Homeಚಳವಳಿರೈತ ಹೋರಾಟ: ಜಿಯೋ ಟವರ್‌ಗಳ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ರೈತರು

ರೈತ ಹೋರಾಟ: ಜಿಯೋ ಟವರ್‌ಗಳ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ ರೈತರು

ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಅಂಬಾನಿಯ ಜಿಯೋ ಕಂಪನಿ ಆರೋಪಿಸಿತ್ತು

- Advertisement -
- Advertisement -

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ಪಂಜಾಬ್‌ನ ಮನ್ಸಾದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು, ಅಲ್ಲಿನ ಹಲವಾರು ರಿಲಯನ್ಸ್ ಜಿಯೋ ಟವರ್‌ಗಳ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಟೆಲಿಕಾಂ ಸೇವೆಗಳಿಗೆ ಅಡ್ಡಿಯುಂಟಾಗಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ಅವತಾರ್ ಸಿಂಗ್ ಈ ಕುರಿತು ಮಾತನಾಡಿ, “ಈ ಕರಾಳ ಕಾನೂನುಗಳನ್ನು ರದ್ದುಗೊಳಿಸುವವರೆಗೆ ವಿದ್ಯುತ್ ಸರಬರಾಜಿಗೆ ಅನುಮತಿಸುವುದಿಲ್ಲ” ಎಂದು ಹೇಳಿದರು.

“ನಾವು ಜಿಯೋ ಟವರ್‌ಗಳ ವಿದ್ಯುತ್ ಸರಬರಾಜನ್ನು ನಿಲ್ಲಿಸಿದ್ದೇವೆ. ರೈತರ ವಿರುದ್ಧದ ಕರಾಳ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ನಾವು ಜಿಯೋ ಮತ್ತು ರಿಲಯನ್ಸ್ ಅನ್ನು ಬಹಿಷ್ಕರಿಸುತ್ತೇವೆ. ಇದನ್ನು ನಡೆಸಲು ನಾವು ಬಿಡುವುದಿಲ್ಲ. ಎಲ್ಲರೂ ಇದನ್ನು ಬೆಂಬಲಿಸುತ್ತಿದ್ದಾರೆ. ಮೋದಿ ಸರ್ಕಾರ ಈ ಕಾನೂನುಗಳನ್ನು ಕಾರ್ಪೊರೇಟ್‌ಗಳ ಲಾಭಕ್ಕಾಗಿ ತಂದಿದೆ” ಎಂದು ಅವತಾರ್ ಸಿಂಗ್ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ಈ ಹಿಂದೆ, ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರೈತರು ಜಿಯೋ ಸಿಮ್‌ ಅನ್ನು ತಿರಸ್ಕರಿಸಿರುವುದರ ಹಿಂದೆ ಏರ್‌ಟೆಲ್ ಮತ್ತು ವೊಡಾಫೋನ್ ಕಂಪನಿಗಳ ಕೈವಾಡವಿದೆ ಎಂದು ಅಂಬಾನಿಯ ಜಿಯೋ ಕಂಪನಿ ಆರೋಪಿಸಿತ್ತು. ಜೊತೆಗೆ ಈ ಎರಡು ನೆಟ್‌ವರ್ಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಟೆಲಿಕಾಂ ರೆಗ್ಯುಲೇಟರ್ ಅಥಾರಿಟಿ ಆಫ್ ಇಂಡಿಯಾ (TRAI)ಗೆ ಡಿಸಂಬರ್ 10 ರಂದು ದೂರು ನೀಡಿತ್ತು.

ಜಿಯೋ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಭಾರತೀಯ ಏರ್‌ಟೆಲ್, “ಏರ್‌ಟೆಲ್, ಟೆಲಿಕಾಂ ಉದ್ಯಮದಲ್ಲಿ 25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಈ ಅವಧಿಯಲ್ಲಿ, ನಾವು ಮಾರುಕಟ್ಟೆಯಲ್ಲಿ ತೀವ್ರ ಪೈಪೋಟಿ ನೀಡಿದ್ದೇವೆ ಮತ್ತು ನಮ್ಮ ಗ್ರಾಹಕರಿಗೆ ಅತ್ಯುತ್ತಮ ಸೇವೆ ನೀಡಲು ಶ್ರಮಿಸಿದ್ದೇವೆ. ಅದೇ ಸಮಯದಲ್ಲಿ ನಮ್ಮ ಸ್ಪರ್ಧಿಗಳು ಮತ್ತು ಪಾಲುದಾರರನ್ನೂ ಗೌರವದಿಂದ ನಡೆಸಿಕೊಂಡಿದ್ದೇವೆ. ನಾವು ನಮ್ಮ ವ್ಯವಹಾರವನ್ನು ಪಾರದರ್ಶಕವಾಗಿ ನಡೆಸಿದ್ದೇವೆ. ಇದಕ್ಕೆ ನಮಗೆ ಬಹಳ ಹೆಮ್ಮೆಯಿದೆ” ಎಂದು ಹೇಳಿತ್ತು.

ಇದನ್ನೂ ಓದಿ: ಬಾಯ್ಕಾಟ್ ಅಭಿಯಾನ: ಏರ್‌ಟೆಲ್, ವೊಡಾಫೋನ್ ವಿರುದ್ಧ ದೂರು ನೀಡಿದ ಜಿಯೋ!

ಅಂಬಾನಿ ಮತ್ತು ಅವರ ಕಂಪನಿಗಳ ಉತ್ಪನ್ನಗಳಾದ ಪೆಟ್ರೋಲ್ ಪಂಪ್, ಜಿಯೋ ಸಿಮ್, ರಿಲಯನ್ಸ್ ಸೇರಿದಂತೆ ಇತರೆ ಉತ್ಪನ್ನಗಳನ್ನು ಬಾಯ್ಕಾಟ್ ಮಾಡುವಂತೆ ಪ್ರತಿಭಟನಾ ನಿರತ ರೈತರು ಇತ್ತೀಚೆಗೆ ಕರೆ ನೀಡಿದ್ದರು. ಕರ್ನಾಟಕದಲ್ಲಿಯೂ ಯುವಕರು ಜಿಯೋ ಸಿಮ್ ಇಂದ ಪೋರ್ಟಿಂಗ್ ಅಭಿಯಾನವನ್ನು ಕೈಗೊಂಡಿದ್ದರು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ಒತ್ತಾಯಿಸಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕೃಷಿ ಕಾನೂನುಗಳು ಪರೋಕ್ಷವಾಗಿ ಅಂಬಾನಿಗೆ ಸಹಕಾರಿಯಾಗುತ್ತದೆ ಎಂಬ ಕಾರಣಕ್ಕೆ ಅಂಬಾನಿ ಕಂಪನಿಯ ಉತ್ಪನ್ನಗಳನ್ನು ಬಾಯ್ಕಾಟ್‌ ಮಾಡಬೇಕು ಎಂದು ಕರೆ ನೀಡಲಾಗಿತ್ತು.


ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...