Homeಕರ್ನಾಟಕಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -
- Advertisement -

ಸಚಿವ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ತೆರಳುತ್ತಿದ್ದ, ಕಾರ್ಮಿಕರು ಮತ್ತು ರೈತರನ್ನು ಬಾಗಲಕೋಟೆ ಪೊಲೀಸರು ಬುಧವಾರ ತಡೆದಿದ್ದಾರೆ. ಜಿಲ್ಲೆಯ ಮುಧೋಳದ ತಿಮ್ಮಾಪುರದಲ್ಲಿ ಇರುವ ‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯ ಪುನರಾರಂಭಕ್ಕಾಗಿ ಆಗ್ರಹಿಸಿ ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯು ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದ್ದು, ಆರ್ಥಿಕ ಸಂಕಷ್ಟದಿಂದ ಮುಚ್ಚಲ್ಪಟ್ಟಿದೆ. ರೈತರು ಹಲವಾರು ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಾ ಬರುತ್ತಿದ್ದಾರೆ. ಬುಧವಾರದಂದು ಸಚಿವರಾದ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ಹೋಗುತ್ತಿರುವ ಪೋಲಿಸರು ಅವರನ್ನು ತಡೆದಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

“ಸಚಿವ ಗೋವಿಂದ ಕಾರಜೋಳ ಅವರ ಜೊತೆ ಮಾತನಾಡಿದ್ದು, 3 ದಿನಗಳಲ್ಲಿ ಒಂದು ಸಭೆಯನ್ನು ಕರೆಯುತ್ತಾರೆ. ಆ ಸಭೆಯಲ್ಲಿ ಕಾರ್ಖಾನೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ತಿಳಿಸಲಿದ್ದಾರೆ” ಎಂದು ತಹಶೀಲ್ದಾರ್‌ ಅವರು ಪ್ರತಿಭಟನಾಗಾರರಿಗೆ ಭರವಸೆ ನೀಡಿದ್ದಾರೆ.

ತಹಶೀಲ್ದಾರ್ ಅವರ ಭರವಸೆಯ ನಂತರ ಸಚಿವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟ ಹೋರಾಟಗಾರರು, ತಹಶೀಲ್ದಾರ್ ಕಛೇರಿ ಮುಂದುಗಡೆ ಇದುವರೆಗೂ ನಡೆಯುತ್ತಿದ್ದ ಹೋರಾಟದ ವೇದಿಕೆಯಲ್ಲೇ ಧರಣಿ ಸತ್ಯಾಗ್ರಹ ಮುಂದುವರೆಸಲು ನಿರ್ಧರಿಸಿದ್ದಾರೆ.

“ಕಳೆದ 73 ದಿನಗಳಿಂದ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕಾಗಿ ಆಗ್ರಹಿಸಿ ಶಾಂತಿಯಿಂದ, ವಿಭಿನ್ನ ರೀತಿಯಾಗಿ ಸರ್ಕಾರವನ್ನು ಎಚ್ಚರಿಸುತ್ತಾ ಇದ್ದೇವೆ. ಆದರೆ ಸಚಿವರಾದ ಗೋವಿಂದ ಕಾರಜೋಳ ಅವರ ನಿಷ್ಕಾಳಜಿಯಿಂದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭವಾಗುತ್ತಿಲ್ಲ. ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಶೀಘ್ರ ರೂಪದಲ್ಲಿ ನಡೆಯುತ್ತಿಲ್ಲ. ಕಾರ್ಖಾನೆಯ 333 ಕೋಟಿ ರೂಪಾಯಿ ಸಾಲಕ್ಕೆ ಹಾಗೂ ಕಾರ್ಖಾನೆಯ ದಿವಾಳಿಗೆ ಕಾರಣವಾದ ಆಡಳಿತ ಮಂಡಳಿಯನ್ನು ವಜಾ ಮಾಡದೆ, ಆಡಳಿತ ಮಂಡಳಿಯ ರಕ್ಷಣೆಗೆ ಮುಂದಾಗಿದ್ದಾರೆ” ಎಂದು ಹೋರಾಟಗಾರರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...