Homeಚಳವಳಿರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ರೈತ ಹೋರಾಟ: 70,000 ಕೋಟಿ ನಷ್ಟವಾಗಿದೆ ಎಂದ ವಾಣಿಜ್ಯ-ಕೈಗಾರಿಕಾ ಮಂಡಳಿ

ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ- ಸಂಜಯ್ ಅಗರ್ವಾಲ್

- Advertisement -
- Advertisement -

ಹೊಸ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟದ ಪರಿಣಾಮವಾಗಿ ಪ್ರಸಕ್ತ ಹಣಕಾಸು ವರ್ಷದ 3 ನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳ ಆರ್ಥಿಕ ನಷ್ಟವಾಗಲಿದೆ ಎಂದು PHD ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ತಿಳಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ರೈತ ವಿರೋಧಿಯಾಗಿದೆ ಎಂದು ಆರೋಪಿಸಿ ದೇಶದಾದ್ಯಂತ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಪರಿಣಾಮವಾಗಿ ಪಂಜಾಬ್ -ಹರಿಯಾಣದ ರೈತರು ದೆಹಲಿಯ ಪ್ರಮುಖ ಗಡಿಗಳು ಮತ್ತು ಹೆದ್ದಾರಿಗಳನ್ನು ಮುಚ್ಚಿದ್ದಾರೆ. ಹಾಗಾಗಿ ಸರಬರಾಜು ಮತ್ತು ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗಿ ಬೃಹತ್ ಆರ್ಥಿಕ ನಷ್ಟ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಮ್ಯಾಜಿಸ್ಟ್ರೇಟ್ ವರ್ಗಾವಣೆ!

ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ ಸಂಜಯ್ ಅಗರ್ವಾಲ್ ಮಾತನಾಡಿ, “ಇದುವರೆಗಿನ 36 ದಿನಗಳ ಕೃಷಿ ಆಂದೋಲನದಿಂದ ಭಾರತವು, 2020-21ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ 70,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಆರ್ಥಿಕ ನಷ್ಟವನ್ನು ಅನುಭವಿಸಲಿದೆ. ಸರಬರಾಜು ಸೇರಿದಂತೆ ದಿನನಿತ್ಯದ ಆರ್ಥಿಕ ಚಟುವಟಿಕೆಗಳಿಗೆ ತೊಂದರೆಯಾಗಿದೆ” ಎಂದು ಹೇಳಿದ್ದಾರೆ.

“ಆಹಾರ ಸಂಸ್ಕರಣೆ, ಹತ್ತಿ ಜವಳಿ, ಉಡುಪುಗಳು, ಆಟೋಮೊಬೈಲ್, ಕೃಷಿ ಯಂತ್ರೋಪಕರಣಗಳು, ಮಾಹಿತಿ ತಂತ್ರಜ್ಞಾನ, ವ್ಯಾಪಾರ, ಪ್ರವಾಸೋದ್ಯಮ ಮತ್ತು ಸಾರಿಗೆ ಸೇರಿದಂತೆ ಮುಂತಾದ ಕ್ಷೇತ್ರಗಳ ಮೇಲೆ ತೀವ್ರವಾಗಿ ಪರಿಣಾಮ ಉಂಟಾಗಿದೆ. ಇದು ಉದ್ಯಮಕ್ಕೆ ಸಾಗಿಸಬೇಕಾದ ಕಚ್ಚಾ ವಸ್ತುಗಳ ಸರಬರಾಜನ್ನೂ ಅಡ್ಡಿಪಡಿಸಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಅನ್ಯಾಯದ ವಿರುದ್ಧ ಹೋರಾಡುತ್ತಿರುವ ರೈತರು, ಕಾರ್ಮಿಕರ ಜೊತೆ ನನ್ನ ಹೃದಯವಿದೆ: ರಾಹುಲ್ ಗಾಂಧಿ

ಕಳೆದ ಒಂದು ತಿಂಗಳಿನಿಂದ ಲಕ್ಷಾಂತರ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಜೊತೆ ಆರು ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

“ಡಿಸಂಬರ್ 30 ರಂದು ನಡೆದ ಆರನೇ ಸುತ್ತಿನ ಮಾತುಕತೆಯಲ್ಲಿ, ರೈತರ 4 ಪ್ರಮುಖ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಎರಡಕ್ಕೆ ಒಪ್ಪಿಗೆ ನೀಡಲಾಗಿದ್ದು, ಉಳಿದ ಎರಡು ಬೇಡಿಕೆಗಳ ಕುರಿತಂತೆ ಜನವರಿ 4 ರಂದು ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ತೀರ್ಮಾನವಾಗಲಿದೆ. ಅಲ್ಲಿ ತಮ್ಮ ಬೇಡಿಕೆಗಳನ್ನು ಈಡೆರಿಸದಿದ್ದರೆ ದೇಶದಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ರೈತರು ಎಚ್ಚರಿಕೆ ಕೊಟ್ಟಿದ್ದಾರೆ.


ಇದನ್ನೂ ಓದಿ: ಹೊಸ ವರ್ಷ: ಪ್ರಧಾನಿ ಮೋದಿ ಸರ್ಕಾರ ಅದಾನಿ‌ ಗ್ರೂಪ್ಸ್‌ಗೆ ನೀಡಿದ ಗಿಫ್ಟ್‌ ಏನು ಗೊತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...