Homeಮುಖಪುಟರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

ರೈತ ಹೋರಾಟದ ಬೆಂಬಲಿಗರ ಖಾತೆ ಅನ್‌ಬ್ಲಾಕ್: ಟ್ವಿಟ್ಟರ್‌ಗೆ ನೋಟಿಸ್ ಕಳುಹಿಸಿದ ಕೇಂದ್ರ

- Advertisement -
- Advertisement -

ಹಲವು ಟ್ವಿಟ್ಟರ್‌ ಖಾತೆಗಳನ್ನು ನಿರ್ಬಂಧಿಸಲು ಕೇಂದ್ರ ಐಟಿ ಸಚಿವಾಲಯ ನಿರ್ದೇಶನ ನೀಡಿದ ಹೊರತಾಗಿಯು ರೈತ ಹೋರಾಟವನ್ನು ಬೆಂಬಲಿಸುವ ಹಲವು ಖಾತೆಗಳನ್ನು ಪುನಃ ಸ್ಥಾಪಿಸಿರುವ ಟ್ವಿಟ್ಟರ್‌ ವಿರುದ್ದ ಕೇಂದ್ರ ಸರ್ಕಾರ ನೋಟಿಸ್ ಜಾರಿ ಮಾಡಿದೆ.

ಕೇಂದ್ರ ಸರ್ಕಾರವು ಟ್ವಿಟ್ಟರ್‌ಗೆ 18 ಪುಟಗಳ ನೋಟಿಸ್ ಜಾರಿ ಮಾಡಿದ್ದು, ತನ್ನ ನೋಟಿಸ್‌ನಲ್ಲಿ ಐಟಿ ಕಾಯಿದೆಯ ಸೆಕ್ಷನ್ 69 ಎ ಅಡಿಯಲ್ಲಿ ಹೊರಡಿಸಲಾದ ನಿರ್ದೇಶನಗಳನ್ನು ಪಾಲಿಸದಿರುವ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿದೆ. ಹಲವಾರು ಖಾತೆಗಳನ್ನು ನಿರ್ಬಂಧಿಸಿದ್ದ ಟ್ವಿಟ್ಟರ್‌ ಸೋಮವಾರ ರಾತ್ರಿಯೆ ಅವುಗಳನ್ನು ಮರುಸ್ಥಾಪಿಸಿತ್ತು.

ಇದನ್ನೂ ಓದಿ: ಕಿಸಾನ್‌ ಏಕ್ತಾ ಮೋರ್ಚಾ ಸೇರಿ ಹಲವರ ಟ್ವಿಟರ್‌ ಖಾತೆ ತಾತ್ಕಾಲಿಕ ಅಮಾನತು! ಭುಗಿಲೆದ್ದ ಆಕ್ರೋಶ

 

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಈ ಖಾತೆಗಳನ್ನು ತೆಗೆದುಹಾಕುವಂತೆ ಐಟಿ ಸಚಿವಾಲಯ ಟ್ವಿಟ್ಟರ್‌ಗೆ ನಿರ್ದೇಶನ ನೀಡಿತ್ತು. ಇದರಿಂದಾಗಿ ಸೋಮವಾರ ಬೆಳಿಗ್ಗೆ ಸುಮಾರು 100 ಟ್ವಿಟ್ಟರ್ ಖಾತೆಗಳು ಮತ್ತು ರೈತರ ಪ್ರತಿಭಟನೆಗೆ ಸಂಬಂಧಿಸಿದ 150 ಟ್ವೀಟ್‌ಗಳು ಟ್ವಿಟ್ಟರ್‌ ತೆಗೆದು ಹಾಕಿತ್ತು. ಆದರೆ, ಐಟಿ ಸಚಿವಾಲಯದ ಅಧಿಕಾರಿಗಳೊಂದಿಗಿನ ಸಭೆಯ ನಂತರ ಸೋಮವಾರ ತಡರಾತ್ರಿ ಖಾತೆಗಳನ್ನು ಪುನಃ ಸ್ಥಾಪಿಸಿತ್ತು.

“ಅಧಿಕಾರಿಗಳೊಂದಿಗೆ ನಮ್ಮ ಚರ್ಚೆಗಳು ಬಾಕಿ ಉಳಿದಿವೆ. ಸಚಿವಾಲಯದ ಕಾನೂನು ಕೋರಿಕೆಗೆ ಪ್ರತಿಕ್ರಿಯೆಯಾಗಿ ಭಾರತದಲ್ಲಿ ಈ ಖಾತೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದೇವೆ. ನಂತರ ಅಧಿಕಾರಿಗಳೊಂದಿಗೆ ನಡೆದ ಸಭೆಗಳಲ್ಲಿ, ಆ ಖಾತೆಗಳಲ್ಲಿನ ಪ್ರಶ್ನೆಗಳು ಮತ್ತು ಟ್ವೀಟ್‌ಗಳು ವಾಕ್‌ಸ್ವಾತಂತ್ಯ್ರ ಮತ್ತು ಸುದ್ದಿ ಮೌಲ್ಯವನ್ನು ಹೊಂದಿದೆ ಎಂದು ತಿಳಿಸಿದ್ದೇವೆ. ಆದ್ದರಿಂದ ಆ ಟ್ವೀಟ್‌ಗಳು ಮತ್ತು ಖಾತೆಗಳನ್ನು ನಿರ್ಭಂದಿಸಿಲ್ಲ. ಸಾರ್ವಜನಿಕರ ಅಭಿಪ್ರಾಯಗಳು ಮತ್ತು ಪಾರದರ್ಶಕತೆಯನ್ನು ರಕ್ಷಿಸುವುದು ಟ್ವಿಟ್ಟರ್‌‌ನ ಮೂಲಭೂತ ಕೆಲಸವಾಗಿದೆ” ಎಂದು ಟ್ವಿಟ್ಟರ್ ಮೂಲಗಳು ತಿಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಇದನ್ನೂ ಓದಿ: ಅಮಿತ್ ಶಾ ಟ್ವಿಟರ್ ಖಾತೆ ಬ್ಲಾಕ್: ಟ್ವಿಟರ್ ಅನ್ನು ತರಾಟೆಗೆ ತೆಗೆದುಕೊಂಡ ಸಂಸದೀಯ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...