Homeಕರ್ನಾಟಕಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಚಿವ ಕಾರಜೋಳ ಕಚೇರಿ ಮುಂದೆ ಪ್ರತಿಭಟಿಸಲು ಹೊರಟ ರೈತ-ಕಾರ್ಮಿಕರನ್ನು ತಡೆದ ಪೊಲೀಸರು

ಸಕ್ಕರೆ ಕಾರ್ಖಾನೆ ಪುನರಾರಂಭಿಸಲು ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

- Advertisement -
- Advertisement -

ಸಚಿವ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ತೆರಳುತ್ತಿದ್ದ, ಕಾರ್ಮಿಕರು ಮತ್ತು ರೈತರನ್ನು ಬಾಗಲಕೋಟೆ ಪೊಲೀಸರು ಬುಧವಾರ ತಡೆದಿದ್ದಾರೆ. ಜಿಲ್ಲೆಯ ಮುಧೋಳದ ತಿಮ್ಮಾಪುರದಲ್ಲಿ ಇರುವ ‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯ ಪುನರಾರಂಭಕ್ಕಾಗಿ ಆಗ್ರಹಿಸಿ ರೈತರು ಮತ್ತು ಕಾರ್ಮಿಕರು ಕಳೆದ 73 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

‘ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ’ಯು ಜಿಲ್ಲೆಯ ಏಕೈಕ ಸಹಕಾರಿ ಸಕ್ಕರೆ ಕಾರ್ಖಾನೆಯಾಗಿದ್ದು, ಆರ್ಥಿಕ ಸಂಕಷ್ಟದಿಂದ ಮುಚ್ಚಲ್ಪಟ್ಟಿದೆ. ರೈತರು ಹಲವಾರು ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತಾ ಬರುತ್ತಿದ್ದಾರೆ. ಬುಧವಾರದಂದು ಸಚಿವರಾದ ಗೋವಿಂದ ಕಾರಜೋಳ ಅವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹ ಮಾಡಲು ಹೋಗುತ್ತಿರುವ ಪೋಲಿಸರು ಅವರನ್ನು ತಡೆದಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಪ್ರತಿಭಟನಾಕಾರರನ್ನು ಸಮಾಧಾನಗೊಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ: ದುರ್ಗಾ ಪೂಜೆ ಮಂಟಪಗಳಲ್ಲಿ ಹೊರಹೊಮ್ಮಿದ ರೈತ ಹೋರಾಟದ ಚಿತ್ರಗಳು

“ಸಚಿವ ಗೋವಿಂದ ಕಾರಜೋಳ ಅವರ ಜೊತೆ ಮಾತನಾಡಿದ್ದು, 3 ದಿನಗಳಲ್ಲಿ ಒಂದು ಸಭೆಯನ್ನು ಕರೆಯುತ್ತಾರೆ. ಆ ಸಭೆಯಲ್ಲಿ ಕಾರ್ಖಾನೆಗೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ತಿಳಿಸಲಿದ್ದಾರೆ” ಎಂದು ತಹಶೀಲ್ದಾರ್‌ ಅವರು ಪ್ರತಿಭಟನಾಗಾರರಿಗೆ ಭರವಸೆ ನೀಡಿದ್ದಾರೆ.

ತಹಶೀಲ್ದಾರ್ ಅವರ ಭರವಸೆಯ ನಂತರ ಸಚಿವರ ಕಛೇರಿ ಮುಂದುಗಡೆ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟ ಹೋರಾಟಗಾರರು, ತಹಶೀಲ್ದಾರ್ ಕಛೇರಿ ಮುಂದುಗಡೆ ಇದುವರೆಗೂ ನಡೆಯುತ್ತಿದ್ದ ಹೋರಾಟದ ವೇದಿಕೆಯಲ್ಲೇ ಧರಣಿ ಸತ್ಯಾಗ್ರಹ ಮುಂದುವರೆಸಲು ನಿರ್ಧರಿಸಿದ್ದಾರೆ.

“ಕಳೆದ 73 ದಿನಗಳಿಂದ ರನ್ನ ಸಹಕಾರ ಸಕ್ಕರೆ ಕಾರ್ಖಾನೆಯ ಪುನರಾರಂಭಕ್ಕಾಗಿ ಆಗ್ರಹಿಸಿ ಶಾಂತಿಯಿಂದ, ವಿಭಿನ್ನ ರೀತಿಯಾಗಿ ಸರ್ಕಾರವನ್ನು ಎಚ್ಚರಿಸುತ್ತಾ ಇದ್ದೇವೆ. ಆದರೆ ಸಚಿವರಾದ ಗೋವಿಂದ ಕಾರಜೋಳ ಅವರ ನಿಷ್ಕಾಳಜಿಯಿಂದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭವಾಗುತ್ತಿಲ್ಲ. ಸರ್ಕಾರದ ಮಟ್ಟದಲ್ಲಿ ಪ್ರಯತ್ನಗಳು ಶೀಘ್ರ ರೂಪದಲ್ಲಿ ನಡೆಯುತ್ತಿಲ್ಲ. ಕಾರ್ಖಾನೆಯ 333 ಕೋಟಿ ರೂಪಾಯಿ ಸಾಲಕ್ಕೆ ಹಾಗೂ ಕಾರ್ಖಾನೆಯ ದಿವಾಳಿಗೆ ಕಾರಣವಾದ ಆಡಳಿತ ಮಂಡಳಿಯನ್ನು ವಜಾ ಮಾಡದೆ, ಆಡಳಿತ ಮಂಡಳಿಯ ರಕ್ಷಣೆಗೆ ಮುಂದಾಗಿದ್ದಾರೆ” ಎಂದು ಹೋರಾಟಗಾರರು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನಿನ ಡೆತ್‌ ಸರ್ಟಿಫಿಕೇಟ್‌ ಕೊಡಿ ಎಂದು ಹೋರಾಟ ಮಾಡುತ್ತಿದ್ದೇವೆ: ಬಡಗಲಪುರ ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...