Homeಚಳವಳಿಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

ಬಿರುಗಾಳಿ ಸಹಿತ ಮಳೆಗೆ ರೈತ ಹೋರಾಟಗಾರರ ಟೆಂಟ್‌ಗಳು ನಾಶ: ನಿಲ್ಲದ ಹೋರಾಟ

- Advertisement -
- Advertisement -

ವಿವಾದಿತ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ 6 ತಿಂಗಳಿನಿಂದ ರಾಜಸ್ಥಾನ-ಹರಿಯಾಣ ಗಡಿ ಶಹಜಾನ್‌ಪುರದಲ್ಲಿ ನಡೆಯುತ್ತಿರುವ  ರೈತ ಹೋರಾಟಕ್ಕೆ ಮಳೆ ಭಾರಿ ಪೆಟ್ಟು ನೀಡಿದೆ. ಬಿರುಗಾಳಿ ಸಹಿತ ಭಾರಿ ಮಳೆಗೆ ರೈತ ಪ್ರತಿಭಟನಾಕಾರರ ಶೇಕಡಾ 90 ರಷ್ಟು ಗುಡಿಸಲುಗಳು ಮತ್ತು ಟೆಂಟ್‌ಗಳಿಗೆ ಹಾನಿ ಉಂಟಾಗಿದೆ.

ಬಿರುಗಾಳಿಗೆ ಟೆಂಟ್‌ಗಳಿಗೆ ಇದ್ದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಪ್ರತಿಭಟನಾ ನಿರತ ರೈತರು ನಿದ್ದೆಯಿಲ್ಲದೆ ರಾತ್ರಿಯನ್ನು ಕಳೆದಿದ್ದು, ಪ್ರತಿಭಟನಾ ಸ್ಥಳದ ಪಕ್ಕದ ಡಾಬಾ ಮತ್ತು ಕೆಲ ಸ್ಥಳಗಳಲ್ಲಿ ಆಶ್ರಯ ಪಡೆದಿದ್ದಾರೆ. ಘಟನೆಯಲ್ಲಿ ಟೆಂಟ್‌ ಬಿದ್ದು ಮೂವರು ರೈತರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

ಭಾರಿ ಮಳೆಗೆ ಟೆಂಟ್‌ಗಳು, ಗುಡಿಸಲುಗಳು, ಚಾಪೆ, ಕುರ್ಚಿಗಳು, ಧ್ವನಿವರ್ಧಕಗಳು, ಫ್ಯಾನ್‌, ಕೂಲರ್‌ಗಳು, ಹುಕ್ಕಾಗಳು, ಪಾತ್ರೆಗಳು ಇತ್ಯಾದಿ ದೆಹಲಿ-ಜೈಪುರ ಹೆದ್ದಾರಿ ಮತ್ತು ಹತ್ತಿರದ ಹೊಲಗಳಲ್ಲಿ ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಶ್ರದ್ಧಾಂಜಲಿ : ಕರ್ನಾಟಕದ ಮಕ್ಕಳಿಗೂ ಪ್ರೇರಣೆಯಾಗಿದ್ದ ಸಂತ ಸುಂದರಲಾಲ್ ಬಹುಗುಣ

 

“ಬಿರುಗಾಳಿ ಆರಂಭವಾದಾಗ ನಾವು ತಕ್ಷಣ ಹೊರಬಂದು ಡಾಬಾದಲ್ಲಿ ಆಶ್ರಯ ಪಡೆದಿದ್ದೇವೆ. ಆದರೆ, ನಮ್ಮ ಸಹಚರರೊಬ್ಬರು ಟೆಂಟ್ ಒಳಗೆ ಉಳಿದಿದ್ದರು. ಟೆಂಟ್ ಅವರ ಮೇಲೆ ಬಿದ್ದು ಗಾಯಗೊಂಡಿದ್ದರು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ರೈತರೆಲ್ಲಾ ರಾತ್ರಿ ಪೂರ್ತಿ ಹಾಸಿಗೆಗಳ ಮೇಲೆ ಕುಳಿತುಕೊಂಡು ಕಾಲ ಕಳೆದಿದ್ದಾರೆ ”ಎಂದು ಅಖಿಲ ಭಾರತ ಕಿಸಾನ್ ಸಭಾದ ಮುಖಂಡ ರಘುವೀರ್ ಸಿಂಗ್ ಹೇಳಿದ್ದಾರೆ.

“ಚಂಡಮಾರುತದಿಂದ ನಮ್ಮ ಟೆಂಟ್‌ಗಳು ವ್ಯಾಪಕ ಹಾಣಿಗೊಳಗಾಗಿವೆ. ಯಾವುದೇ ಟೆಂಟ್, ಗುಡಿಸಲುಗಳ ಛಾವಣಿ ಉಳಿದಿಲ್ಲ. ಮಳೆ ನಮ್ಮ ಟೆಂಟ್‌ಗಳನ್ನು ಮಾತ್ರ ಮುರಿದಿದೆ, ಚೈತನ್ಯವಲ್ಲ. ನಾವು ಮೊದಲ ದಿನದಿಂದ ಇಂತಹ ಪ್ರತಿಕೂಲತೆಯನ್ನು ಎದುರಿಸಿದ್ದೇವೆ. ಇದನ್ನು ಸಹ ನಿವಾರಿಸುತ್ತೇವೆ ”ಎಂದು ಹಿರಿಯ ರೈತ ಮುಖಂಡ ಯೋಗೇಂದ್ರ ಯಾದವ್ ಹೇಳಿದ್ದಾರೆ.

ಬಿರುಗಾಳಿಯ ಹೊಡೆತದಿಂದ ಮತ್ತೆ ಎಚ್ಚೆತ್ತಿರುವ ರೈತರು, ಪ್ರತಿಭಟನೆಯನ್ನು ಮುಂದುವರಿಸಲು ತಮ್ಮ ತಾತ್ಕಾಲಿಕ ವಾಸಸ್ಥಾನವನ್ನು ಪುನರ್ನಿರ್ಮಿಸಲು ಪ್ರಾರಂಭಿಸಿದ್ದಾರೆ ಎಂದು ಬಿಕೆಯು ನಾಯಕ ರಾಮ್ ಕಿಸಾನ್ ಮೆಹ್ಲಾವತ್ ಹೇಳಿದ್ದಾರೆ. ಶಹಜಾನ್‌ಪುರ ಗಡಿಯಲ್ಲಿ ರೈತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮನವಿ ಮಾಡಿದೆ.


ಇದನ್ನೂ ಓದಿ: “ನನ್ನನ್ನು ಈ ರೀತಿ ಅವಮಾನಿಸಬೇಡಿ”: ಪಿಎಂ ಜೊತೆಗಿನ ಭೇಟಿ ನಂತರ ಮಮತಾ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...