Homeಮುಖಪುಟರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

- Advertisement -
- Advertisement -

ಹಲವು ಟ್ವಿಟ್ಟರ್‌ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಐಟಿ ಸಚಿವಾಲಯ ನಿರ್ದೇಶನ ನೀಡಿದ ಹೊರತಾಗಿಯು ರೈತ ಹೋರಾಟವನ್ನು ಬೆಂಬಲಿಸುವ ಹಲವು ಖಾತೆಗಳನ್ನು ಪುನಃ ಸ್ಥಾಪಿಸಿರುವ ಟ್ವಿಟ್ಟರ್‌ ವಿರುದ್ದ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಸರ್ಕಾರವು ಟ್ವಿಟ್ಟರ್‌ಗೆ 18 ಪುಟಗಳ ನೋಟಿಸ್ ಜಾರಿ ಮಾಡಿದ್ದು, ತನ್ನ ನೋಟಿಸ್‌ನಲ್ಲಿ ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ಹೊರಡಿಸಲಾದ ನಿರ್ದೇಶನಗಳನ್ನು ಪಾಲಿಸದಿರುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಹಲವಾರು ಖಾತೆಗಳನ್ನು ನಿರ್ಬಂಧಿಸಿದ್ದ ಟ್ವಿಟ್ಟರ್‌ ಸೋಮವಾರ ರಾತ್ರಿಯೆ ಅವುಗಳನ್ನು ಮರುಸ್ಥಾಪಿಸಿತ್ತು.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

 

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಈ ಖಾತೆಗಳನ್ನು ತೆಗೆದುಹಾಕುವಂತೆ ಐಟಿ ಸಚಿವಾಲಯ ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಇದರಿಂದಾಗಿ ಸೋಮವಾರ ಬೆಳಿಗ್ಗೆ ಸುಮಾರು 100 ಟ್ವಿಟ್ಟರ್ ಖಾತೆಗಳು ಮತ್ತು ರೈತರ ಪ್ರತಿಭಟನೆಗೆ ಸಂಬಂಧಿಸಿದ 150 ಟ್ವೀಟ್‌ಗಳು ಟ್ವಿಟ್ಟರ್‌ ತೆಗೆದು ಹಾಕಿತ್ತು. ಆದರೆ, ಐಟಿ ಸಚಿವಾಲಯದ ಅಧಿಕಾರಿಗಳೊಂದಿಗಿನ ಸಭೆಯ ನಂತರ ಸೋಮವಾರ ತಡರಾತ್ರಿ ಖಾತೆಗಳನ್ನು ಪುನಃ ಸ್ಥಾಪಿಸಿತ್ತು.

“ಅಧಿಕಾರಿಗಳೊಂದಿಗೆ ನಮ್ಮ ಚರ್ಚೆಗಳು ಬಾಕಿ ಉಳಿದಿವೆ. ಸಚಿವಾಲಯದ ಕಾನೂನು ಕೋರಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಈ ಖಾತೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದೇವೆ. ನಂತರ ಅಧಿಕಾರಿಗಳೊಂದಿಗೆ ನಡೆದ ಸಭೆಗಳಲ್ಲಿ, ಆ ಖಾತೆಗಳಲ್ಲಿನ ಪ್ರಶ್ನೆಗಳು ಮತ್ತು ಟ್ವೀಟ್‌ಗಳು ವಾಕ್‌ಸ್ವಾತಂತ್ಯ್ರ ಮತ್ತು ಸುದ್ದಿ ಮೌಲ್ಯವನ್ನು ಹೊಂದಿದೆ ಎಂದು ತಿಳಿಸಿದ್ದೇವೆ. ಆದ್ದರಿಂದ ಆ ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಭಂದಿಸಿಲ್ಲ. ಸಾರ್ವಜನಿಕರ ಅಭಿಪ್ರಾಯಗಳು ಮತ್ತು ಪಾರದರ್ಶಕತೆಯನ್ನು ರಕ್ಷಿಸುವುದು ಟ್ವಿಟ್ಟರ್‌‌ನ ಮೂಲಭೂತ ಕೆಲಸವಾಗಿದೆ” ಎಂದು ಟ್ವಿಟ್ಟರ್ ಮೂಲಗಳು ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...