Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...