Homeಅಂತರಾಷ್ಟ್ರೀಯರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ - ಅಮೆರಿಕದ ಸಂಸದರ ಪತ್ರ

ರೈತ ಹೋರಾಟ: ಭಾರತದೊಂದಿಗೆ ಮಾತನಾಡುವಂತೆ ಒತ್ತಾಯ – ಅಮೆರಿಕದ ಸಂಸದರ ಪತ್ರ

"ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ"

- Advertisement -
- Advertisement -

ದೇಶದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ, ಅಮೆರಿಕದ ಏಳು ಪ್ರಭಾವಿ ಸಂಸದರ ತಂಡವೊಂದು ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಅವರಿಗೆ ಪತ್ರ ಬರೆದಿದ್ದು, ರೈತರ ಪ್ರತಿಭಟನೆಯ ವಿಚಾರವನ್ನು ತಮ್ಮ ಭಾರತೀಯ ಸಹವರ್ತಿಯೊಂದಿಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಇದು ನಿರ್ದಿಷ್ಟವಾಗಿ ಅಮೆರಿಕದಲ್ಲಿರುವ ಸಿಖ್ಖರಿಗೆ ಸಂಬಂಧಿಸಿದ ಸಮಸ್ಯೆಯಾಗಿದೆ. ಆದರೂ ಇದು ಇತರ ರಾಜ್ಯಗಳ ಭಾರತೀಯ ಅಮೆರಿಕನ್ನರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ” ಎಂದು ಸಂಸದರು ಡಿ. 23 ರಂದು ಪೊಂಪಿಯೊಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಭಾರತೀಯ-ಅಮೆರಿಕನ್ ಸಂಸದೆ ಪ್ರಮೀಳಾ ಜಯಪಾಲ್ ಸೇರಿದಂತೆ ಸಂಸದರಾದ ಡೊನಾಲ್ಡ್ ನ್ಯಾಕ್ರೋಸ್, ಬ್ರೆಂಡನ್ ಎಫ್ ಬೊಯ್ಲೆ, ಬ್ರಿಯಾನ್ ಫಿಟ್ಜ್‌ಪ್ಯಾಟ್ರಿಕ್, ಮೇರಿ ಗೇ ಸ್ಕ್ಯಾನ್‌ಲಾನ್, ಡೆಬ್ಬಿ ಡಿಂಗಲ್ ಮತ್ತು ಡೇವಿಡ್ ಟ್ರೋನ್ ಈ ಪತ್ರಕ್ಕೆ ಸಹಿ ಹಾಕಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಮಹರ್ ಸೈನಿಕರ ‘ಭೀಮಾ ಕೋರೆಗಾಂವ್’ ಹೋರಾಟ ನೆನಪಿಸುವ ಕನ್ನಡ ಹಾಡು…

“ಅನೇಕ ಭಾರತೀಯ ಅಮೆರಿಕನ್ನರ ಪ್ರಕಾರ, ಈ ಪ್ರತಿಭಟನೆ ಪಂಜಾ‌ಬ್‌ನಲ್ಲಿರುವ ತಮ್ಮ ಕುಟುಂಬ ಸದಸ್ಯರು ಮತ್ತು ಪೂರ್ವಜರ ಭೂಮಿಯನ್ನು ಹೊಂದಿರುವವರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ಭಾರತದಲ್ಲಿರುವ ತಮ್ಮ ಕುಟುಂಬಗಳ ಮೇಲೆ ಅವರು ಕಾಳಜಿ ಹೊಂದಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ವಿದೇಶದಲ್ಲಿ ರಾಜಕೀಯ ವಾಕ್ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಬದ್ಧತೆಯನ್ನು ಬಲಪಡಿಸುವದಕ್ಕೆ ಸಂಬಂಧಿಸಿದಂತೆ ನಿಮ್ಮ ಭಾರತೀಯ ಸಹವರ್ತಿಯನ್ನು ಸಂಪರ್ಕಿಸಲು ನಾವು ನಿಮ್ಮನ್ನು ಈ ಪತ್ರದ ಮೂಲಕ ಒತ್ತಾಯಿಸುತ್ತಿದ್ದೇವೆ” ಎಂದು ಬರೆದಿದ್ದಾರೆ.

“ಭಾರತದ ರಾಜಕೀಯ ಪ್ರತಿಭಟನೆಗಳ ಕುರಿತು ಅಮೆರಿಕಾಗೆ ಪರಿಚಯವಿರುವುದರಿಂದ, ಸದ್ಯದ ಪರಿಸ್ಥಿತಿಯಲ್ಲಿ ಭಾರತಕ್ಕೆ ಸಲಹೆಗಳನ್ನು ನೀಡಬಹುದು. ರಾಷ್ಟ್ರವೊಂದರ ಸಂಸದರಾಗಿ, ಅಸ್ತಿತ್ವದಲ್ಲಿರುವ ಕಾನೂನಿಗೆ ಅನುಸಾರವಾಗಿ ರಾಷ್ಟ್ರೀಯ ನೀತಿಯನ್ನು ನಿರ್ಧರಿಸುವ ಭಾರತ ಸರ್ಕಾರದ ಹಕ್ಕನ್ನು ನಾವು ಗೌರವಿಸುತ್ತೇವೆ. ಈ ಕೃಷಿ ಕಾನೂನುಗಳು ತಮ್ಮ ಆರ್ಥಿಕ ಭದ್ರತೆಯ ಮೇಲಿನ ಆಕ್ರಮಣ ಮಾಡುತ್ತದೆ ಎಂದು ಹಲವಾರು ಭಾರತೀಯ ರೈತರು ಭಾವಿಸಿದ್ದು, ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಭಾರತ ಮತ್ತು ವಿದೇಶದಲ್ಲಿರುವವರ ಹಕ್ಕುಗಳನ್ನು ನಾವು ಅಂಗೀಕರಿಸಿದ್ದೇವೆ” ಎಂದು ಸಂಸದರು ತಿಳಿಸಿದ್ದಾರೆ.

ಇದನ್ನೂ ಓದಿ: ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಸುಟ್ಟ ದಿನ

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ 30ನೇ ದಿನಕ್ಕೆ ಕಾಲಿಟ್ಟಿದೆ.

ಈ ಹಿಂದೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಸಹ ಭಾರತೀಯ ರೈತರ ಹೋರಾಟಕ್ಕೆ ಬೆಂಬಲಿಸಿದ್ದರು. ಇದಕ್ಕೆ ಭಾರತದ ಆಕ್ಷೇಪ ವ್ಯಕ್ತಪಡಿಸಿದರೂ ಲೆಕ್ಕಿಸದೆ ಜಗತ್ತಿನ ಎಲ್ಲಾ ಶಾಂತಿಯುತ ಹೋರಾಟಗಳನ್ನು ಕೆನಡಾ ಬೆಂಬಲಿಸುತ್ತದೆ ಎಂದು ಘೋಷಿಸಿದ್ದರು.

ರೈತರ ಪ್ರತಿಭಟನೆ ವಿಚಾರವಾಗಿ ವಿದೇಶಿ ನಾಯಕರು ಮತ್ತು ರಾಜಕಾರಣಿಗಳು ಇತ್ತೀಚೆಗೆ ನೀಡುತ್ತಿರುವ ಹೇಳಿಕೆಗಳನ್ನು ಭಾರತವು ವಿರೋಧಿಸಿದ್ದು, ಇಂತಹ ಹೇಳಿಕೆಗಳು ‘ಅನಪೇಕ್ಷಿತ’ ಮತ್ತು ‘ಅನಗತ್ಯ’ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು. ಜೊತೆಗೆ ಈ ವಿಚಾರವು ಪ್ರಜಾಪ್ರಭುತ್ವ ರಾಷ್ಟ್ರದ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ್ದು ಎಂದು ಪ್ರತಿಪಾದಿಸಿದೆ.

ಇದನ್ನೂ ಓದಿ: ಅಜಾತಶತ್ರು? ಆಹಾ ಗೆಳೆಯನೇ ಇದು ಅತ್ಯಂತ ಕೆಟ್ಟ ಬಿರುದು!- ’ಭಗತ್‌ ಸಿಂಗ್ ಜೈಲ್ ಡೈರಿ’

“ಭಾರತದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಕೆಲವರು ಹೇಳಿಕೆ ನೀಡುತ್ತಿದ್ದಾರೆ. ವಿಶೇಷವಾಗಿ ಪ್ರಜಾಪ್ರಭುತ್ವ ರಾಷ್ಟ್ರವೊಂದರ ಆಂತರಿಕ ವ್ಯವಹಾರಗಳಿಗೆ ಸಂಬಂಧಿಸಿದ ವಿಚಾರಗಳಿಗೆ ಇಂತಹ ಹೇಳಿಕೆಗಳು ಅನಗತ್ಯ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದರು.

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ತಮಿಳುನಾಡಿನಲ್ಲಿ ಮತ್ತೊಂದು ಹೊಸ ಪಕ್ಷ – ಕರುಣಾನಿಧಿ ಹಿರಿಯ ಪುತ್ರ ಎಂ.ಕೆ. ಅಳಗಿರಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...