Homeಕರ್ನಾಟಕಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

ಕೆರೆಗೆ ಹಾರ: ಆ ರೈತನ ಆತ್ಮಹತ್ಯೆಗೆ ಸಿಗುವುದೇ ಪರಿಹಾರ?

- Advertisement -
- Advertisement -

| ಸೋಮಶೇಖರ್ ಚಲ್ಯ |

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ರೈತರೊಬ್ಬರು ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಎಲ್ಲರನ್ನೂ ದಂಗುಬಡಿಸಿದೆ. ತಮಿಳು ಸಿನೆಮಾ ಕತ್ತಿಯಲ್ಲಿ ನಾಡಿನ ಜನರ ಗಮನ ಸೆಳೆಯಲು ರೈತರು ವಿಡಿಯೋ ಮಾಡಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಆಘಾತಕಾರಿ ದೃಶ್ಯವಿತ್ತು. ಅದನ್ನು ಹೋಲುವ ಈ ಘಟನೆಯು ತಾಲೂಕಿನ ಐತಿಹಾಸಿಕ ಗ್ರಾಮ ಅಘಲಯದಲ್ಲಿ ನಡೆದಿದೆ.

ಎರಡು ದಿನದ ಹಿಂದೆ ಸುರೇಶ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಇಂದು ಅಂದರೆ ಜೂನ್ 17ರಂದು ಗೊತ್ತಾಗಿದೆ.  ಅದಾದ ನಂತರ ಅವರು ಮಾಡಿಟ್ಟ ವಿಡಿಯೋ ಕಂಡು ಬಂದಿದೆ. ಕೆಲವೇ ಗಂಟೆಗಳಲ್ಲಿ ಅದು ವೈರಲ್ ಆಗಿದ್ದು, ಇಂದು ಸಂಜೆ ಚನ್ನಪಟ್ಟಣದಲ್ಲಿ ಎಚ್.ಡಿ.ಕುಮಾರಸ್ವಾಮಿಯವರು ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಿದ್ದಾಗ, ಅವರಿಗೂ ವಿಡಿಯೋ ತಲುಪಿದೆ. ಸಭೆಯಲ್ಲಿ ಮುಖ್ಯಮಂತ್ರಿಯವರು ಇದನ್ನು ಪ್ರಸ್ತಾಪಿಸಿ ಮಾತನಾಡಿದ್ದಾರೆ.

ಸುರೇಶ್, ಅತ್ಮಹತ್ಯೆಗೆ ಶರಣಾದ ರೈತ

ನಮ್ಮ ಊರಿನಲ್ಲಿ ನೀರಿಲ್ಲ ಕೆರೆಗಳಿಗೆ ನೀರು ತುಂಬಿಸಿ ಎಂದು ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ರೈತ ಸುರೇಶ್ ರೈತರ ಸಮಸ್ಯೆಗಳನ್ನು ಮತ್ತೊಮ್ಮೆ ಚರ್ಚೆಗೆ ತಂದಿದ್ದಾರೆ. ಸಮ್ಮಿಶ್ರ ಸರ್ಕಾರದ ಬಹು ದೊಡ್ಡ ಭರವಸೆಯಾಗಿದ್ದ ಸಾಲ ಮನ್ನಾದ ಕುರಿತು ಸರ್ಕಾರ ರಚನೆಯಾದಾಗಿನಿಂದಲೂ ಚರ್ಚೆ ನಡೆಯುತ್ತಲೇ ಇದೆ. ಮಾಧ್ಯಮಗಳು ಕೂಡ ಅದೇ ವಿಷಯದ ಸುತ್ತ ಆಗಾಗ ಚರ್ಚೆ ನಡೆಸುತ್ತಿವೆ.

ಮಂಡ್ಯ ಎಂದರೆ ರೈತರಿಗೆ ಸ್ವರ್ಗ, ನೀರಿನ ಸಮಸ್ಯೆಯಿಲ್ಲ, ಸಂಪದ್ಭರಿತ ಜಿಲ್ಲೆ, ಆದರೂ ಅಲ್ಲಿಯ ರೈತರೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ರೈತರು ಸೋಮಾರಿಗಳು ಎಂಬ ಮೇಲ್ಪದರದ ಅಭಿಪ್ರಾಯಗಳು ವ್ಯಾಪಕವಾಗಿವೆ. ಆದರೆ ಅಲ್ಲಿಯ ರಿಯಾಲಿಟಿಯೇ ಬೇರೆ. ರಾಜ್ಯದಲ್ಲೇ ಅತೀ ಹೆಚ್ಚು ಭೂವಿಭಜನೆಯಾಗಿ ಅತಿ ದೊಡ್ಡ ಸಂಖ್ಯೆಯಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿರುವುದು ಈ ಜಿಲ್ಲೆಯಲ್ಲಿ. ನಿಮಗೆ ಆಶ್ಚರ್ಯವೆನಿಸಬಹುದು. ಇಂದಿಗೂ, ಮಂಡ್ಯದ ಶೇ.51 ಭಾಗಕ್ಕೆ ನೀರಾವರಿ ಸೌಲಭ್ಯವೇ ಇಲ್ಲ. ಆ ಪ್ರದೇಶಗಳು ಮಳೆಯನ್ನೇ ಅವಲಂಬಿಸಿವೆ. ಹಾಗಿದ್ದರೂ ಮಳೆ ನೀರನ್ನು ಸಂಗ್ರಹಿಸುವ ಸಾಮಥ್ರ್ಯವೂ ಕೆರೆ-ಕಟ್ಟೆಗಳಲ್ಲಿ ಕಡಿಮೆಯಾಗುತ್ತಿದೆ. ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮದ್ದೂರು ತಾಲ್ಲೂಕಿನ ಒಂದಷ್ಟು ಪ್ರದೇಶ ಬಿಟ್ಟರೆ ಕೆ.ಆರ್.ಪೇಟೆ, ಮಳವಳ್ಳಿ, ನಾಗಮಂಗಲಗಳ ಬಹುಪಾಲು ಪ್ರದೇಶದಲ್ಲಿ ನೀರಾವರಿ ಭೂಮಿ ಕಾಣಲು ಸಾಧ್ಯವಿಲ್ಲ. ಇದನ್ನು ಗುರುತಿಸಿಯೇ ಸುಮಲತಾ ತಮ್ಮ ಚುನಾವಣಾ ಪ್ರಚಾರದಲ್ಲಿ ಕೆರೆ-ಕಟ್ಟೆಗಳ ಹೂಳೆತ್ತಿಸುವ ವಿಚಾರವನ್ನು ಹೆಚ್ಚು ಬಳಸಿಕೊಂಡಿದ್ದರು.

ಇಡೀ ರಾಜ್ಯದಲ್ಲಿ ಕೆರೆ-ಕಟ್ಟೆಗಳಲ್ಲಿ ಹೂಳು ತುಂಬಿಕೊಂಡು, ಕೆರೆಗಳೆಲ್ಲವೂ ಮೈದಾನಗಳಾಗಿ ವರ್ಷಗಳೇ ಕಳೆದಿವೆ. ಒಂದೆಡೆ ಹೂಳು ತುಂಬಿದ್ದರೆ, ಮೊತ್ತೊದೆಡೆ ಕಾಲಕ್ಕೆ ಸರಿಯಾಗಿ ಮಳೆಯೂ ಆಗದೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಸುರೇಶ್ ಹೇಳುವಂತೆ 100-150 ಅಡಿಗಳಿಗೆ ನೀರು ಸಿಗುತ್ತಿದ್ದ ಅಂರ್ತಜಲದ ಮಟ್ಟ 1500 ಅಡಿಗಳಿಗೂ ಆಳಕ್ಕೆ ಕುಸಿದಿದೆ. ಹೀಗಿರುವ ಸಂದರ್ಭದಲ್ಲಿಯೂ ಕೆರೆಯ ಹೂಳನ್ನು ತೆಗೆದು ಬೀಳುವ ಅಷ್ಟೋ-ಇಷ್ಟೋ ಮಳೆಯ ನೀರನ್ನಾದರೂ ಸಂಗ್ರಹಿಸುವಂತಹ ಕೆಲಸಕ್ಕೆ ಯಾವ ಸರ್ಕಾರಗಳೂ ಮುಂದಾಗುತ್ತಿಲ್ಲ.

ಕೆರೆಗಳ ಕೋಡಿಗಳ ಮಟ್ಟಕ್ಕೆ ಹೂಳು ತುಂಬಿಕೊಂಡಿದ್ದರೂ ಯಾವ ಶಾಸಕ-ಸಂಸದರಿಗೂ ಕೆರೆಗಳ ಹೂಳೆತ್ತುವುದು ಆದ್ಯತೆಯ ಕೆಲಸ ಎಂದೆನಿಸಿಯೇ ಇಲ್ಲ. ನೀರಿನ ಸಮಸ್ಯೆಯಷ್ಟೇ ಅಲ್ಲದೆ ಬಿತ್ತನೆ ಬೀಜ, ಬೆಳೆಗಳ ಮಾರುಕಟ್ಟೆ ಬೆಲೆ, ವೈಜ್ಞಾನಿಕ ಕೃಷಿಗಳಂತಹ ಹಲವಾರು ಸಮಸ್ಯೆಗಳನ್ನು ರೈತರು ಎದುರಿಸುತ್ತಿದ್ದಾರೆ. ಆದರೆ ಆಳುವ ಪಕ್ಷಕ್ಕೆ ಇದಾವುದರ ಅರಿವೂ ಇದ್ದಂತಿಲ್ಲ. ಮಂಡ್ಯದ ಅಷ್ಟೂ ಜನ ಶಾಸಕರು ಅದೇ ಪಕ್ಷದವರಾಗಿದ್ದಾರೆ. ಆದರೂ ಈ ಜಿಲ್ಲೆಗೆ ಯಾವ ಪ್ರಯೋಜನವೂ ಇಲ್ಲ.

ಮದ್ದೂರಿನ ಶಾಸಕ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಜನ ಸಮಸ್ಯೆ ಹೇಳಿಕೊಳ್ಳಲು ಹೋದರೆ ‘ಇಲ್ಲೇನ್ ಮೆಡೆಗಾರಿಕೆ ಮಾಡೋಕೆ ಬಂದಿದ್ದೀರಾ’ ಎಂದು ಜನರನ್ನು ಪಾವಸ್ಸು ಕಳಿಸುವಂತಹ ಮಟ್ಟಕ್ಕೂ, ಶ್ರೀರಂಗಪಟ್ಟಣದ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಯಾವುದೇ ಕಾರಣಕ್ಕೂ ಮಂಡ್ಯದ ಶಾಸಕರು ಕ್ಷೇತ್ರದಲ್ಲಿ ಕೆಲಸ ಮಾಡಬಾರದು, ಜನ ಓಟಾಕಿ ಗೆಲ್ಲಿಸಿರುವ ಸುಮಲತಾ ಇಂದಲೇ ಕೆಲಸ ಮಾಡಿಸಿಕೊಳ್ಳಲಿ ಎಂದು ಹೇಳಿದ್ದಾರೆ. ಇಂತಹ ಅಪ್ರಬುದ್ಧ ಜನಪ್ರತಿನಿಧಿಗಳು ತಮಗೂ ಅದೇ ಜನ ಓಟಾಕಿದ್ದಾರೆ ಎಂದು ಮರೆತಿದ್ದಾರೆ. ಈ ರೀತಿಯ ಶಾಸಕರನ್ನು ಹೊಂದಿರುವ ಜಿಲ್ಲೆಯಲ್ಲಿ ಕೆರೆಗಳು ಮೈದಾನಗಳೂ ಆಗಬಹುದು. ಊರುಗಳು ಸ್ಮಶಾನಗಳಾಗಬಹುದು.

ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಬಳಲಿದ್ದ ರೈತ ಸುರೇಶ್, ತಮ್ಮ ಆತ್ಮಹತ್ಯೆ ಮುಂಚಿನ ವಿಡಿಯೋದಲ್ಲಿ ನಮ್ಮ ಕುಮಾರಣ್ಣನಿಗೆ ಇನ್ನು ನಾಲ್ಕು ವರ್ಷ ಅವಕಾಶ ಕೊಡಿ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ಯಡಿಯೂರಪ್ಪ ಸಾರ್, ನೀವು ಕುಮಾರಣ್ಣನ ಸರ್ಕಾರಕ್ಕೆ ತೊಂದರೆ ಕೊಡಬೇಡಿ. ನಿಮಗೆ ಅದೃಷ್ಟ ಇದ್ದರೆ ನಿಮಗೂ ಮುಂದಿನ ಸಾರಿ ಮುಖ್ಯಮಂತ್ರಿ ಆಗುವ ಅವಕಾಶ ಸಿಗುತ್ತದೆ’ ಎಂದಿದ್ದಾರೆ. ಸಿದ್ದರಾಮಯ್ಯ & ಡಿಕೆಶಿಯವರಿಂದಲೂ ಎಚ್‍ಡಿಕೆಗೆ ಬೆಂಬಲ ಕೇಳಿದ್ದಾರೆ.

ಜೆಡಿಎಸ್ ಪಕ್ಷದ ಸರ್ಕಾರದ ಮೇಲಿನ ಅವರ ಕಾಳಜಿಯ ಕಾಲು ಭಾಗದಷ್ಟು ಕರ್ತವ್ಯಪ್ರಜ್ಞೆ ಸರ್ಕಾರಕ್ಕಿದೆಯೇ ಎಂಬ ಪ್ರಶ್ನೆಯನ್ನು ವಿಡಿಯೋ ನೋಡಿದವರು ಕೇಳುವಂತಿದೆ. ಸಾಲಮನ್ನಾ ಒಂದೇ ರೈತರ ಸಮಸ್ಯೆಗೆ ಪರಿಹಾರವಂಬಂತೆ ಬಿಂಬಿಸಿ ಎಲ್ಲಾ ಸರ್ಕಾರಗಳು ಸಾಲ ಮನ್ನಾದ ಬೊಬ್ಬೆ ಹೊಡೆಯುತ್ತಾ ಕಾಲ ಕಳೆಯುತ್ತವೆ. ರೈತ ಸಮಸ್ಯೆಯಲ್ಲಿ ಸಾಲವೂ ಒಂದಾಗಿದೆಯೇ ಹೊರತು ಸಾಲವೊಂದೇ ಸಮಸ್ಯೆಯಲ್ಲ ಹಾಗೂ ಸಾಲ ಮನ್ನಾ ಒಂದೇ ರೈತರಿಗೆ ಪರಿಹಾರವಲ್ಲ ಎಂಬದನ್ನು ಕೆ.ಆರ್.ಪೇಟೆ ತಾಲ್ಲೂಕಿನ ಅಘಲಯ ಗ್ರಾಮದ ರೈತನ ಆತ್ಮಹತ್ಯೆ ಮುಂಚಿನ ವಿಡಿಯೋ ಮತ್ತೊಮ್ಮೆ ಸಾಬೀತು ಮಾಡಿದೆ.

ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲೆಂದೇ ಓಟು ಹಾಕಿದಂತಿದ್ದ ಮಂಡ್ಯ ಜಿಲ್ಲೆಯ ಜನರಿಗೆ ಲೋಕಸಭಾ ಚುನಾವಣೆಯ ನಂತರವೂ ಅಭಿಮಾನ ಕಡಿಮೆಯಾಗಿಲ್ಲ. ಆದರೆ, ಅವರ ನೈಜ ಸಮಸ್ಯೆಗಳಿಗೆ ಈ ಸರ್ಕಾರವು ಪರಿಹಾರ ಕಲ್ಪಿಸುತ್ತದೆಯೇ ಎಂಬುದು ಈಗ ಉಳಿದಿರುವ ಪ್ರಶ್ನೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...