Homeಚಳವಳಿಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

ಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 6 ತಿಂಗಳಿನಿಂದ ರಾಜಸ್ಥಾನ-ಹರಿಯಾಣ ಗಡಿ ಶಹಜಾನ್‌ಪುರದಲ್ಲಿ ನಡೆಯುತ್ತಿರುವ  ರೈತ ಹೋರಾಟಕ್ಕೆ ಮಳೆ ಭಾರಿ ಪೆಟ್ಟು ನೀಡಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ರೈತ ಪ್ರತಿಭಟನಾಕಾರರ ಶೇಕಡಾ 90 ರಷ್ಟು ಗುಡಿಸಲುಗಳು ಮತ್ತು ಟೆಂಟ್‌ಗಳಿಗೆ ಹಾನಿ ಉಂಟಾಗಿದೆ.

ಬಿರುಗಾಳಿಗೆ ಟೆಂಟ್‌ಗಳಿಗೆ ಇದ್ದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಪ್ರತಿಭಟನಾ ನಿರತ ರೈತರು ನಿದ್ದೆಯಿಲ್ಲದೆ ರಾತ್ರಿಯನ್ನು ಕಳೆದಿದ್ದು, ಪ್ರತಿಭಟನಾ ಸ್ಥಳದ ಪಕ್ಕದ ಡಾಬಾ ಮತ್ತು ಕೆಲ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಘಟನೆಯಲ್ಲಿ ಟೆಂಟ್‌ ಬಿದ್ದು ಮೂವರು ರೈತರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಭಾರಿ ಮಳೆಗೆ ಟೆಂಟ್‌ಗಳು, ಗುಡಿಸಲುಗಳು, ಚಾಪೆ, ಕುರ್ಚಿಗಳು, ಧ್ವನಿವರ್ಧಕಗಳು, ಫ್ಯಾನ್‌, ಕೂಲರ್‌ಗಳು, ಹುಕ್ಕಾಗಳು, ಪಾತ್ರೆಗಳು ಇತ್ಯಾದಿ ದೆಹಲಿ-ಜೈಪುರ ಹೆದ್ದಾರಿ ಮತ್ತು ಹತ್ತಿರದ ಹೊಲಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

 

“ಬಿರುಗಾಳಿ ಆರಂಭವಾದಾಗ ನಾವು ತಕ್ಷಣ ಹೊರಬಂದು ಡಾಬಾದಲ್ಲಿ ಆಶ್ರಯ ಪಡೆದಿದ್ದೇವೆ. ಆದರೆ, ನಮ್ಮ ಸಹಚರರೊಬ್ಬರು ಟೆಂಟ್ ಒಳಗೆ ಉಳಿದಿದ್ದರು. ಟೆಂಟ್ ಅವರ ಮೇಲೆ ಬಿದ್ದು ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈತರೆಲ್ಲಾ ರಾತ್ರಿ ಪೂರ್ತಿ ಹಾಸಿಗೆಗಳ ಮೇಲೆ ಕುಳಿತುಕೊಂಡು ಕಾಲ ಕಳೆದಿದ್ದಾರೆ ”ಎಂದು ಅಖಿಲ ಭಾರತ ಕಿಸಾನ್ ಸಭಾದ ಮುಖಂಡ ರಘುವೀರ್ ಸಿಂಗ್ ಹೇಳಿದ್ದಾರೆ.

“ಚಂಡಮಾರುತದಿಂದ ನಮ್ಮ ಟೆಂಟ್‌ಗಳು ವ್ಯಾಪಕ ಹಾಣಿಗೊಳಗಾಗಿವೆ. ಯಾವುದೇ ಟೆಂಟ್, ಗುಡಿಸಲುಗಳ ಛಾವಣಿ ಉಳಿದಿಲ್ಲ. ಮಳೆ ನಮ್ಮ ಟೆಂಟ್‌ಗಳನ್ನು ಮಾತ್ರ ಮುರಿದಿದೆ, ಚೈತನ್ಯವಲ್ಲ. ನಾವು ಮೊದಲ ದಿನದಿಂದ ಇಂತಹ ಪ್ರತಿಕೂಲತೆಯನ್ನು ಎದುರಿಸಿದ್ದೇವೆ. ಇದನ್ನು ಸಹ ನಿವಾರಿಸುತ್ತೇವೆ ”ಎಂದು ಹಿರಿಯ ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಬಿರುಗಾಳಿಯ ಹೊಡೆತದಿಂದ ಮತ್ತೆ ಎಚ್ಚೆತ್ತಿರುವ ರೈತರು, ಪ್ರತಿಭಟನೆಯನ್ನು ಮುಂದುವರಿಸಲು ತಮ್ಮ ತಾತ್ಕಾಲಿಕ ವಾಸಸ್ಥಾನವನ್ನು ಪುನರ್ನಿರ್ಮಿಸಲು ಪ್ರಾರಂಭಿಸಿದ್ದಾರೆ ಎಂದು ಬಿಕೆಯು ನಾಯಕ ರಾಮ್ ಕಿಸಾನ್ ಮೆಹ್ಲಾವತ್ ಹೇಳಿದ್ದಾರೆ. ಶಹಜಾನ್‌ಪುರ ಗಡಿಯಲ್ಲಿ ರೈತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮನವಿ ಮಾಡಿದೆ.


ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...