Homeಕರ್ನಾಟಕಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಒಕ್ಕಲೆಬ್ಬಿಸುವ, ಬೆದರಿಕೆ ಹಾಕುವ ಮತ್ತು ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಪ್ರಕರಣಗಳು ಮುಂದುವರಿದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸಾಗುವಳಿ ಜಮೀನಿನಲ್ಲಿ ರೈತರು ಕಟ್ಟಿಕೊಂಡಿದ್ದ ಗುಡಿಸಲು ಧ್ವಂಸ, ಬೆಳೆ ನಾಶ ಮಾಡಿದ್ದು ರೈತರ ಮೇಲೆ ಹಲ್ಲೆ, ದೌರ್ಜನ್ಯಗಳು ಕೂಡ ನಡೆಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಮಂದಿ ಬಗರ್ ಹುಕುಂ ಸಾಗುವಳಿದಾರರಿದ್ದು ಸರ್ಕಾರಕ್ಕೆ ಸಾಗುವಳಿ ಚೀಟಿ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ. ಫಾರಂ 57 ಅನ್ನು ಸಲ್ಲಿಸಿದ್ದಾರೆ. ಭೂಮಿ ಇಲ್ಲದೆ ಗೋಮಾಳದಲ್ಲಿ ಉಳುಮೆ ಮಾಡಿಕೊಂಡರೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾಟ ತಪ್ಪಿಲ್ಲ. ಕೊರೊನಾ ಸಂಕಷ್ಟದಲ್ಲಿರುವ ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಲು ಮುಂದಾದರೆ ಅರಣ್ಯ ಇಲಾಖೆ ಬಿಡುತ್ತಿಲ್ಲ.

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಿದೆ. ತುಮಕೂರು ತಾಲೂಕು ಶಂಭೋನಹಳ್ಳಿಯ ಸರ್ವೇ ನಂಬರ್ 39, 40 ಮತ್ತು 41ರಲ್ಲಿ ಸಾಗುವಳಿ ಮಾಡುತ್ತಿದ್ದ 36 ಮಂದಿ ರೈತರ ಮೇಲೆ ಅರಣ್ಯ ಇಲಾಖೆ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂದು ಕೇಸ್ ದಾಖಲಿಸಿದೆ.

ಶಂಭೋನಹಳ್ಳಿಯ ಮೂರು ಸರ್ವೇ ನಂಬರ್‌ಗಳಲ್ಲಿರುವ ಗೋಮಾಳದಲ್ಲಿ 36 ರೈತರು ಕಳೆದ ಮೂರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಡ ರೈತರು ಜೀವನೋಪಾಯಕ್ಕಾಗಿ ಭೂಮಿ ಉಳುಮೆ ಮಾಡಿಕೊಂಡರೆ ಈಗ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಬಡ ರೈತರು ಹೆದರಿಕೊಂಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಬಂದರೆ ರೈತರು ಬಚ್ಚಿಟ್ಟುಕೊಳ್ಳುವಂತಹ ಪರಿಸ್ಥಿತಿ ಬಂದಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ರೈತರೊಬ್ಬರು ಅಳಲು ತೋಡಿಕೊಂಡಿದ್ದಾರೆ. ಸಂಸದ ಜಿ.ಎಸ್. ಬಸವರಾಜು ಕೋರ ಪೊಲೀಸರಿಗೆ ಹೇಳಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 38ರಲ್ಲಿ ಬಲಾಢ್ಯರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಸಾಕಷ್ಟು ಜಮೀನು ಇರುವ ಭೂಮಾಲಿಕರಿಗೆ ಅಧಿಕಾರಿಗಳು ಲಂಚ ಪಡೆದು ಸಾಗುವಳಿ ಚೀಟಿ ನೀಡುತ್ತಿದ್ದಾರೆ. ಸ.ನ. 38ರಲ್ಲಿ ಒಂದೇ ಸಮುದಾಯದ ರೈತರಿಗೆ ಭೂಮಿ ಮಂಜೂರು ಮಾಡಿದೆ. ಹಾಗಾಗಿ ಹಿಂದುಳಿದವರು ಮತ್ತು ಪರಿಶಿಷ್ಟರು ಪಕ್ಕದಲ್ಲಿದ್ದರೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಂಸದರ ಮೇಲೆ ಒತ್ತಡ ತಂದು ಪ್ರಕರಣ ದಾಖಲಿಸುವಂತೆ ಮಾಡಲಾಗಿದೆ ಎಂದು ದೂರಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿರಂತರ ಹೋರಾಟದ ಫಲವಾಗಿ ಕೆಲವು ಕಡೆ ಸಾಗುವಳಿ ಚೀಟಿ ನೀಡಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುತುವರ್ಜಿಯಿಂದ ಕೆಲವು ರೈತರಿಗೆ ಸಾಗುವಳಿ ಚೀಟಿ ದೊರೆತಿವೆ.  ಚಿ.ನಾ.ಹಳ್ಳಿ, ಗುಬ್ಬಿ ಮತ್ತು ತುಮಕೂರು ತಾಲೂಕುಗಳಲ್ಲಿ 6-7 ಸಾವಿರ ಮಂದಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗಿದೆ  ಆದರೆ  ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಗಳಾಗಿರುವ ಪಾವಗಡ, ಮಧುಗಿರಿ, ಶಿರಾ  ಕೊರಟಗೆರೆಯಲ್ಲಿ ಸಾಗುವಳಿ ಚೀಟಿ ನೀಡಿಲ್ಲ. ಜಮೀನು ಇರುವ ರೈತರಿಗೆ ಅಧಿಕಾರಿಗಳು ಸಾಗುವಳಿ ಭೂಮಿ ಮಂಜೂರು ಮಾಡುತ್ತಾರೆ. ಇದರಿಂದ ಭೂರಹಿತರಿಗೆ ಜಮೀನು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರುಶಾಲು ಹೊದ್ದುಕೊಂಡು ರೈತಪರವೆಂದು ಹೇಳಿಕೊಳ್ಳುತ್ತಾರೆ. ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೊರೊನಾ ಸಂದರ್ಭವನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆ ಬ್ಬಿಸುವುದು, ಪ್ರಕರಣ ದಾಖಲಿಸುತ್ತಿದ್ದರೂ ತಡೆಯುವ ಕೆಲಸ ಮಾಡುತ್ತಿಲ್ಲ. ಕೇವಲ ತೋರಿಕೆಗಾಗಿ ಹಸಿರು ಶಾಲು ಹಾಕಿಕೊಂಡರೆ ಅದರಿಂದ ರೈತರಿಗೆ ಏನೂ ಪ್ರಯೋಜನವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳ ದಾಳಿ ಮತ್ತು ಕಿರುಕುಳ ನಿಲ್ಲಿಸಬೇಕು. ಒಕ್ಕಲೆಬ್ಬಿಸುವುದನ್ನು ಬಿಟ್ಟು ಸಾಗುವಳಿ ಚೀಟಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಬಡವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಾಗುವಳಿದಾರರು ಒತ್ತಾಯಿಸಿದ್ದಾರೆ.  ರೌಡಿಗಳು, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು  ಕೈಬಿಡುವ ಸರ್ಕಾರ ಬಡವರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತದೆ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

Also Read: Save India´on Quit India Day: Nationwide Farmers, Trade Unions protests

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...