Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...