Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....