Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...