Homeಮುಖಪುಟರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

ರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಹರಿಯಾಣದ ಪೊಲೀಸ್‌ ಅಧೀಕ್ಷಕರಿಗೆ ಆದೇಶಿಸಿದೆ.

ಆಯೋಗವು ಈ ಪ್ರಕರಣಕ್ಕೆ ಸಂಬಂಧಿಸಿದ ದೂರಿನ ಪ್ರತಿ, ಎಫ್‌ಐಆರ್‌, ಕೇಸ್‌ ಡೈರಿಗಳು, ವೈದ್ಯಕೀಯ ಚಿಕಿತ್ಸೆ, ಸಂತ್ರಸ್ಥೆಯ ದಾಖಲೆ ಮತ್ತು  ತನಿಖೆಯ ಪ್ರಸ್ತುತ ಸ್ಥಿತಿ ಸೇರಿದಂತೆ ಎಲ್ಲಾ ದಾಖಲೆಗಳೊಂದಿಗೆ ವರದಿಯನ್ನು ನೀಡುವಂತೆ ಎಸ್‌ಪಿ ಅವರಿಗೆ ಸೂಚಿಸಿದೆ.

ರಾಜ್ಯದ ನೊಂದವರ ಪರಿಹಾರ ನಿಧಿ ಯೋಜನೆಯ ಪ್ರಕಾರ ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಪಾವತಿಸಿದ ಪರಿಹಾರ ಧನವೆಷ್ಟು ಎಂಬುದನ್ನು ನಾಲ್ಕು ವಾರಗಳೊಳಗೆ ಪುರಾವೆಗಳ ಮೂಲಕ ಸಲ್ಲಿಸುವಂತೆ ಜಜ್ಜಾರ್‌ ಜಿಲ್ಲಾ ನ್ಯಾಯಾಲಯಕ್ಕೆ ಎನ್‌ಎಚ್‌ಆರ್‌ಸಿ ನಿರ್ದೇಶನ ನೀಡಿದೆ.

ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಸುಪ್ರೀಂ ಕೋರ್ಟ್‌ನ ಪರಿಚಿತ ಮಾನವ ಹಕ್ಕುಗಳ ವಕೀಲ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ಅನುಸಾರ ಎನ್‌ಎಚ್‌ಆರ್‌ಸಿ ತನಿಖಾ ವಿಭಾಗಕ್ಕೆ ಜಜ್ಜಾರ್‌ ಜಿಲ್ಲಾಡಳಿತ ಪ್ರತಿಕ್ರಿಯಿಸಿತು.

ಎನ್‌ಎಚ್‌ಆರ್‌ಸಿ ತನ್ನ ಆದೇಶದಲ್ಲಿ ‘ದೆಹಲಿ-ಹರಿಯಾಣದ ಗಡಿಯಾದ ಟಿಕ್ರಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ಪಶ್ಚಿಮ ಬಂಗಾಳ ಮೂಲದ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತರಿಂದ ದೂರುಗಳು ಬಂದಿವೆ. ಆರೋಪಿಗಳ ವಿರುದ್ಧ ಆಕೆಯ ತಂದೆ ಎಫ್‌ಐಆರ್‌ ದಾಖಲಿಸಿದ್ದಾರೆ. 2021 ಏಪ್ರಿಲ್‌ 30ರಂದು ಸಂತ್ರಸ್ತೆಗೆ ಕೋವಿಡ್‌ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ನಿಧನರಾದರು’ ಎಂದು ಹೇಳಲಾಗಿದೆ.

ಹರಿಯಾಣ ಸರ್ಕಾರದ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಆರೋಗ್ಯ ಮತ್ತು ನ್ಯಾಯ ಒದಗಿಸುವಲ್ಲಿನ ನಿಷ್ಕ್ರಿಯತೆ ಮತ್ತು ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಸಂತ್ರಸ್ತೆಯ ತಂದೆ ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆಂದು ಹೇಳಲಾಗಿದೆ.

ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಅಧಿಕ ಮೊತ್ತದ ಪರಿಹಾರ, ನ್ಯಾಯಯುತ, ಸ್ವತಂತ್ರ, ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತ್ರಿಪಾಠಿ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ನಿವಾಸಿ ಸಂತ್ರಸ್ತೆಯ ತಂದೆ ಮೇ 9, 2021ರಂದು ತನ್ನ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ತನಿಖಾ ವಿಭಾಗ ತಿಳಿಸಿದೆ.  ಈ ನಿಟ್ಟಿನಲ್ಲಿ ಬಹದ್ದೂರ್‌ಗರ್‌ ಪೊಲೀಸ್ ಠಾಣೆಯಲ್ಲಿ ಅದೇ ದಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 120-ಬಿ, 354, 506 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದೂರಿನಲ್ಲಿ ದಾಖಲಾಗಿರುವ ಇಬ್ಬರು ಆರೋಪಿಗಳು ಹಣವುಳ್ಳವರಾಗಿದ್ದು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪರಾಧ ಸಂಭವಿಸಿದ ಬಗ್ಗೆ ತಿಳಿದಿದೆ ಎಂದು ನಂಬಲಾದ ಏಳು ವ್ಯಕ್ತಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ಇತರ ಸಂಗತಿಗಳನ್ನು ಕಂಡುಹಿಡಿಯಲು ಅವರಿಗೂ ನೋಟಿಸ್‌ ಕಳುಹಿಸಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಏಪ್ರಿಲ್‌ 25 ರಂದು ಬಹದ್ದೂರ್‌ಗರ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಮಹಿಳೆ ಏಪ್ರಿಲ್ 30ರಂದು ನಿಧನರಾದರು ಎಂದು ಬಹದ್ದೂರ್‌ಗರ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಅವರ ಕುಟುಂಬದವರ ಸಮ್ಮುಖದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಆ ಸಮಯದಲ್ಲಿ ಮಹಿಳೆಯ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಯಾವುದೇ ದೂರು ಇಲ್ಲದಿರುವುದರಿಂದ, ಸಂತ್ರಸ್ತೆಯನ್ನು ಯಾವುದೇ ವಿಚಾರಣೆ ಅಥವಾ ಶವಪರೀಕ್ಷೆ ನಡೆಸಲಾಗಿಲ್ಲ ಎಂದು ತ್ರಿಪಾಠಿ ತಿಳಿಸಿದ್ದಾರೆ.

ಆದರೂ, ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಮೇ 10 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ಸಂತ್ರಸ್ತ ಪರಿಹಾರ ನಿಧಿ ಯೋಜನೆಯಡಿ ಯಾವುದೇ ಪರಿಹಾರ ಧನ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...