂದು ಬಿಕೆಯು ನಾಯಕ ರಾಮ್ ಕಿಸಾನ್ ಮೆಹ್ಲಾವತ್ ಹೇಳಿದ್ದಾರೆ. ಶಹಜಾನ್‌ಪುರ ಗಡಿಯಲ್ಲಿ ರೈತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮನವಿ ಮಾಡಿದೆ.


ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...