Homeರಾಷ್ಟ್ರೀಯರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ - ಜ.30ಕ್ಕೆ ಉಪವಾಸ ಸತ್ಯಾಗ್ರಹ

ರೈತ ಹೋರಾಟ: ಪಾರ್ಲಿಮೆಂಟ್ ಚಲೋ ಮೂಂದೂಡಿಕೆ – ಜ.30ಕ್ಕೆ ಉಪವಾಸ ಸತ್ಯಾಗ್ರಹ

- Advertisement -
- Advertisement -

ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ನಡೆಸಲು ಉದ್ದೇಶಿಸಿದ್ದ ಕಿಸಾನ್ ಪಾರ್ಲಿಮೆಂಟ್ ಚಲೋ ಪಾದಾಯಾತ್ರೆಯನ್ನು ಮೂಂದೂಡಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಮುಖಂಡರು ತಿಳಿಸಿದ್ದಾರೆ. ಬದಲಿಗೆ ಗಾಂಧಿ ಹುತಾತ್ಮ ದಿನದಂದು (ಜನವರಿ 30) ಉಪವಾಸ ಸತ್ಯಾಗ್ರಹ ಮತ್ತು ದೇಶದೆಲ್ಲೆಡೆ ಸಾರ್ವಜನಿಕ ರ್ಯಾಲಿ ನಡೆಸಲು ರೈತ ಮುಖಂಡರು ಕರೆ ನೀಡಿದ್ದಾರೆ.

ಇಂದು ಸಿಂಘು ಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಬಲ್ ಬೀರ್ ಎಸ್ ರಾಜೇವಾಲಾ, “ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಗಳಿಗೆ ಸರ್ಕಾರವೇ ಹೊಣೆ. ಹಾಗಾಗಿ ನಮ್ಮ ಶಾಂತಿಯುತ ಹೋರಾಟ ಮುಂದುವರೆಸುತ್ತೇವೆ. ಪಾರ್ಲಿಮೆಂಟ್ ಚಲೋ ಮುಂದೂಡುತ್ತಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: ‘ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು’ – ಮತ್ತೋರ್ವ ಶಾಸಕ ರಾಜೀನಾಮೆ

ಸರ್ಕಾರದ ಇಂತಹ ಕೆಲಸಗಳಿಂದ ಪ್ರತಿಭಟನೆ ಮೇಲೆ ಯಾವುದೇ ಪ್ರಭಾವ ಬಿರುವುದಿಲ್ಲ. ಮೂರು ಕಾನೂನುಗಳನ್ನು ವಾಪಸ್ ಪಡೆಯುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ. ಈ ಪ್ರತಿಭಟನೆ ನಡೆಯುತ್ತಲೇ ಇರುತ್ತದೆ ಎಂದು ಅಸಿಶ್ ಮಿತ್ತಲ್ ತಿಳಿಸಿದರು.

ಯೋಗೇಂದ್ರ ಯಾದವ್ ಮಾತನಾಡಿ “ಕೆಂಪು ಕೋಟೆಯ ಘಟನೆ ನಡೆದ ನಂತರ 6.30 ಕ್ಕೆ ರ್ಯಾಲಿ ವಾಪಸ್ ಪಡೆಯಲಾಗಿತ್ತು. ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿ ಮತ್ತು ದೀಪ್ ಸಿಧು ಮಾಡಿದ ಕೃತ್ಯಕ್ಕೆ ನಮ್ಮನ್ನು ಬಲಿ ಮಾಡಲಾಗುತ್ತಿದೆ. ದೀಪ್ ಸಿಧು ಬಗ್ಗೆ ಈ ದೇಶದ ಜನ ಈಗಾಗಲೇ ಎಲ್ಲಾ ತಿಳಿದುಕೊಂಡಿದ್ದಾರೆ. ಅವರ ಚಿತ್ರಗಳು, ಯಾರ ಯಾರ ಜೊತೆಗೆ ಇದ್ದಾರೆ ಎಂಬುದು ಗೊತ್ತಿದೆ. ನಿನ್ನೆ ನಡೆದ ಘಟನೆಗಳು ಸಂಯುಕ್ತ ಕಿಸಾನ್ ಮೋರ್ಚಾ ನಡೆಸಿದ್ದು ಅಲ್ಲ. ಆದರೂ ನಾವು ಅದರ ನೈತಿಕ ಹೊಣೆ ಹೊರುತ್ತೇವೆ. ಹೀಗಾಗಿ ನಾವು ಸಂಸತ್ ಚಲೋ ಮುಂದಕ್ಕೆ ಹಾಕಿದ್ದೇವೆ. ಆದರೆ ಈ ಪ್ರತಿಭಟನೆ ಮುಂದುವರೆಯಲಿದೆ. ಇನ್ನೂ ದೇಶದ ಜನರು ಬಂದು ಸೇರಿಕೊಳ್ಳಲಿದ್ದಾರೆ” ಎಂದಿದ್ದಾರೆ.

ರಾಕೇಶ್ ಟಿಕಾಯಟ್ ಮಾತನಾಡಿ “ಇದು ಪಂಜಾಬ್ ಅನ್ನು ದೇಶದಿಂದ ಹೊರಗಿಡಲು ಮತ್ತು ಪಂಜಾಬ್ ಹೆಸರನ್ನು ಹಾಳು ಮಾಡಲು ಸರ್ಕಾರ ಮಾಡಿದ ಕೆಲಸ. ಆದರೆ ಅದು ಸಾಧ್ಯವಾಗುವುದಿಲ್ಲ” ಎಂದಿದ್ದಾರೆ.


ಇದನ್ನೂ ಓದಿ: ಕೆಂಪುಕೋಟೆ ಅಹಿತಕರ ಘಟನೆಯ ರೂವಾರಿ – ಯಾರು ಈ ದೀಪ್ ಸಿಧು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...