Homeಅಂತರಾಷ್ಟ್ರೀಯರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ - ಅಮೆರಿಕದ ಸಂಸದರ ಪತ್ರ

ರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ – ಅಮೆರಿಕದ ಸಂಸದರ ಪತ್ರ

"ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ"

- Advertisement -
- Advertisement -

ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ, ಅಮೆರಿಕದ ಏಳು ಪ್ರಭಾವಿ ಸಂಸದರ ತಂಡವೊಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರಿಗೆ ಪತ್ರ ಬರೆದಿದ್ದು, ರೈತರ ಪ್ರತಿಭಟನೆಯ ವಿಚಾರವನ್ನು ತಮ್ಮ ಭಾರತೀಯ ಸಹವರ್ತಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ” ಎಂದು ಸಂಸದರು ಡಿ. 23 ರಂದು ಪೊಂಪಿಯೊಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತೀಯ-ಅಮೆರಿಕನ್ ಸಂಸದೆ ಪ್ರಮೀಳಾ ಜಯಪಾಲ್ ಸೇರಿದಂತೆ ಸಂಸದರಾದ ಡೊನಾಲ್ಡ್ ನ್ಯಾಕ್ರೋಸ್, ಬ್ರೆಂಡನ್ ಎಫ್ ಬೊಯ್ಲೆ, ಬ್ರಿಯಾನ್ ಫಿಟ್ಜ್‌ಪ್ಯಾಟ್ರಿಕ್, ಮೇರಿ ಗೇ ಸ್ಕ್ಯಾನ್‌ಲಾನ್, ಡೆಬ್ಬಿ ಡಿಂಗಲ್ ಮತ್ತು ಡೇವಿಡ್ ಟ್ರೋನ್ ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

“ಅನೇಕ ಭಾರತೀಯ ಅಮೆರಿಕನ್ನರ ಪ್ರಕಾರ, ಈ ಪ್ರತಿಭಟನೆ ಪಂಜಾ‌ಬ್‌ನಲ್ಲಿರುವ ತಮ್ಮ ಕುಟುಂಬ ಸದಸ್ಯರು ಮತ್ತು ಪೂರ್ವಜರ ಭೂಮಿಯನ್ನು ಹೊಂದಿರುವವರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಭಾರತದಲ್ಲಿರುವ ತಮ್ಮ ಕುಟುಂಬಗಳ ಮೇಲೆ ಅವರು ಕಾಳಜಿ ಹೊಂದಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ರಾಜಕೀಯ ವಾಕ್ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಬದ್ಧತೆಯನ್ನು ಬಲಪಡಿಸುವದಕ್ಕೆ ಸಂಬಂಧಿಸಿದಂತೆ ನಿಮ್ಮ ಭಾರತೀಯ ಸಹವರ್ತಿಯನ್ನು ಸಂಪರ್ಕಿಸಲು ನಾವು ನಿಮ್ಮನ್ನು ಈ ಪತ್ರದ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಬರೆದಿದ್ದಾರೆ.

“ಭಾರತದ ರಾಜಕೀಯ ಪ್ರತಿಭಟನೆಗಳ ಕುರಿತು ಅಮೆರಿಕಾಗೆ ಪರಿಚಯವಿರುವುದರಿಂದ, ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಲಹೆಗಳನ್ನು ನೀಡಬಹುದು. ರಾಷ್ಟ್ರವೊಂದರ ಸಂಸದರಾಗಿ, ಅಸ್ತಿತ್ವದಲ್ಲಿರುವ ಕಾನೂನಿಗೆ ಅನುಸಾರವಾಗಿ ರಾಷ್ಟ್ರೀಯ ನೀತಿಯನ್ನು ನಿರ್ಧರಿಸುವ ಭಾರತ ಸರ್ಕಾರದ ಹಕ್ಕನ್ನು ನಾವು ಗೌರವಿಸುತ್ತೇವೆ. ಈ ಕೃಷಿ ಕಾನೂನುಗಳು ತಮ್ಮ ಆರ್ಥಿಕ ಭದ್ರತೆಯ ಮೇಲಿನ ಆಕ್ರಮಣ ಮಾಡುತ್ತದೆ ಎಂದು ಹಲವಾರು ಭಾರತೀಯ ರೈತರು ಭಾವಿಸಿದ್ದು, ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಭಾರತ ಮತ್ತು ವಿದೇಶದಲ್ಲಿರುವವರ ಹಕ್ಕುಗಳನ್ನು ನಾವು ಅಂಗೀಕರಿಸಿದ್ದೇವೆ” ಎಂದು ಸಂಸದರು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಸುಟ್ಟ ದಿನ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ 30ನೇ ದಿನಕ್ಕೆ ಕಾಲಿಟ್ಟಿದೆ.

ಈ ಹಿಂದೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಸಹ ಭಾರತೀಯ ರೈತರ ಹೋರಾಟಕ್ಕೆ ಬೆಂಬಲಿಸಿದ್ದರು. ಇದಕ್ಕೆ ಭಾರತದ ಆಕ್ಷೇಪ ವ್ಯಕ್ತಪಡಿಸಿದರೂ ಲೆಕ್ಕಿಸದೆ ಜಗತ್ತಿನ ಎಲ್ಲಾ ಶಾಂತಿಯುತ ಹೋರಾಟಗಳನ್ನು ಕೆನಡಾ ಬೆಂಬಲಿಸುತ್ತದೆ ಎಂದು ಘೋಷಿಸಿದ್ದರು.

ರೈತರ ಪ್ರತಿಭಟನೆ ವಿಚಾರವಾಗಿ ವಿದೇಶಿ ನಾಯಕರು ಮತ್ತು ರಾಜಕಾರಣಿಗಳು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳನ್ನು ಭಾರತವು ವಿರೋಧಿಸಿದ್ದು, ಇಂತಹ ಹೇಳಿಕೆಗಳು ‘ಅನಪೇಕ್ಷಿತ’ ಮತ್ತು ‘ಅನಗತ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಜೊತೆಗೆ ಈ ವಿಚಾರವು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

“ಭಾರತದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ವಿಶೇಷವಾಗಿ ಪ್ರಜಾಪ್ರಭುತ್ವ ರಾಷ್ಟ್ರವೊಂದರ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರಗಳಿಗೆ ಇಂತಹ ಹೇಳಿಕೆಗಳು ಅನಗತ್ಯ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದರು.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...