Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...