Homeಚಳವಳಿರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

ರೈತ ಹೋರಾಟಕ್ಕೆ ಸಾಥ್ ನೀಡಿ ಒಕ್ಕೂಟ ಸರ್ಕಾರದ ಕೆಂಗಣ್ಣಿಗೆ ಗುರಿಯಾದ ಆಯ್ದ ಕೆಲವರ ಪಟ್ಟಿ ಇಲ್ಲಿದೆ

- Advertisement -
- Advertisement -

ರೈತ ಹೋರಾಟ ಆರಂಭವಾದಾಗಿನಿಂದ ರೈತರನ್ನು ಒಕ್ಕೂಟ ಸರ್ಕರ ದೂಷಿಸುತ್ತಲೇ ಇತ್ತು. ದಲ್ಲಾಳಿಗಳ ಹೋರಾಟ, ಖಲಿಸ್ತಾನಿಗಳ ಹೋರಾಟ, ಪಂಜಾಬ್ ರೈತರ ಹೋರಾಟ, ಸಿಖ್ಖರ ಹೋರಾಟ ಎಂದು ಚಳವಳಿಯನ್ನು ಹತ್ತಿಕ್ಕುವ ಕೆಲಸ ಮಾಡಿತ್ತು.

ಆದರೆ, ರೈತರು ಈ ಯಾವ ಷಡ್ಯಂತರಕ್ಕೂ ಹೆದರದೆ ಹೋರಾಟ ಮುಂದುವರೆಸಿದರು. ಇಂದು( ಶುಕ್ರವಾರ) ಅದಕ್ಕೆ ಪ್ರತಿಫಲ ಸಿಕ್ಕಿದ್ದು ರೈತ ಹೋರಾಟಕ್ಕೆ ಜಯ ಸಿಕ್ಕಿದೆ. ಮೂರು ಕಾನೂನುಗಳನ್ನು ವಾಪಸ್ ಪಡೆಯುವುದಾಗಿ ಸರ್ಕಾರ ಘೋಷಿಸಿದೆ. ‌ಆದರೆ, ಈ ಹೋರಾಟಕ್ಕೆ ಬೆಂಬಲ ನೀಡಿ ಸರ್ಕಾರದ ಕೆಂಗಣ್ಣಿಗೆ ಗುರಿಯಾದವರರನ್ನು ಮರೆಯಬಾರದು. ಅವರಲ್ಲಿ ಆಯ್ದ ಕೆಲವರ ಪಟ್ಟಿ ಇಲ್ಲಿದೆ.

೧. ದಿಶಾ ರವಿ: ಬೆಂಗಳೂರಿನ ಇಪ್ಪತ್ತೊಂದು ವರ್ಷದ ಯುವ ಹೋರಾಟಗಾರ್ತಿ ದಿಶಾ ರವಿಯನ್ನು ದೇಶದ್ರೋಹ ಮುಂತಾದ ಗಂಭೀರ ಆರೋಪಗಳ ಮೇಲೆ ದೆಹಲಿ ಪೊಲೀಸರು ಬಂಧಿಸಿದ್ದರು. ರೈತ ಹೋರಾಟದ ಕುರಿತು ಹಾಗೂ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಳಸಿದ ಕೆಲವು ವಿಧಾನಗಳನ್ನು ಕುರಿತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಒಂದು ಸಾರ್ವಜನಿಕ ಟೂಲ್‌ಕಿಟ್ ಜಾರಿಯಲ್ಲಿತ್ತು.

ಇದನ್ನು ದೇಶದ ವಿರುದ್ಧ ನಡೆಯುತ್ತಿರುವ ಅಂತಾರಾಷ್ಟ್ರೀಯ ಷಡ್ಯಂತ್ರವೆಂದು ಬಿಂಬಿಸಿ, ಆ ದಾಖಲೆಯನ್ನು ಸಂಪಾದಿಸಿದವರಲ್ಲೊಬ್ಬರಾದ ಕಾರಣಕ್ಕೆ ದಿಶಾ ಅವರನ್ನು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಆಕೆಯ ವಿರುದ್ಧ ತೇಜೋವಧೆ ನಡೆಸಲಾಗಿತ್ತು.

ದಿಶಾ ರವಿ

೨. ಗ್ರೇಟಾ ಥನ್‌ಬರ್ಗ್‌:

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌‌ಬರ್ಗ್‌ ತನ್ನ ಟ್ವೀಟ್‌ನಲ್ಲಿ, “ಭಾರತೀಯ ರೈತರ ಹೋರಾಟದ ಜೊತೆ ನಾವು ಒಗ್ಗಟ್ಟಿನಲ್ಲಿ ನಿಲ್ಲುತ್ತೇವೆ” ಎಂದು ಎಂದು ಸಿಎನ್‌ಎನ್‌ ವರದಿಯನ್ನು ಹಂಚಿಕೊಂಡು ಹೋರಾಟಕ್ಕೆ ಬೆಂಬಲ ನೀಡಿದ್ದರು.

ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಇವರ ವಿರುದ್ದ “ಕ್ರಿಮಿನಲ್ ಪಿತೂರಿ ಮತ್ತು ಧರ್ಮದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸುತ್ತಿದ್ದಾರೆ” ಎಂದು ಆರೋಪಿಸಿ ದೆಹಲಿ ಪೊಲೀಸರು ದೂರು ದಾಖಲಿಸಿದ್ದರು. ಇಷ್ಟೇ ಅಲ್ಲದೆ ಅವರ ಹಳೆಯ ಫೋಟೋಗಳನ್ನು ಎಡಿಟ್ ಮಾಡಿ ವಿಕೃತಿ ಮೆರೆದಿದ್ದರು.

೩. ರಿಹಾನ್ನಾ:

ಅಂತರರಾಷ್ಟ್ರೀಯ ಪಾಪ್ ಗಾಯಕಿ ರಿಹಾನ್ನಾ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.  ರೈತರ ಹೋರಾಟಕ ಕುರಿತು ಸಿಎನ್‌ಎನ್‌ ಲೇಖನವನ್ನು ಟ್ವೀಟ್ ಮಾಡಿ, “ನಾವ್ಯಾಕೆ ಈ ವಿಷಯದ ಕುರಿತು ಚರ್ಚಿಸುತ್ತಿಲ್ಲ” ಎಂದು ಪ್ರಶ್ನಿಸಿದ್ದರು. ಇದು ಅಂತರರಾಷ್ಟ್ರೀಯ ಮಟ್ಟದಲ್ಲಿ ರೈತ ಹೋರಾಟಕ್ಕೆ ಬೆಂಬಲ ಬರಲು ಕಾರಣವಾಗಿತ್ತು.

ರಿಹಾನ್ನಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಪರ ವಿರೋಧ ಚರ್ಚೆಗೂ ಕಾರಣವಾಗಿತ್ತು. ಕೆಲವರು ಇದು ಭಾತರದ ಆಂತರಿಕ ವಿಷಯ ಎಂದು ಹೇಳಿದರೆ, ಇನ್ನೂ ಕೆಲವರು ಇದು ಅಂತರಾಷ್ಟ್ರೀಯ ವಿಷಯ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಇನ್ನು ಕೆಲವರ ಆಕೆಯ ಕಾರ್ಯಕ್ರಮದ ವಿಡಿಯೋ, ಫೋಟೋಗಳನ್ನು ಟ್ವೀಟ್ ಮಾಡಿ ಟೀಕಿಸಿದ್ದರು.

ಇದನ್ನೂ ಓದಿ: ರೈತ ಹೋರಾಟಕ್ಕೆ ಗ್ರೇಥಾ ಥನ್‌‌ಬರ್ಗ್ ಮತ್ತು ಪಾಪ್‌ ಗಾಯಕಿ ರಿಹಾನ್ನಾ ಬೆಂಬಲ; ನೆಟ್ಟಿಗರ ಪ್ರತಿಕ್ರಿಯೆಯೇನು?

ರಿಹಾನ್ನಾ
ಗ್ರೇಟಾ ಥನ್‌ಬರ್ಗ್‌ ಮತ್ತು ರಿಹಾನ್ನಾ

೪. ಲಿಲ್ಲಿಸಿಂಗ್: ಲಿಲ್ಲಿ ಸಿಂಗ್ ಕೆನಡಾ ಮೂಲದ ಯೂಟ್ಯೂಬರ್, ಹಾಸ್ಯನಟಿಯಾಗಿದ್ದಾರೆ. ಅಂತರಾಷ್ಟ್ರೀಯ ಖ್ಯಾತಿ ಹೊಂದಿರುವ ಲಿಲ್ಲಿ ಸಿಂಗ್ ರೈತ ಹೋರಾಟಕ್ಕೆ ಬೆಂಬಲ ನೀಡಿದ್ದರು. 63 ನೇ ಗ್ರ್ಯಾಮಿ ಪ್ರಶಸ್ತಿ ವೇದಿಕೆಯನ್ನು ಅವರು ರೈತ ಆಂದೋಲನವನ್ನು ಬೆಂಬಲಿಸಲು ಬಳಸಿಕೊಂಡರು. ಅವರು ಗ್ರ್ಯಾಮಿ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸುವಾಗ “ನಾನು ರೈತರ ಜೊತೆ ನಿಲ್ಲುತ್ತೇನೆ” ಎಂದು ಬರೆದಿರುವ ಮಾಸ್ಕ್‌ ಅನ್ನು ಧರಿಸಿದ್ದರು.

ಹೋರಾಟಕ್ಕೆ ಮತ್ತೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’
ಲಿಲ್ಲಿಸಿಂಗ್

೫. ಸ್ವರ ಭಾಸ್ಕರ್: 

ಬಾಲಿವುಡ್ ನಟಿ ಸ್ವರ ಭಾಸ್ಕರ್ ರೈತ ಹೋರಾಟದ ಆರಂಭದಿಂದಲೂ ಬೆಂಬಲ ನೀಡಿದ್ದರು. ಬೆಂಬಲ ನೀಡುವುದರ ಜೊತೆಗೆ ಸ್ವತಃ ಪ್ರತಿಭಟನಾ ನಿರತ ಸಿಂಘು ಗಡಿಗೆ ಭೇಟಿ ನೀಡಿ ರೈತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

೬. ತಾಪ್ಸಿ ಪನ್ನು:

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ನಿರಂತರವಾಗಿ ಧ್ವನಿ ಎತ್ತುತ್ತಿದ್ದ ಖ್ಯಾತ ಬಾಲಿವುಡ್ ನಟಿ ತಾಪ್ಸಿ ಪನ್ನು ರೈತ ಹೋರಾಟಕ್ಕೂ ಬೆಂಬಲ ನೀಡಿದ್ದರು. ಗಾಯಕಿ ರಿಹಾನ್ನಾ ವಿರುದ್ಧದ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ್ದ ನಟಿ,  “ಒಂದು ಟ್ವೀಟ್ ನಿಮ್ಮ ಐಕ್ಯತೆಯನ್ನು ಅಲ್ಲಾಡಿಸುವುದಾದರೆ, ಒಂದು ಜೋಕ್ ನಿಮ್ಮ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಒಂದು ಕಾರ್ಯಕ್ರಮ ನಿಮ್ಮ ಧಾರ್ಮಿಕ ನಂಬಿಕೆಯನ್ನು ಅಲ್ಲಾಡಿಸುವುದಾದರೆ, ಮೊದಲು ನೀವು ನಂಬಿರುವ ಮೌಲ್ಯಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡಿ. ಅದರ ಬದಲು ಉಳಿದವರಿಗೆ ಪ್ರೊಪಗಂಡಾ ಕಲಿಸುವ ಟೀಚರ್‌ ಆಗಬೇಡಿ” ಎಂದು ತೀಕ್ಷ್ಣ ಪ್ರತ್ಯುತ್ತರ ನೀಡಿದ್ದರು.

ಇದರಿಂದ ನಟಿ ತಾಪ್ಸಿ ಪನ್ನು ಅವರ ಆಸ್ತಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು.

ಸ್ವರಾ ಭಾಸ್ಕರ್‌ ಮತ್ತು ತಾಪ್ಸಿ ಪನ್ನು

೭. ಸೋನಾಕ್ಷಿ ಸಿನ್ಹಾ:

ರೈತ ಹೋರಾಟದ ಬಗ್ಗೆ ವಿದೇಶಿಗರು ಮಾತನಾಡುತ್ತಿದ್ದಾರೆ ಇದು ಪ್ರೊಪಗಾಂಡ ಎಂದೆಲ್ಲ ಹೇಳುತ್ತಿದ್ದ ಸೆಲಬ್ರಿಟಿಗಳ ಮುಖಕ್ಕೆ ರಾಚುವಂತೆ ಬಾಲಿವುಡ್ ಸೋನಾಕ್ಷಿ ಸಿನ್ಹಾ ಟ್ವೀಟ್ ಮಾಡಿದ್ದರು.

“ನಮ್ಮ ದೇಶದ ಕಾರ್ಯಚಟುವಟಿಕೆಗಳನ್ನು ಹೊರಗಿನ ಶಕ್ತಿಗಳು ನಿಯಂತ್ರಿಸಲು ಪ್ರಯತ್ನಿಸುತ್ತಿವೆ ಎಂದು ನಿಮ್ಮನ್ನು ನಂಬಿಸಲು ಸುದ್ದಿ ಮಾಧ್ಯಮಗಳು ಪ್ರಯತ್ನಿಸುತ್ತಿವೆ. ಆದರೆ ನೀವು ನೆನಪಿಡಿ ಟೀಕಿಸಿದವರ್ಯಾರೂ ಅನ್ಯಗ್ರಹ ಜೀವಿಗಳಲ್ಲ. ಮತ್ತೊಬ್ಬರ ಹಕ್ಕುಗಳಿಗಾಗಿ ಧ್ವನಿ ಎತ್ತಿರುವ ಸಹಜೀವಿ ಮನುಷ್ಯರು ಅವರು. ಇವೆರಡು ಭಿನ್ನ ಚರ್ಚೆಗಳು. ನೀತಿ, ಕಾಯ್ದೆ, ಕಾನೂನು ಮತ್ತು ಅವುಗಳ ಪರಿಣಾಮದ ಮೇಲೆ ನಿಮಗೆ ಭಿನ್ನ ಅಭಿಪ್ರಾಯಗಳು ಇರಬಹುದು. ಆದರೆ ಆ ಭಿನ್ನಾಭಿಪ್ರಾಯವನ್ನು “ಅನ್ಯ” ವಾದಕ್ಕೆ ಬಳಸಿಕೊಳ್ಳಲು ಅವಕಾಶ ಕೊಡಬೇಡಿ. ಟೀಕೆ ಇರುವುದು ಮಾನವ ಹಕ್ಕುಗಳ ಮತ್ತು ಸ್ವಾತಂತ್ರ್ಯದ ಹರಣದ ಬಗ್ಗೆ..” ಎಂದು ಹೇಳಿದ್ದರು.

Sonakshi Sinha Beautiful In Saree Hd Wallpapers - Sonakshi Sinha New Hd - 1600x1200 Wallpaper - teahub.io
ಸೋನಾಕ್ಷಿ ಸಿನ್ಹಾ

೮. ದಿಲ್ಜಿತ್ ದೋಸಾಂಜ್: 

ಬಾಲಿವುಡ್, ಪಂಜಾಬಿ ನಟ, ಗಾಯಕ ದಿಲ್ಜಿತ್ ದೋಸಾಂಜ್ ರೈತ ಪ್ರತಿಭಟನೆ ಆರಂಭದಿಂದಲು ರೈತರ ಪರವಾಗಿ ನಿಂತಿದ್ದಾರೆ. ರೈತರ ಬಗೆಗಿನ ಎಲ್ಲಾ ಆರೋಪಗಳಿಗೂ ಉತ್ತರ ನೀಡುತ್ತಿದ್ದಾರೆ. ನಟಿ ಕಂಗನಾ ರಣಾವತ್ ವಿರುದ್ಧ ದನಿ ಎತ್ತಿದವರಲ್ಲಿ ಪ್ರಮುಖರು.

ರೈತರಿಗೆ ಪಿಜ್ಜಾ ವಿರಣೆ ಬಗ್ಗೆ ಟೀಕೆಗಳು ವ್ಯಕ್ತವಾದಾಗ ತಮ್ಮ ಟ್ವಿಟರ್‌ ಖಾತೆಯಲ್ಲಿ ಒಂದು ಚಿತ್ರವನ್ನು ಟ್ವೀಟ್ ಮಾಡಿ, “ರೈತರು ವಿಷ ಸೇವಿಸುವುದರ ಬಗ್ಗೆ ಯಾರಿಗೂ ಎಂದಿಗೂ ಕಾಳಜಿಯಿಲ್ಲ. ಆದರೆ, ರೈತರು ಪಿಜ್ಜಾ ತಿನ್ನುವುದು ಸುದ್ದಿಯಾಗಿದೆ.” ಎಂದು ವ್ಯಂಗ್ಯ ಮಾಡಿದ್ದರು. ಜೊತೆಗೆ ಚಳಿಗಾಲದ ಹೊದಿಕೆಗಳಿಗಾಗಿ ರೈತರಿಗೆ 1 ಕೋಟಿ ರೂಪಾಯಿ ದಾನ ಮಾಡಿದ್ದರು.

ದಿಲ್ಜಿತ್ ದೋಸಾಂಜ್

ಇತ್ತ ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್, ಕರಣ್ ಜೋಹಾರ್, ಏಕ್ತಾ ಕಪೂರ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ರೈತರು ವಿಷ ಸೇವಿಸಿದಾಗ ಕಾಳಜಿ ವಹಿಸದವರು ಪಿಜ್ಜಾ ತಿನ್ನುವಾಗ ಟೀಕೆ ಮಾಡುತ್ತಾರೆ – ದಿಲ್ಜಿತ್ ದೋಸಾಂಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆಡಳಿತಾರೂಡರ ಮರ್ಜಿಗೆ ಒಳಗಾಗದೆ, ರೈತರ ಹೋರಾಟವನ್ನು ಬೆಂಬಲಿಸಿದ ಇವರೆಲ್ಲರೂ ಧನ್ಯವಾದಗಳು.

  2. ಇವರ ಎಲ್ಲಾರ ಗುರುಗಳು ಭಯೋತ್ಪಾದಕ ಸಂಘಟನೆಯ ಅಂತಾರಾಷ್ಟ್ರೀಯ ಮುಖಂಡರು ಅನ್ನೋದು ಈಗ ಸಾಬೀತು ತಾವೇ ತಮ್ಮ ವರದಿ ಮೂಲಕ ತಿಳಿಸಿ ,ಬೆತ್ತಲು ಮಾಡಿದ್ದು ಒಳಿತೇ ಆಗಿದೆ .ಇದರಲ್ಲಿ ಬಹುಪಾಲು ವಿದೇಶಿ ಮೂಲದವರೇ ಇರೋದು ಸಾಬೀತು ತಾವೇ ಮಾಡಿದ್ದೀರಿ ,ಇವರಿಗೆ ಗುಲಾಮಗಿರಿ ಬೇಕೆ ವಿನಹ ದೇಶದ ಭದ್ರತೆ ,ಬೆಳವಣಿಗೆಯ ಅಗತ್ಯತೆ ಇಲ್ಲಾ,ಮುಂದಿನ ದಿನಗಳಲ್ಲಿ ನಿಮ್ಮಗಳ ಮತ್ತಷ್ಟು ಬಂಡವಾಳ ಹೊರಬರೋದು ಕಂಡಿತ ಆಗ ನಿಮಗೆ ಆಪ್ಘನ್,ಪಾಕ್ ,ಚೀನಾ ಗಳೇ ಗಟ್ಟಿ ,ಭಾರತದಲ್ಲಿ ದೇಶ ದ್ರೋಹಿಗಳಿಗೆ ಸ್ಥಳ ಇರಲ್ಲಾ .

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...