Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...