Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...