Homeಮುಖಪುಟರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದ ನಡುವೆಯ ನಡೆದ ಪಂಜಾಬ್ ಸ್ಥಳೀಯ ನಗರ ಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದೆ. ರೈತ ಹೋರಾಟದ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಧೂಳಿಪಟವಾದರೆ ಕಾಂಗ್ರೆಸ್ ಸಂಪೂರ್ಣ ಲಾಭ ಪಡೆದುಕೊಂಡಿದ್ದು ಭರ್ಜರಿ ಜಯ ಸಾಧಿಸಿದೆ.

7 ಮುನ್ಸಿಪಲ್ ಕಾರ್ಪೋರೇಷನ್‌ಗಳಲ್ಲಿ 7ನ್ನು ಕಾಂಗ್ರೆಸ್ ಗೆದ್ದು ಬೀಗಿದೆ. ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್, ಬತಾಲ ಮತ್ತು ಬಟಿಂಡಾ ಮುನ್ಸಿಪಲ್ ಕಾರ್ಪೋರೇಷನ್‌ಗಳು ಕಾಂಗ್ರೆಸ್ ಪಾಲಾಗಿವೆ. ಎಸ್‌ಎಎಸ್‌ ನಗರದ ಮತ ಎಣಿಕೆಯು ಫೆಬ್ರವರಿ 18ರವರೆಗೆ ನಡೆಯುತ್ತದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಮುನ್ಸಿಪಲ್ ಕೌನ್ಸಿಲ್‌ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 109 ಮುನ್ಸಿಪಲ್ ಕೌನ್ಸಿಲ್‌ಗಳಲ್ಲಿ 80ರ ಮತ ಎಣಿಕೆ ಮುಗಿದಿದ್ದು ಕಾಂಗ್ರೆಸ್ ಪಕ್ಷವು 65 ಕೌನ್ಸಿಲ್‌ಗಳನ್ನು ತನ್ನದಾಗಿಸಿಕೊಂಡಿದೆ. ಅಕಾಲಿ ದಳ 05ರಲ್ಲಿ ಗೆಲುವು ಸಾಧಿಸಿದೆ. ಅವುಗಳ ವಿವರ ಈ ಕೆಳಗಿನಂತಿದೆ.

ಫೆರೋಜೆಪುರ

ಫೆರೋಜೆಪುರ ಮುನ್ಸಿಪಲ್ ಕೌನ್ಸಿಲ್‌ನ 33 ಸ್ಥಾನಗಳಲ್ಲಿ 33 ಅನ್ನು ಕಾಂಗ್ರೆಸ್‌ ಗೆದ್ದುಕೊಂಡಿದೆ. ಈ ರೀತಿಯ ಶೇ.100 ಸ್ಥಾನಗಳಲ್ಲಿ ಹಿಂದೆ ಎಂದೂ ಯಾರೂ ಗೆದ್ದಿಲ್ಲ ಎಂದು ಕಾಂಗ್ರೆಸ್ ಶಾಸಕ ಪರಮಿಂದರ್ ಸಿಂಗ್ ಪಿಂಕಿ ಹೇಳಿದ್ದಾರೆ.

ಪಠಾಣ್‌ಕೋಟ್

ಬಿಜೆಪಿಯು ತನ್ನ ಭದ್ರಕೋಟೆಯಾದ ಪಠಾಣ್‌ಕೋಟ್‌ನಲ್ಲಿ ಭಾರೀ ಮುಖಭಂಗ ಅನುಭವಿಸಿದೆ. 50 ಸ್ಥಾನಗಳಲ್ಲಿ 37 ಸ್ಥಾನಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಬಿಜೆಪಿ 11 ಸ್ಥಾನಗಳಿಗೆ ಸೀಮಿತಗೊಂಡಿದೆ.

ಸುಜಾನ್ ಪುರ್

15 ಸ್ಥಾನಗಳಲ್ಲಿ ಕಾಂಗ್ರೆಸ್ 8 ನ್ನು ಗೆಲ್ಲುವ ಮೂಲಕ ಕೌನ್ಸಿಲ್‌ ಅನ್ನು ತನ್ನದಾಗಿಸಿಕೊಂಡಿದೆ. ಬಿಜೆಪಿ 5 ಮತ್ತು ಪಕ್ಷೇತರರು 2 ಸ್ಥಾನಗಳಲ್ಲಿ ಜಯಿಸಿದ್ದಾರೆ.

ಜೈತು

17 ಸ್ಥಾನಗಳಲ್ಲಿ ಕಾಂಗ್ರೆಸ್ 7, ಅಕಾಲಿ ದಳ 3, ಪಕ್ಷೇತರರು 4 ಸ್ಥಾನಗಳಲ್ಲಿ ಜಯಿಸಿದ್ದಾರೆ.

ಕೋಠಾಕ್‌ಪುರ

ಕಾಂಗ್ರೆಸ್ 21 ವಾರ್ಡ್‌ಗಳಲ್ಲಿ, ಬಿಜೆಪಿ 5 ಮತ್ತು ಆಪ್ 3 ವಾರ್ಡ್‌ಗಳಲ್ಲಿ ಜಯಸಿದ್ದಾರೆ.

ಫರೀದ್‌ಕೋಟ್

25 ವಾರ್ಡ್‌ಗಳಲ್ಲಿ ಕಾಂಗ್ರೆಸ್ 16, ಅಕಾಲಿದಳ 7, ಆಪ್ 1 ಮತ್ತು ಪಕ್ಷೇತರರು 1 ವಾರ್ಡ್‌ಗಳಲ್ಲಿ ಜಯಿಸಿದ್ದಾರೆ.

ದೇರಾ ಬಸ್ಸಿ

19 ರಲ್ಲಿ ಕಾಂಗ್ರೆಸ್ 13 ವಾರ್ಡ್‌ಗಳಲ್ಲಿ ಜಯಗಳಿಸಿದೆ. ಬಿಜೆಪಿ 1 ಕ್ಕೆ ಸೀಮಿತವಾಗಿದೆ.

ಫೈಜಿಲ್ಕ

19 ವಾರ್ಡ್‌ಗಳಲ್ಲಿ ಕಾಂಗ್ರೆಸ್, 4 ರಲ್ಲಿ ಬಿಜೆಪಿ ಮತ್ತು 2 ರಲ್ಲಿ ಆಪ್ ಜಯಿಸಿದೆ.


ಇದನ್ನೂ ಓದಿ: ಪಂಜಾಬ್: ಬಟಿಂಡಾದಲ್ಲಿ 53 ವರ್ಷಗಳ ಬಳಿಕ ಮೇಯರ್ ಸ್ಥಾನ ಕಾಂಗ್ರೆಸ್‌ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...