Homeಮುಖಪುಟರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ರೈತ ಹೋರಾಟ: ಸಿಂಘು ಗಡಿಯಲ್ಲೀಗ ರೈತಾಪಿ ಮಹಿಳೆಯರ ದಂಡು

ಕಳೆದ 3 ದಿನಗಳಿಂದ ಸಾವಿರಾರು ರೈತಾಪಿ ಮಹಿಳೆಯರು ಸಿಂಘು ರೈತ ಪ್ರತಿಭಟನೆಗೆ ಸೇರಿಕೊಂಡು ಹೊಸ ಸಂಚಲನ ಮೂಡಿಸಿದ್ದಾರೆ. ಅತ್ತ ಗಾಜಿಪುರ ಗಡಿಯಲ್ಲಿ ಯುವಕರ ದೊಡ್ಡ ದಂಡೇ ಜಮಾವಣೆಯಾಗುತ್ತಿದೆ.

- Advertisement -
- Advertisement -

ಸಿಂಘು ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿ ಇಲ್ಲಿವರೆಗೂ ಪುರುಷರು ಮುಂಚೂಣಿಯಲ್ಲಿದ್ದರು. ಆದರೆ ತಮ್ಮ ಪ್ರೀತಿಪಾತ್ರರನ್ನು ಬಂಧಿಸಲಾಗುವುದು ಎಂಬ ಆತಂಕ, ಬೆಂಬಲವನ್ನು ತೋರಿಸುವ ದೃಢ ನಿಶ್ಚಯ ಮತ್ತು ಯುಪಿಯ ಗಾಜಿಪುರ ಗಡಿಯಿಂದ ಬಿಕೆಯು ನಾಯಕ ರಾಕೇಶ್ ಟಿಕಾಯತ್ ಮಾಡಿದ ಭಾವನಾತ್ಮಕ ಮನವಿ-ಈ ಮೂರು ಕಾರಣಗಳಿಂದ ಕಳೆದ ಮೂರು ದಿನಗಳಲ್ಲಿ ನೂರಾರು ಮಹಿಳಾ ರೈತರು ಪ್ರತಿಭಟನೆಯನ್ನು ಸೇರಿಕೊಂಡಿದ್ದಾರೆ. ಬಹುಪಾಲು ಮಹಿಳೆಯರಿಗೆ ಇಂಥದ್ದು ಮೊದಲ ಅನುಭವ.

ರವಿವಾರ ಸಿಂಘು ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ರೈತಾಪಿ ಮಹಿಳೆಯರ ಗುಂಪೊಂದು ಪ್ರತಿಭಟನಾ ಸ್ಥಳದ ಸುತ್ತಲೂ ಮಿನಿರ‍್ಯಾಲಿಗಳನ್ನು ನಡೆಸಿತು. ಮುಖ್ಯ ವೇದಿಕೆಯ ಬಳಿ ಘೋಷಣೆಗಳನ್ನು ಕೂಗಿದರು. ಸ್ವಯಂಸೇವಕರಿಗೆ ಭದ್ರತೆಯಲ್ಲಿ ಸಹಾಯ ಮಾಡುವಾಗ ತಾವೇ ಕೈಗೆ ಲಾಠಿಗಳನ್ನು ತೆಗೆದುಕೊಂಡರು. ಊಟದ ಮನೆಯಲ್ಲಿ ಕುಳಿತು ತಮ್ಮ ಆತಂಕಗಳನ್ನು ಚರ್ಚಿಸಿದರು.

ಹಲವಾರು ಮಹಿಳಾ ಪ್ರತಿಭಟನಾಕಾರರು ಸಿಂಘು ತಲುಪಲು ತಾವು 10 ಕಿ.ಮೀ.ವರೆಗೆ ನಡೆಯಬೇಕಾಯಿತು ಎಂದು ಹೇಳಿದರು. ಚಳುವಳಿಯಲ್ಲಿ ಸೇರಲು ಹೊಲಗಳನ್ನು ಬಿಟ್ಟು ಬಂದಿದ್ದೇವೆ ಎಂದು ಕೆಲವರು ತಿಳಿಸಿದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧದ ಆಂದೋಲನ ಮುಂದುವರಿಯುತ್ತದೆ ಎಂದು ಘೋಷಿಸುತ್ತ ಟಿಕಾಯತ್ ಅಳುವ ವೀಡಿಯೊವನ್ನು ನೋಡಿದ ನಂತರ ನಾನು ಮತ್ತು ನನ್ನ ಸ್ನೇಹಿತರು ಶನಿವಾರ ಸಿಂಘುಗೆ ಬಂದಿದ್ದೇವೆ ಎಂದು ಪಂಜಾಬ್‌ನ ಸಂಗ್ರೂರ್‌ನ ಕೃಷಿ ಕಾರ್ಮಿಕರಾದ ಬಬ್ಲಿ (40) ಹೇಳಿದ್ದಾರೆ.

“ಪೊಲೀಸರು ನಮ್ಮನ್ನು ಪ್ರಾಣಿಗಳಂತೆ ಪರಿಗಣಿಸಲು ಸಾಧ್ಯವಿಲ್ಲ. ನನ್ನ ಪತಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್ ಮೆರವಣಿಗೆಯ ಭಾಗವಾಗಿದ್ದರು. ಸಿಂಘು ಗಡಿಯ ಹೊರಗೆ ಪೊಲೀಸರು ನನ್ನ ಪತಿಯನ್ನು ಥಳಿಸಿದರು. ಅವರು ದೆಹಲಿಗೆ ಹೋಗಲಾಗಲಿಲ್ಲ. ಅವರು ಧ್ವಜವನ್ನು ಹಾರಿಸಿದ ಗುಂಪಿನ ಭಾಗವಾಗಿರಲಿಲ್ಲ” ಎಂದು ಬಬ್ಲಿ ತಿಳಿಸಿದರು.

‘ಗಾಜಿಪುರದಲ್ಲಿ ಪೊಲೀಸರು ಟಿಕಾಯತ್ ಅವರಿಗೆ ಕಿರುಕುಳ ನೀಡಿದರು. ನಮಗೆ ಅವಮಾನವಾಗಿದೆ. ನಮ್ಮನ್ನು ಗುರಿಯಾಗಿಸಲಾಗಿದೆ. ನಾನು ನನ್ನ ಸ್ನೇಹಿತರೊಂದಿಗೆ ಇಲ್ಲಿಯೇ ಇರುತ್ತೇನೆ. ನನ್ನ ತಾಯಿ ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ನಾವು ಪ್ರತಿಭಟನಾಕಾರರಿಗೆ ಅಡುಗೆ ಸಿದ್ಧ ಮಾಡಿ ಕೊಡುತ್ತಲೇ ಪ್ರತಿಭಟನೆಯಲ್ಲಿ ಹಾಜರಾಗುತ್ತೇವೆ ಎಂದು ಬಬ್ಲಿ ಮತ್ತು ಗೆಳತಿಯರು ತಿಳಿಸಿದರು.

ಪಟಿಯಾಲ ಮೂಲದ ರೈತ ಮಹಿಳೆ ದಲ್ಬೀರ್ ಕೌರ್ (47) ತನ್ನ ಚಿಕ್ಕಪ್ಪ ಮತ್ತು ಚಿಕ್ಕಮ್ಮನೊಂದಿಗೆ ಶನಿವಾರ ಸಂಜೆ ಸಿಂಘು ಪ್ರತಿಭಟನಾ ಸ್ಥಳಕ್ಕೆ ಬಂದಿದ್ದಾರೆ. ‘ಬಿಕೆಯುನ ರೈತ ಮುಖಂಡರು ಮತ್ತು ಇತರ ಒಕ್ಕೂಟಗಳ ಮುಖಂಡರ ಭಾಷಣಗಳನ್ನು ಕೇಳಿದ ನಂತರ ಸಿಂಘುಗೆ ಬಂದೆವು. ನನ್ನ ಪತಿ ಸುಮಾರು ಎರಡು ತಿಂಗಳಿಂದ ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ’ ಎನ್ನುತ್ತಾರೆ ದಲ್ಬೀರ್ ಕೌರ್.

‘ನಮ್ಮದು ಕಬ್ಬಿನ ಗದ್ದೆ ಇದೆ ಮತ್ತು ತರಕಾರಿಗಳನ್ನು ಸಹ ಬೆಳೆಯುತ್ತೇವೆ. ನಿನ್ನೆ, ನಾನು ನನ್ನ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಇಲ್ಲಿಗೆ ಬಂದೆ. ಭಿತ್ತಿಪತ್ರಗಳನ್ನು ಹಿಡಿದು ವೇದಿಕೆಯ ಬಳಿ ಮೆರವಣಿಗೆ ನಡೆಸಿದೆವು. ನಾನು ನಾಳೆ ಹೊರಡಬೇಕಾಗುತ್ತದೆ, ಆದರೆ ನನ್ನನ್ನು ಲೆಕ್ಕಿಸಬೇಡಿ. ಈ ಆಂದೋಲನಕ್ಕಾಗಿ ನನ್ನ ಪ್ರಾಣ ತ್ಯಾಗ ಮಾಡಲು ನಾನು ಸಿದ್ಧ. ಪೊಲೀಸರು ಮತ್ತು ಸರ್ಕಾರವು ನಮಗೆ ಕಿರುಕುಳ ನೀಡಬಹುದು, ಆದರೆ ನಾವು ಜಯ ಸಿಗುವವರೆಗೂ ವಿಶ್ರಮಿಸುವುದಿಲ್ಲ”ಎಂದು ದಲ್ಬೀರ್ ಹೇಳಿದರು.

ದಲ್ಬೀರ್ ಕೌರ್ ಮತ್ತು 8-10 ಮಹಿಳೆಯರ ಗುಂಪು ಪೊಲೀಸ್ ದೌರ್ಜನ್ಯ ಮತ್ತು ಹೊಸ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗಿತು.

ಗಣರಾಜ್ಯೋತ್ಸವದ ಘರ್ಷಣೆಯಲ್ಲಿ ಗಾಯಗೊಂಡ ರೈತರಿಗೆ ಸಹಾಯ ಮಾಡಲು ತಾನು ಬಂದಿದ್ದೇನೆ ಎಂದು ಮತ್ತೊಬ್ಬ ರೈತ ಮಹಿಳೆ ಮಂದೀಪ್ (50) ಹೇಳಿದ್ದಾರೆ. “ನಾನು ಎರಡು ಪಾತ್ರೆಗಳು ಮತ್ತು ಒಣ ಹಣ್ಣುಗಳನ್ನು ಖರೀದಿಸಿದ್ದೇನೆ. ಕಪುರ್ಥಾಲಾದ ನನ್ನ ಅನೇಕ ರೈತ ಸಹೋದರರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದಾಗ ನನಗೆ ಆಘಾತವಾಯಿತು. ನಾವಿಬ್ಬರೂ ರೈತರಿಗೆ ಸಹಾಯ ಮಾಡಲು ಬಯಸಿದ್ದರಿಂದ ನಾನು ನನ್ನ ಗಂಡನೊಂದಿಗೆ ಬಂದಿದ್ದೇನೆ. ನಾವು ಟಿಕಾಯತ್‌ಜಿ ಅವರನ್ನು ಗೌರವಿಸುತ್ತೇವೆ. ಹೊಸ ಕಾನೂನುಗಳನ್ನು ರದ್ದುಗೊಳಿಸುವವರೆಗೆ ಇಲ್ಲಿ ಪ್ರತಿಭಟಿಸುತ್ತೇವೆ. ಪೊಲೀಸರು ಪ್ರಕರಣಗಳನ್ನು ದಾಖಲಿಸಬಹುದು ಮತ್ತು ನಮ್ಮನ್ನು ಭಯೋತ್ಪಾದಕರು ಎಂದು ಕರೆಯಬಹುದು. ನಾವು ಅವರೊಂದಿಗೆ ಹೋರಾಡುತ್ತೇವೆ. ನಾವು ಬಿಡುವುದಿಲ್ಲ” ಎಂದು ಅವರು ಹೇಳಿದರು.


ಇದನ್ನೂ ಓದಿ; ಮಥುರಾ, ಬಾಗ್‌ಪತ್‌ನಲ್ಲಿ ಬೃಹತ್ ಮಹಾಪಂಚಾಯತ್‌: ಬಿಜೆಪಿಗೆ ಸಾಮಾಜಿಕ ಬಹಿಷ್ಕಾರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...