Homeಮುಖಪುಟರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

ರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಹರಿಯಾಣದ ಪೊಲೀಸ್‌ ಅಧೀಕ್ಷಕರಿಗೆ ಆದೇಶಿಸಿದೆ.

ಆಯೋಗವು ಈ ಪ್ರಕರಣಕ್ಕೆ ಸಂಬಂಧಿಸಿದ ದೂರಿನ ಪ್ರತಿ, ಎಫ್‌ಐಆರ್‌, ಕೇಸ್‌ ಡೈರಿಗಳು, ವೈದ್ಯಕೀಯ ಚಿಕಿತ್ಸೆ, ಸಂತ್ರಸ್ಥೆಯ ದಾಖಲೆ ಮತ್ತು  ತನಿಖೆಯ ಪ್ರಸ್ತುತ ಸ್ಥಿತಿ ಸೇರಿದಂತೆ ಎಲ್ಲಾ ದಾಖಲೆಗಳೊಂದಿಗೆ ವರದಿಯನ್ನು ನೀಡುವಂತೆ ಎಸ್‌ಪಿ ಅವರಿಗೆ ಸೂಚಿಸಿದೆ.

ರಾಜ್ಯದ ನೊಂದವರ ಪರಿಹಾರ ನಿಧಿ ಯೋಜನೆಯ ಪ್ರಕಾರ ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಪಾವತಿಸಿದ ಪರಿಹಾರ ಧನವೆಷ್ಟು ಎಂಬುದನ್ನು ನಾಲ್ಕು ವಾರಗಳೊಳಗೆ ಪುರಾವೆಗಳ ಮೂಲಕ ಸಲ್ಲಿಸುವಂತೆ ಜಜ್ಜಾರ್‌ ಜಿಲ್ಲಾ ನ್ಯಾಯಾಲಯಕ್ಕೆ ಎನ್‌ಎಚ್‌ಆರ್‌ಸಿ ನಿರ್ದೇಶನ ನೀಡಿದೆ.

ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಸುಪ್ರೀಂ ಕೋರ್ಟ್‌ನ ಪರಿಚಿತ ಮಾನವ ಹಕ್ಕುಗಳ ವಕೀಲ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ಅನುಸಾರ ಎನ್‌ಎಚ್‌ಆರ್‌ಸಿ ತನಿಖಾ ವಿಭಾಗಕ್ಕೆ ಜಜ್ಜಾರ್‌ ಜಿಲ್ಲಾಡಳಿತ ಪ್ರತಿಕ್ರಿಯಿಸಿತು.

ಎನ್‌ಎಚ್‌ಆರ್‌ಸಿ ತನ್ನ ಆದೇಶದಲ್ಲಿ ‘ದೆಹಲಿ-ಹರಿಯಾಣದ ಗಡಿಯಾದ ಟಿಕ್ರಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ಪಶ್ಚಿಮ ಬಂಗಾಳ ಮೂಲದ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತರಿಂದ ದೂರುಗಳು ಬಂದಿವೆ. ಆರೋಪಿಗಳ ವಿರುದ್ಧ ಆಕೆಯ ತಂದೆ ಎಫ್‌ಐಆರ್‌ ದಾಖಲಿಸಿದ್ದಾರೆ. 2021 ಏಪ್ರಿಲ್‌ 30ರಂದು ಸಂತ್ರಸ್ತೆಗೆ ಕೋವಿಡ್‌ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ನಿಧನರಾದರು’ ಎಂದು ಹೇಳಲಾಗಿದೆ.

ಹರಿಯಾಣ ಸರ್ಕಾರದ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಆರೋಗ್ಯ ಮತ್ತು ನ್ಯಾಯ ಒದಗಿಸುವಲ್ಲಿನ ನಿಷ್ಕ್ರಿಯತೆ ಮತ್ತು ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಸಂತ್ರಸ್ತೆಯ ತಂದೆ ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆಂದು ಹೇಳಲಾಗಿದೆ.

ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಅಧಿಕ ಮೊತ್ತದ ಪರಿಹಾರ, ನ್ಯಾಯಯುತ, ಸ್ವತಂತ್ರ, ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತ್ರಿಪಾಠಿ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ನಿವಾಸಿ ಸಂತ್ರಸ್ತೆಯ ತಂದೆ ಮೇ 9, 2021ರಂದು ತನ್ನ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ತನಿಖಾ ವಿಭಾಗ ತಿಳಿಸಿದೆ.  ಈ ನಿಟ್ಟಿನಲ್ಲಿ ಬಹದ್ದೂರ್‌ಗರ್‌ ಪೊಲೀಸ್ ಠಾಣೆಯಲ್ಲಿ ಅದೇ ದಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 120-ಬಿ, 354, 506 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದೂರಿನಲ್ಲಿ ದಾಖಲಾಗಿರುವ ಇಬ್ಬರು ಆರೋಪಿಗಳು ಹಣವುಳ್ಳವರಾಗಿದ್ದು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪರಾಧ ಸಂಭವಿಸಿದ ಬಗ್ಗೆ ತಿಳಿದಿದೆ ಎಂದು ನಂಬಲಾದ ಏಳು ವ್ಯಕ್ತಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ಇತರ ಸಂಗತಿಗಳನ್ನು ಕಂಡುಹಿಡಿಯಲು ಅವರಿಗೂ ನೋಟಿಸ್‌ ಕಳುಹಿಸಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಏಪ್ರಿಲ್‌ 25 ರಂದು ಬಹದ್ದೂರ್‌ಗರ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಮಹಿಳೆ ಏಪ್ರಿಲ್ 30ರಂದು ನಿಧನರಾದರು ಎಂದು ಬಹದ್ದೂರ್‌ಗರ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಅವರ ಕುಟುಂಬದವರ ಸಮ್ಮುಖದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಆ ಸಮಯದಲ್ಲಿ ಮಹಿಳೆಯ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಯಾವುದೇ ದೂರು ಇಲ್ಲದಿರುವುದರಿಂದ, ಸಂತ್ರಸ್ತೆಯನ್ನು ಯಾವುದೇ ವಿಚಾರಣೆ ಅಥವಾ ಶವಪರೀಕ್ಷೆ ನಡೆಸಲಾಗಿಲ್ಲ ಎಂದು ತ್ರಿಪಾಠಿ ತಿಳಿಸಿದ್ದಾರೆ.

ಆದರೂ, ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಮೇ 10 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ಸಂತ್ರಸ್ತ ಪರಿಹಾರ ನಿಧಿ ಯೋಜನೆಯಡಿ ಯಾವುದೇ ಪರಿಹಾರ ಧನ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...