Homeಮುಖಪುಟಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

- Advertisement -
- Advertisement -

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ. ಗಂಗಾಧರ್ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅಭಿವೃದ್ಧಿಯ ಹೊದಿಕೆಯಡಿ ಕೃಷಿ ಸಂಸ್ಕೃತಿಯನ್ನು ನಾಶಪಡಿಸುತ್ತಿರುವ ಸರ್ಕಾರದ ನೀತಿಯನ್ನು ಕಟುವಾಗಿ ಟೀಕಿಸಿದರು. “ಅಭಿವೃದ್ಧಿಯ ನೆಪದಲ್ಲಿ ಸರ್ಕಾರ ರೈತರ ಒಡಲಿಗೆ ಕೈಹಾಕಿದೆ. ಕೃಷಿ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳುವ ಪ್ರಕ್ರಿಯೆಯ ವಿರುದ್ಧ ಈಗಾಗಲೇ ಹೋರಾಡುತ್ತಿರುವ ಬಿಡದಿಯ ಅನ್ನದಾತರ ಜೊತೆಗೆ ಇಡೀ ರಾಜ್ಯದ ರೈತ ಸಂಘಟನೆಗಳು ಕಟುವಾಗಿ ನಿಲ್ಲಲಿವೆ,” ಎಂದು ಅವರು ಪ್ರಕಟಿಸಿದರು.

“ಸರ್ಕಾರದ ಮೊದಲ ಆದ್ಯತೆ ರೈತರ ಭೂಮಿಯನ್ನು ಕಿತ್ತುಕೊಂಡು ಅವರನ್ನು ಭೂಹೀನರನ್ನಾಗಿ ಮಾಡುವುದಲ್ಲ; ಬದಲಿಗೆ ಕೃಷಿಯನ್ನು ಲಾಭದಾಯಕ ಉದ್ಯೋಗವನ್ನಾಗಿ ಮಾಡುವುದು. ಈ ಟೌನ್‌ಶಿಪ್ ಯೋಜನೆಯಿಂದ ಕೇವಲ ಕಾಂಕ್ರೀಟ್ ಕಟ್ಟಡಗಳ ಕಾಡು ನಿರ್ಮಾಣವಾಗುತ್ತದೆಯೇ ವಿನಃ ಸ್ಥಳೀಯ ಪರಿಸರವಾಗಲಿ ಅಥವಾ ಜನರ ಜೀವನಮಟ್ಟವಾಗಲಿ ಸುಧಾರಿಸುವುದಿಲ್ಲ. ಇದು ಇಡೀ ಪ್ರಾದೇಶಿಕ ಜೀವವೈವಿಧ್ಯಕ್ಕೆ ಮಾರಕ,” ಎಂದು ಕೆ.ಟಿ. ಗಂಗಾಧರ್ ಆತಂಕ ವ್ಯಕ್ತಪಡಿಸಿದರು.

ಪ್ರತಿ ವರ್ಷ ಜುಲೈ 21ನ್ನು ಐತಿಹಾಸಿಕ ನರಗುಂದ-ನವಲಗುಂದ ರೈತ ಬಂಡಾಯದ ನೆನಪಿನಲ್ಲಿ ಆಚರಿಸಲಾಗುತ್ತದೆ. ಆದರೆ, ಈ ವರ್ಷ ರೈತರ ಭೂಮಿಗೆ ಕುತ್ತು ಬಂದಿರುವ ಹಿನ್ನೆಲೆಯಲ್ಲಿ, ಜುಲೈ 21ರ ಬಂಡಾಯದ ದಿನವನ್ನು ರಾಜ್ಯಾದ್ಯಂತ ‘ಭೂ-ಸ್ವಾಧೀನ ಪ್ರಕ್ರಿಯೆ ವಿರೋಧಿ ದಿನ’ವನ್ನಾಗಿ ಆಚರಿಸಲು ರೈತ ಸಂಘಟನೆಗಳು ತೀರ್ಮಾನಿಸಿವೆ. ಈ ಬೃಹತ್ ಪ್ರತಿಭಟನಾ ಚಳವಳಿಯಲ್ಲಿ ಕೃಷಿ ಸಂಸ್ಕೃತಿಯನ್ನು ಉಳಿಸಲು ಬದ್ಧರಾಗಿರುವ ರಾಜ್ಯದ ಎಲ್ಲಾ ಜಿಲ್ಲೆಗಳ ರೈತರು, ಪ್ರಗತಿಪರ ಚಿಂತಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೆ.ಟಿ. ಗಂಗಾಧರ್ ಕರೆ ನೀಡಿದ್ದಾರೆ.

ಕೈಗಾರಿಕಾ ಮತ್ತು ನಗರೀಕರಣದ ಯೋಜನೆಗಳ ಹೆಸರಿನಲ್ಲಿ ಬಿಡದಿಯ 7,481 ಎಕರೆ ಹಾಗೂ ಜಂಗಮನಕಟ್ಟೆಯ 2,800 ಎಕರೆ ವಿಸ್ತೀರ್ಣದ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಹೊರಡಿಸಲಾಗಿರುವ ಭೂ ಸ್ವಾಧೀನ ಅಧಿಸೂಚನೆಯನ್ನು (Notification) ಈ ಹೋರಾಟದಲ್ಲಿ ತೀವ್ರವಾಗಿ ವಿರೋಧಿಸಲಾಗುವುದು. ಕೃಷಿ ಮತ್ತು ರೈತರ ಅಸ್ತಿತ್ವವನ್ನು ಉಳಿಸಲು ಬದ್ಧರಾಗಿರುವ ರಾಜ್ಯದ ಎಲ್ಲಾ ಜನಪರ ಮತ್ತು ಪ್ರಗತಿಪರ ಸಂಘಟನೆಗಳು ಜುಲೈ 11ರ ‘ಬಿಡದಿ ಚಲೋ’ ಚಳವಳಿಯಲ್ಲಿ ಜಂಟಿಯಾಗಿ ಭಾಗವಹಿಸಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಪ್ರಮುಖ ರೈತ ಮುಖಂಡರಾದ ಯಶವಂತ್ ರಾವ್ ಘೋರ್ಪಡೆ, ಸೀನಪ್ಪ, ಮಂಜುನಾಥ್ ಹಾಗೂ ಮಂಜುನಾಥೇಶ್ವರ್ ಉಪಸ್ಥಿತರಿದ್ದು, ಹೋರಾಟಕ್ಕೆ ಬೆಂಬಲ ಸೂಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...