Homeಕರ್ನಾಟಕಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -
- Advertisement -

ಸಚಿವ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ತೆರಳುತ್ತಿದ್ದ, ಕಾರ್ಮಿಕರು ಮತ್ತು ರೈತರನ್ನು ಬಾಗಲಕೋಟೆ ಪೊಲೀಸರು ಬುಧವಾರ ತಡೆದಿದ್ದಾರೆ. ಜಿಲ್ಲೆಯ ಮುಧೋಳದ ತಿಮ್ಮಾಪುರದಲ್ಲಿ ಇರುವ ‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯ ಪುನರಾರಂಭಕ್ಕಾಗಿ ಆಗ್ರಹಿಸಿ ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯು ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದ್ದು, ಆರ್ಥಿಕ ಸಂಕಷ್ಟದಿಂದ ಮುಚ್ಚಲ್ಪಟ್ಟಿದೆ. ರೈತರು ಹಲವಾರು ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಾ ಬರುತ್ತಿದ್ದಾರೆ. ಬುಧವಾರದಂದು ಸಚಿವರಾದ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ಹೋಗುತ್ತಿರುವ ಪೋಲಿಸರು ಅವರನ್ನು ತಡೆದಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

“ಸಚಿವ ಗೋವಿಂದ ಕಾರಜೋಳ ಅವರ ಜೊತೆ ಮಾತನಾಡಿದ್ದು, 3 ದಿನಗಳಲ್ಲಿ ಒಂದು ಸಭೆಯನ್ನು ಕರೆಯುತ್ತಾರೆ. ಆ ಸಭೆಯಲ್ಲಿ ಕಾರ್ಖಾನೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ತಿಳಿಸಲಿದ್ದಾರೆ” ಎಂದು ತಹಶೀಲ್ದಾರ್‌ ಅವರು ಪ್ರತಿಭಟನಾಗಾರರಿಗೆ ಭರವಸೆ ನೀಡಿದ್ದಾರೆ.

ತಹಶೀಲ್ದಾರ್ ಅವರ ಭರವಸೆಯ ನಂತರ ಸಚಿವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟ ಹೋರಾಟಗಾರರು, ತಹಶೀಲ್ದಾರ್ ಕಛೇರಿ ಮುಂದುಗಡೆ ಇದುವರೆಗೂ ನಡೆಯುತ್ತಿದ್ದ ಹೋರಾಟದ ವೇದಿಕೆಯಲ್ಲೇ ಧರಣಿ ಸತ್ಯಾಗ್ರಹ ಮುಂದುವರೆಸಲು ನಿರ್ಧರಿಸಿದ್ದಾರೆ.

“ಕಳೆದ 73 ದಿನಗಳಿಂದ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕಾಗಿ ಆಗ್ರಹಿಸಿ ಶಾಂತಿಯಿಂದ, ವಿಭಿನ್ನ ರೀತಿಯಾಗಿ ಸರ್ಕಾರವನ್ನು ಎಚ್ಚರಿಸುತ್ತಾ ಇದ್ದೇವೆ. ಆದರೆ ಸಚಿವರಾದ ಗೋವಿಂದ ಕಾರಜೋಳ ಅವರ ನಿಷ್ಕಾಳಜಿಯಿಂದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭವಾಗುತ್ತಿಲ್ಲ. ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಶೀಘ್ರ ರೂಪದಲ್ಲಿ ನಡೆಯುತ್ತಿಲ್ಲ. ಕಾರ್ಖಾನೆಯ 333 ಕೋಟಿ ರೂಪಾಯಿ ಸಾಲಕ್ಕೆ ಹಾಗೂ ಕಾರ್ಖಾನೆಯ ದಿವಾಳಿಗೆ ಕಾರಣವಾದ ಆಡಳಿತ ಮಂಡಳಿಯನ್ನು ವಜಾ ಮಾಡದೆ, ಆಡಳಿತ ಮಂಡಳಿಯ ರಕ್ಷಣೆಗೆ ಮುಂದಾಗಿದ್ದಾರೆ” ಎಂದು ಹೋರಾಟಗಾರರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...