Homeಮುಖಪುಟರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

ರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಹರಿಯಾಣದ ಪೊಲೀಸ್‌ ಅಧೀಕ್ಷಕರಿಗೆ ಆದೇಶಿಸಿದೆ.

ಆಯೋಗವು ಈ ಪ್ರಕರಣಕ್ಕೆ ಸಂಬಂಧಿಸಿದ ದೂರಿನ ಪ್ರತಿ, ಎಫ್‌ಐಆರ್‌, ಕೇಸ್‌ ಡೈರಿಗಳು, ವೈದ್ಯಕೀಯ ಚಿಕಿತ್ಸೆ, ಸಂತ್ರಸ್ಥೆಯ ದಾಖಲೆ ಮತ್ತು  ತನಿಖೆಯ ಪ್ರಸ್ತುತ ಸ್ಥಿತಿ ಸೇರಿದಂತೆ ಎಲ್ಲಾ ದಾಖಲೆಗಳೊಂದಿಗೆ ವರದಿಯನ್ನು ನೀಡುವಂತೆ ಎಸ್‌ಪಿ ಅವರಿಗೆ ಸೂಚಿಸಿದೆ.

ರಾಜ್ಯದ ನೊಂದವರ ಪರಿಹಾರ ನಿಧಿ ಯೋಜನೆಯ ಪ್ರಕಾರ ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಪಾವತಿಸಿದ ಪರಿಹಾರ ಧನವೆಷ್ಟು ಎಂಬುದನ್ನು ನಾಲ್ಕು ವಾರಗಳೊಳಗೆ ಪುರಾವೆಗಳ ಮೂಲಕ ಸಲ್ಲಿಸುವಂತೆ ಜಜ್ಜಾರ್‌ ಜಿಲ್ಲಾ ನ್ಯಾಯಾಲಯಕ್ಕೆ ಎನ್‌ಎಚ್‌ಆರ್‌ಸಿ ನಿರ್ದೇಶನ ನೀಡಿದೆ.

ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಸುಪ್ರೀಂ ಕೋರ್ಟ್‌ನ ಪರಿಚಿತ ಮಾನವ ಹಕ್ಕುಗಳ ವಕೀಲ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ಅನುಸಾರ ಎನ್‌ಎಚ್‌ಆರ್‌ಸಿ ತನಿಖಾ ವಿಭಾಗಕ್ಕೆ ಜಜ್ಜಾರ್‌ ಜಿಲ್ಲಾಡಳಿತ ಪ್ರತಿಕ್ರಿಯಿಸಿತು.

ಎನ್‌ಎಚ್‌ಆರ್‌ಸಿ ತನ್ನ ಆದೇಶದಲ್ಲಿ ‘ದೆಹಲಿ-ಹರಿಯಾಣದ ಗಡಿಯಾದ ಟಿಕ್ರಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ಪಶ್ಚಿಮ ಬಂಗಾಳ ಮೂಲದ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತರಿಂದ ದೂರುಗಳು ಬಂದಿವೆ. ಆರೋಪಿಗಳ ವಿರುದ್ಧ ಆಕೆಯ ತಂದೆ ಎಫ್‌ಐಆರ್‌ ದಾಖಲಿಸಿದ್ದಾರೆ. 2021 ಏಪ್ರಿಲ್‌ 30ರಂದು ಸಂತ್ರಸ್ತೆಗೆ ಕೋವಿಡ್‌ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ನಿಧನರಾದರು’ ಎಂದು ಹೇಳಲಾಗಿದೆ.

ಹರಿಯಾಣ ಸರ್ಕಾರದ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಆರೋಗ್ಯ ಮತ್ತು ನ್ಯಾಯ ಒದಗಿಸುವಲ್ಲಿನ ನಿಷ್ಕ್ರಿಯತೆ ಮತ್ತು ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಸಂತ್ರಸ್ತೆಯ ತಂದೆ ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆಂದು ಹೇಳಲಾಗಿದೆ.

ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಅಧಿಕ ಮೊತ್ತದ ಪರಿಹಾರ, ನ್ಯಾಯಯುತ, ಸ್ವತಂತ್ರ, ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತ್ರಿಪಾಠಿ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ನಿವಾಸಿ ಸಂತ್ರಸ್ತೆಯ ತಂದೆ ಮೇ 9, 2021ರಂದು ತನ್ನ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ತನಿಖಾ ವಿಭಾಗ ತಿಳಿಸಿದೆ.  ಈ ನಿಟ್ಟಿನಲ್ಲಿ ಬಹದ್ದೂರ್‌ಗರ್‌ ಪೊಲೀಸ್ ಠಾಣೆಯಲ್ಲಿ ಅದೇ ದಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 120-ಬಿ, 354, 506 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದೂರಿನಲ್ಲಿ ದಾಖಲಾಗಿರುವ ಇಬ್ಬರು ಆರೋಪಿಗಳು ಹಣವುಳ್ಳವರಾಗಿದ್ದು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪರಾಧ ಸಂಭವಿಸಿದ ಬಗ್ಗೆ ತಿಳಿದಿದೆ ಎಂದು ನಂಬಲಾದ ಏಳು ವ್ಯಕ್ತಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ಇತರ ಸಂಗತಿಗಳನ್ನು ಕಂಡುಹಿಡಿಯಲು ಅವರಿಗೂ ನೋಟಿಸ್‌ ಕಳುಹಿಸಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಏಪ್ರಿಲ್‌ 25 ರಂದು ಬಹದ್ದೂರ್‌ಗರ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಮಹಿಳೆ ಏಪ್ರಿಲ್ 30ರಂದು ನಿಧನರಾದರು ಎಂದು ಬಹದ್ದೂರ್‌ಗರ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಅವರ ಕುಟುಂಬದವರ ಸಮ್ಮುಖದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಆ ಸಮಯದಲ್ಲಿ ಮಹಿಳೆಯ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಯಾವುದೇ ದೂರು ಇಲ್ಲದಿರುವುದರಿಂದ, ಸಂತ್ರಸ್ತೆಯನ್ನು ಯಾವುದೇ ವಿಚಾರಣೆ ಅಥವಾ ಶವಪರೀಕ್ಷೆ ನಡೆಸಲಾಗಿಲ್ಲ ಎಂದು ತ್ರಿಪಾಠಿ ತಿಳಿಸಿದ್ದಾರೆ.

ಆದರೂ, ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಮೇ 10 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ಸಂತ್ರಸ್ತ ಪರಿಹಾರ ನಿಧಿ ಯೋಜನೆಯಡಿ ಯಾವುದೇ ಪರಿಹಾರ ಧನ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...

ದೆಹಲಿಯಲ್ಲಿ ಹೆಣ್ಣು ಮಕ್ಕಳು ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿರುವ ವರದಿ ನಿರಾಕರಿಸಿದ ಪೊಲೀಸರು: ಕಠಿಣ ಕ್ರಮದ ಎಚ್ಚರಿಕೆ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹುಡುಗಿಯರು ಕಾಣೆಯಾಗುವ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂಬ ವರದಿಗಳನ್ನು ದೆಹಲಿ ಪೊಲೀಸರು ತಿರಸ್ಕರಿಸಿದ್ದಾರೆ. ಈ ಆರೋಪಗಳು ದಾರಿತಪ್ಪಿಸುವಂತಿದ್ದು, ಭೀತಿ ಸೃಷ್ಟಿಸುವ ಗುರಿಯನ್ನು ಹೊಂದಿರುವ ಪಾವತಿಸಿದ ಆನ್‌ಲೈನ್ ಪ್ರಚಾರದಿಂದ ನಡೆಸಲ್ಪಡುತ್ತಿದೆ ಎಂದು ಅವರು...

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...