Homeರಾಷ್ಟ್ರೀಯರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ - ಜ.30ಕ್ಕೆ ಉಪವಾಸ ಸತ್ಯಾಗ್ರಹ

ರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ – ಜ.30ಕ್ಕೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ನಡೆಸಲು ಉದ್ದೇಶಿಸಿದ್ದ ಕಿಸಾನ್ ಪಾರ್ಲಿಮೆಂಟ್ ಚಲೋ ಪಾದಾಯಾತ್ರೆಯನ್ನು ಮೂಂದೂಡಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಮುಖಂಡರು ತಿಳಿಸಿದ್ದಾರೆ. ಬದಲಿಗೆ ಗಾಂಧಿ ಹುತಾತ್ಮ ದಿನದಂದು (ಜನವರಿ 30) ಉಪವಾಸ ಸತ್ಯಾಗ್ರಹ ಮತ್ತು ದೇಶದೆಲ್ಲೆಡೆ ಸಾರ್ವಜನಿಕ ರ್ಯಾಲಿ ನಡೆಸಲು ರೈತ ಮುಖಂಡರು ಕರೆ ನೀಡಿದ್ದಾರೆ.

ಇಂದು ಸಿಂಘು ಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಬಲ್ ಬೀರ್ ಎಸ್ ರಾಜೇವಾಲಾ, “ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಗಳಿಗೆ ಸರ್ಕಾರವೇ ಹೊಣೆ. ಹಾಗಾಗಿ ನಮ್ಮ ಶಾಂತಿಯುತ ಹೋರಾಟ ಮುಂದುವರೆಸುತ್ತೇವೆ. ಪಾರ್ಲಿಮೆಂಟ್ ಚಲೋ ಮುಂದೂಡುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ ರಾಜೀನಾಮೆ

ಸರ್ಕಾರದ ಇಂತಹ ಕೆಲಸಗಳಿಂದ ಪ್ರತಿಭಟನೆ ಮೇಲೆ ಯಾವುದೇ ಪ್ರಭಾವ ಬಿರುವುದಿಲ್ಲ. ಮೂರು ಕಾನೂನುಗಳನ್ನು ವಾಪಸ್ ಪಡೆಯುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ. ಈ ಪ್ರತಿಭಟನೆ ನಡೆಯುತ್ತಲೇ ಇರುತ್ತದೆ ಎಂದು ಅಸಿಶ್ ಮಿತ್ತಲ್ ತಿಳಿಸಿದರು.

ಯೋಗೇಂದ್ರ ಯಾದವ್ ಮಾತನಾಡಿ “ಕೆಂಪು ಕೋಟೆಯ ಘಟನೆ ನಡೆದ ನಂತರ 6.30 ಕ್ಕೆ ರ್ಯಾಲಿ ವಾಪಸ್ ಪಡೆಯಲಾಗಿತ್ತು. ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಮತ್ತು ದೀಪ್ ಸಿಧು ಮಾಡಿದ ಕೃತ್ಯಕ್ಕೆ ನಮ್ಮನ್ನು ಬಲಿ ಮಾಡಲಾಗುತ್ತಿದೆ. ದೀಪ್ ಸಿಧು ಬಗ್ಗೆ ಈ ದೇಶದ ಜನ ಈಗಾಗಲೇ ಎಲ್ಲಾ ತಿಳಿದುಕೊಂಡಿದ್ದಾರೆ. ಅವರ ಚಿತ್ರಗಳು, ಯಾರ ಯಾರ ಜೊತೆಗೆ ಇದ್ದಾರೆ ಎಂಬುದು ಗೊತ್ತಿದೆ. ನಿನ್ನೆ ನಡೆದ ಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ನಡೆಸಿದ್ದು ಅಲ್ಲ. ಆದರೂ ನಾವು ಅದರ ನೈತಿಕ ಹೊಣೆ ಹೊರುತ್ತೇವೆ. ಹೀಗಾಗಿ ನಾವು ಸಂಸತ್ ಚಲೋ ಮುಂದಕ್ಕೆ ಹಾಕಿದ್ದೇವೆ. ಆದರೆ ಈ ಪ್ರತಿಭಟನೆ ಮುಂದುವರೆಯಲಿದೆ. ಇನ್ನೂ ದೇಶದ ಜನರು ಬಂದು ಸೇರಿಕೊಳ್ಳಲಿದ್ದಾರೆ” ಎಂದಿದ್ದಾರೆ.

ರಾಕೇಶ್ ಟಿಕಾಯಟ್ ಮಾತನಾಡಿ “ಇದು ಪಂಜಾಬ್ ಅನ್ನು ದೇಶದಿಂದ ಹೊರಗಿಡಲು ಮತ್ತು ಪಂಜಾಬ್ ಹೆಸರನ್ನು ಹಾಳು ಮಾಡಲು ಸರ್ಕಾರ ಮಾಡಿದ ಕೆಲಸ. ಆದರೆ ಅದು ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...