Homeಮುಖಪುಟರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

ರೈತ ಮಹಿಳೆಯ ಅತ್ಯಾಚಾರ ಪ್ರಕರಣ: ಸಮಗ್ರ ವರದಿಗೆ ಎನ್‌ಎಚ್‌ಆರ್‌ಸಿ ನಿರ್ದೇಶನ

- Advertisement -
- Advertisement -

ದೆಹಲಿಯ ಟಿಕ್ರಿ ಗಡಿಯಲ್ಲಿ ನಡೆಯುತ್ತಿರುವ ರೈತ ಪ್ರತಿಭಟನೆಯಲ್ಲಿದ್ದ ಪಶ್ಚಿಮ ಬಂಗಾಳದ ರೈತ ಮಹಿಳಾ ಕಾರ್ಯಕರ್ತೆಯೊಬ್ಬರ ಅತ್ಯಾಚಾರ ಮತ್ತು ಸಾವಿನ ಬಗ್ಗೆ ವಾಸ್ತವಿಕ ವರದಿ ಸಲ್ಲಿಸುವಂತೆ ಬುಧವಾರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಹರಿಯಾಣದ ಪೊಲೀಸ್‌ ಅಧೀಕ್ಷಕರಿಗೆ ಆದೇಶಿಸಿದೆ.

ಆಯೋಗವು ಈ ಪ್ರಕರಣಕ್ಕೆ ಸಂಬಂಧಿಸಿದ ದೂರಿನ ಪ್ರತಿ, ಎಫ್‌ಐಆರ್‌, ಕೇಸ್‌ ಡೈರಿಗಳು, ವೈದ್ಯಕೀಯ ಚಿಕಿತ್ಸೆ, ಸಂತ್ರಸ್ಥೆಯ ದಾಖಲೆ ಮತ್ತು  ತನಿಖೆಯ ಪ್ರಸ್ತುತ ಸ್ಥಿತಿ ಸೇರಿದಂತೆ ಎಲ್ಲಾ ದಾಖಲೆಗಳೊಂದಿಗೆ ವರದಿಯನ್ನು ನೀಡುವಂತೆ ಎಸ್‌ಪಿ ಅವರಿಗೆ ಸೂಚಿಸಿದೆ.

ರಾಜ್ಯದ ನೊಂದವರ ಪರಿಹಾರ ನಿಧಿ ಯೋಜನೆಯ ಪ್ರಕಾರ ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಪಾವತಿಸಿದ ಪರಿಹಾರ ಧನವೆಷ್ಟು ಎಂಬುದನ್ನು ನಾಲ್ಕು ವಾರಗಳೊಳಗೆ ಪುರಾವೆಗಳ ಮೂಲಕ ಸಲ್ಲಿಸುವಂತೆ ಜಜ್ಜಾರ್‌ ಜಿಲ್ಲಾ ನ್ಯಾಯಾಲಯಕ್ಕೆ ಎನ್‌ಎಚ್‌ಆರ್‌ಸಿ ನಿರ್ದೇಶನ ನೀಡಿದೆ.

ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಮತ್ತು ಸುಪ್ರೀಂ ಕೋರ್ಟ್‌ನ ಪರಿಚಿತ ಮಾನವ ಹಕ್ಕುಗಳ ವಕೀಲ ರಾಧಾಕಾಂತ ತ್ರಿಪಾಠಿ ಸಲ್ಲಿಸಿದ್ದ ಅರ್ಜಿಯ ಅನುಸಾರ ಎನ್‌ಎಚ್‌ಆರ್‌ಸಿ ತನಿಖಾ ವಿಭಾಗಕ್ಕೆ ಜಜ್ಜಾರ್‌ ಜಿಲ್ಲಾಡಳಿತ ಪ್ರತಿಕ್ರಿಯಿಸಿತು.

ಎನ್‌ಎಚ್‌ಆರ್‌ಸಿ ತನ್ನ ಆದೇಶದಲ್ಲಿ ‘ದೆಹಲಿ-ಹರಿಯಾಣದ ಗಡಿಯಾದ ಟಿಕ್ರಿಯಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಲು ಬಂದ ಪಶ್ಚಿಮ ಬಂಗಾಳ ಮೂಲದ ಮಹಿಳಾ ಕಾರ್ಯಕರ್ತೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದ ಬಗ್ಗೆ ಪ್ರಸಿದ್ಧ ಮಾನವ ಹಕ್ಕುಗಳ ಕಾರ್ಯಕರ್ತರಿಂದ ದೂರುಗಳು ಬಂದಿವೆ. ಆರೋಪಿಗಳ ವಿರುದ್ಧ ಆಕೆಯ ತಂದೆ ಎಫ್‌ಐಆರ್‌ ದಾಖಲಿಸಿದ್ದಾರೆ. 2021 ಏಪ್ರಿಲ್‌ 30ರಂದು ಸಂತ್ರಸ್ತೆಗೆ ಕೋವಿಡ್‌ ರೋಗಲಕ್ಷಣಗಳು ಕಾಣಿಸಿಕೊಂಡಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ನಿಧನರಾದರು’ ಎಂದು ಹೇಳಲಾಗಿದೆ.

ಹರಿಯಾಣ ಸರ್ಕಾರದ ಪೊಲೀಸ್‌ ಹಾಗೂ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ, ಆರೋಗ್ಯ ಮತ್ತು ನ್ಯಾಯ ಒದಗಿಸುವಲ್ಲಿನ ನಿಷ್ಕ್ರಿಯತೆ ಮತ್ತು ವೈಫಲ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ತ್ರಿಪಾಠಿ ಆರೋಪಿಸಿದ್ದಾರೆ. ಸಂತ್ರಸ್ತೆಯ ತಂದೆ ನ್ಯಾಯಕ್ಕಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿದ್ದಾರೆಂದು ಹೇಳಲಾಗಿದೆ.

ಮೃತ ಮಹಿಳೆಯ ಕುಟುಂಬದ ಸದಸ್ಯರಿಗೆ ಅಧಿಕ ಮೊತ್ತದ ಪರಿಹಾರ, ನ್ಯಾಯಯುತ, ಸ್ವತಂತ್ರ, ನಿಷ್ಪಕ್ಷಪಾತ ತನಿಖೆ ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ತ್ರಿಪಾಠಿ ಮನವಿ ಮಾಡಿದ್ದಾರೆ.

ಪೊಲೀಸರ ಪ್ರಕಾರ, ಪಶ್ಚಿಮ ಬಂಗಾಳದ ಹೂಗ್ಲಿ ನಿವಾಸಿ ಸಂತ್ರಸ್ತೆಯ ತಂದೆ ಮೇ 9, 2021ರಂದು ತನ್ನ ತನ್ನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿದ್ದಾರೆ ಎಂದು ಎನ್‌ಎಚ್‌ಆರ್‌ಸಿ ತನಿಖಾ ವಿಭಾಗ ತಿಳಿಸಿದೆ.  ಈ ನಿಟ್ಟಿನಲ್ಲಿ ಬಹದ್ದೂರ್‌ಗರ್‌ ಪೊಲೀಸ್ ಠಾಣೆಯಲ್ಲಿ ಅದೇ ದಿನ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 120-ಬಿ, 354, 506 ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಪ್ರಕರಣವನ್ನು ಇತ್ಯರ್ಥಗೊಳಿಸಲು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ದೂರಿನಲ್ಲಿ ದಾಖಲಾಗಿರುವ ಇಬ್ಬರು ಆರೋಪಿಗಳು ಹಣವುಳ್ಳವರಾಗಿದ್ದು ಅವರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಅಪರಾಧ ಸಂಭವಿಸಿದ ಬಗ್ಗೆ ತಿಳಿದಿದೆ ಎಂದು ನಂಬಲಾದ ಏಳು ವ್ಯಕ್ತಿಗಳ ಹೇಳಿಕೆಯನ್ನು ದಾಖಲಿಸಲು ಮತ್ತು ಇತರ ಸಂಗತಿಗಳನ್ನು ಕಂಡುಹಿಡಿಯಲು ಅವರಿಗೂ ನೋಟಿಸ್‌ ಕಳುಹಿಸಲಾಗಿದೆ.

ಕೋವಿಡ್‌ ಕಾರಣದಿಂದಾಗಿ ಏಪ್ರಿಲ್‌ 25 ರಂದು ಬಹದ್ದೂರ್‌ಗರ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದ್ದ ಮಹಿಳೆ ಏಪ್ರಿಲ್ 30ರಂದು ನಿಧನರಾದರು ಎಂದು ಬಹದ್ದೂರ್‌ಗರ್‌ನ ಉಪ ಪೊಲೀಸ್‌ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಮೃತ ದೇಹವನ್ನು ಅವರ ಕುಟುಂಬದವರ ಸಮ್ಮುಖದಲ್ಲಿಯೇ ಅಂತ್ಯಸಂಸ್ಕಾರ ಮಾಡಲಾಗಿದೆ. ಆದರೆ ಆ ಸಮಯದಲ್ಲಿ ಮಹಿಳೆಯ ತಂದೆ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಯಾವುದೇ ದೂರು ಇಲ್ಲದಿರುವುದರಿಂದ, ಸಂತ್ರಸ್ತೆಯನ್ನು ಯಾವುದೇ ವಿಚಾರಣೆ ಅಥವಾ ಶವಪರೀಕ್ಷೆ ನಡೆಸಲಾಗಿಲ್ಲ ಎಂದು ತ್ರಿಪಾಠಿ ತಿಳಿಸಿದ್ದಾರೆ.

ಆದರೂ, ಈ ಕುರಿತು ತನಿಖೆ ನಡೆಯುತ್ತಿದ್ದು, ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ ಮೇ 10 ರಂದು ಪಶ್ಚಿಮ ಬಂಗಾಳಕ್ಕೆ ತೆರಳಿದ್ದು, ಸಂತ್ರಸ್ತ ಪರಿಹಾರ ನಿಧಿ ಯೋಜನೆಯಡಿ ಯಾವುದೇ ಪರಿಹಾರ ಧನ ನೀಡಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...