Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...