Homeಮುಖಪುಟರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

ರೈತ ಹೋರಾಟ: ಬೆಂಗಳೂರಿನಲ್ಲಿ 10,000 ರೈತರಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಟ್ರಾನ್ಸ್ ಜೆಂಡರ್ ಸಮುದಾಯ!

"ಇಷ್ಟು ದಿನ ಅನ್ನ ಹಾಕಿದ ರೈತರಿಗೆ ಹೋರಾಟದ ದಿನ ನಾವು ಊಟ ನೀಡುತ್ತಿದ್ದೇವೆ. ಇದು ನಮ್ಮ ಕರ್ತವ್ಯ. ನಾವು ರೈತರ ಹೋರಾಟದೊಂದಿಗೆ ಇದ್ದೇವೆ"

- Advertisement -
- Advertisement -

ಇಂದು ದೇಶಾದ್ಯಂತ ಐತಿಹಾಸಿಕ ಟ್ರ್ಯಾಕ್ಟರ್ ರ್ಯಾಲಿ ನಡೆಯುತ್ತಿದೆ. ದೆಹಲಿಯಲ್ಲಾಗಲೇ ರೈತರು ಬ್ಯಾರಿಕೇಡ್‌ಗಳನ್ನು ಮುರಿದು ಶಾಂತಿಯುತ ಪರೇಡ್ ಶುರು ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿಯೂ ಜನ ಗಣರಾಜ್ಯೋತ್ಸವಕ್ಕೆ ಭರ್ಜರಿ ಸಿದ್ದತೆ ನಡೆದಿದ್ದು ಸಾವಿರಾರು ಜನ ರಾಜಧಾನಿಯತ್ತ ಮೆರವಣಿಗೆ ಹೊರಟಿದ್ದಾರೆ. ಅವರಿಗೆಲ್ಲರಿಗೂ ಬೆಳಗ್ಗಿನ ತಿಂಡಿ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಟ್ರಾನ್ಸ್ ಜೆಂಡರ್ ಸಂಘಟನೆಗಳು ಮಾಡಿದ್ದು ಮೆಚ್ಚುಗೆಗೆ ಪಾತ್ರವಾಗಿವೆ.

ಇಂದು ಬೆಳಿಗ್ಗೆಯೇ ರೈಲ್ವೇ ನಿಲ್ದಾಣದ ಬಳಿ ಜಮಾಯಿಸಿರುವ ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆಗಳು ಹೋರಾಟಕ್ಕಾಗಿ ಆಗಮಿಸುವ 10,000 ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿವೆ. ಆ ಮೂಲಕ “ಇಷ್ಟು ದಿನ ಅನ್ನ ಹಾಕಿದ ರೈತರಿಗೆ ಹೋರಾಟದ ದಿನ ನಾವು ಊಟ ನೀಡುತ್ತಿದ್ದೇವೆ. ಇದು ನಮ್ಮ ಕರ್ತವ್ಯ. ನಾವು ರೈತರ ಹೋರಾಟದೊಂದಿಗೆ ಇದ್ದೇವೆ” ಎಂದು ಸಾರಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ವೀಣಾ ಮಾತನಾಡಿ “ಇಂದು ನಾವು ಜನ ಗಣರಾಜ್ಯೋತ್ಸವ ಮಾಡುತ್ತಿದ್ದೇವೆ. ಇಂದು ದೇಶದಲ್ಲಿನ ರೈತರ ಪರಿಸ್ಥಿತಿ ನೋಡಿ ನಮಗೆ ದಿಗ್ಭ್ರಮೆಯಾಗಿದೆ. ಇಂದು ನಾವೆಲ್ಲ ಜೀವಂತವಾಗಿದ್ದೇವೆ ಎಂದರೆ ಅದಕ್ಕೆ ರೈತರೇ ಕಾರಣ. ಅಂತಹ ರೈತರ ಮೇಲೆ ಈ ಕ್ರೂರ ಬಿಜೆಪಿ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಅನ್ನ ನೀಡುವ ರೈತರ ಮೇಲೆ ಕೇಂದ್ರ ಸರ್ಕಾರ ಕಾಲಿನಿಂದ ಒದೆಯುತ್ತಿದೆ. ಅಂತಹ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸಲು ನಾವು ಹೋರಾಟಕ್ಕೆ ಬಂದಿದ್ದೇವೆ. ಹೋರಾಟಕ್ಕೆ ಲೈಂಗಿಕ ಅಲ್ಪಸಂಖ್ಯಾತರ ಬೆಂಬಲವಿದೆ ಎಂದು ತಿಳಿಸಲು ಹತ್ತು ಸಾವಿರ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದೇವೆ. ನಾವು ನಿಮ್ಮ ಜೊತೆಗಿದ್ದೇವೆ ಎಂದು ಸಾರುತ್ತಿದ್ದೇವೆ” ಎಂದಿದ್ದಾರೆ.

ಇಂದು ರಾಯಚೂರು, ಬಳ್ಳಾರಿ ಜಿಲ್ಲೆಗಳಿಂದ ಒಂದು ತಂಡ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಂದ ಒಂದು ತಂಡ, ಮಡಿಕೇರಿ, ಮೈಸೂರು, ಮಂಡ್ಯ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮೈಸೂರು ಮಾರ್ಗದಿಂದ ಬರುವ ರೈತರು ಬಿಡದಿ ಕೈಗಾರಿಕಾ ಜಂಕ್ಷನ್‌ನಲ್ಲಿ, ಉತ್ತರ ಕರ್ನಾಟಕದಿಂದ ಬರುವ ರೈತರು ತುಮಕೂರು-ನೈಸ್‌ರಸ್ತೆ ಜಂಕ್ಷನ್‌, ಚಿಕ್ಕಬಳ್ಳಾಪುರ ಕಡೆಯಿಂದ ಬರುವ ರೈತರು ದೇವನಹಳ್ಳಿ ನಂದಿ ಕ್ರಾಸ್‌ ಬಳಿ ಹಾಗೂ ಕೊಲಾರ ಕಡೆಯಿಂದ ಬರುವ ರೈತರು ಹೊಸಕೋಟೆ ಟೋಲ್‌ ಬಳಿ ಹಾಗೂ ಬೆಂಗಳೂರು ಸಿಟಿ ರೈಲ್ವೆ ಜಂಕ್ಷನ್‌ನಲ್ಲಿ ಸೇರಲಿದ್ದಾರೆ. ರೈತರು ಮಧ್ಯಾಹ್ನ 12.30ಕ್ಕೆ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನೆರೆಯಲಿದ್ದಾರೆ.


ಇದನ್ನೂ ಓದಿ: ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದ ಟ್ರಾಕ್ಟರ್‌ಗಳು: ಮೂಕ ಪ್ರೇಕ್ಷಕರಾದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...