Homeಕರ್ನಾಟಕಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಬಗರ್ ಹುಕುಂ ಸಾಗುವಳಿದಾರರಿಗೆ ಕಿರುಕುಳ: ಸುಳ್ಳು ಕೇಸುಗಳಲ್ಲಿ ಬಂಧಿಯಾಗುತ್ತಿದ್ದಾರೆ ಅನ್ನದಾತರು

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಲಾಗಿದೆ.

- Advertisement -
- Advertisement -

ತುಮಕೂರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿ ರೈತರನ್ನು ಒಕ್ಕಲೆಬ್ಬಿಸುವ, ಬೆದರಿಕೆ ಹಾಕುವ ಮತ್ತು ಅವರ ಮೇಲೆ ಸುಳ್ಳು ಪ್ರಕರಣ ದಾಖಲಿಸುವ ಪ್ರಕರಣಗಳು ಮುಂದುವರಿದಿವೆ. ಅರಣ್ಯ ಇಲಾಖೆ ಸಿಬ್ಬಂದಿ ಸಾಗುವಳಿ ಜಮೀನಿನಲ್ಲಿ ರೈತರು ಕಟ್ಟಿಕೊಂಡಿದ್ದ ಗುಡಿಸಲು ಧ್ವಂಸ, ಬೆಳೆ ನಾಶ ಮಾಡಿದ್ದು ರೈತರ ಮೇಲೆ ಹಲ್ಲೆ, ದೌರ್ಜನ್ಯಗಳು ಕೂಡ ನಡೆಸಲಾಗಿದೆ ಎಂಬ ದೂರುಗಳು ಕೇಳಿಬಂದಿವೆ.

ಜಿಲ್ಲೆಯಲ್ಲಿ ಸುಮಾರು 1.5 ಲಕ್ಷ ಮಂದಿ ಬಗರ್ ಹುಕುಂ ಸಾಗುವಳಿದಾರರಿದ್ದು ಸರ್ಕಾರಕ್ಕೆ ಸಾಗುವಳಿ ಚೀಟಿ ನೀಡುವಂತೆ ಅರ್ಜಿ ಹಾಕಿಕೊಂಡಿದ್ದಾರೆ. ಫಾರಂ 57 ಅನ್ನು ಸಲ್ಲಿಸಿದ್ದಾರೆ. ಭೂಮಿ ಇಲ್ಲದೆ ಗೋಮಾಳದಲ್ಲಿ ಉಳುಮೆ ಮಾಡಿಕೊಂಡರೆ ಅರಣ್ಯ ಇಲಾಖೆ ಸಿಬ್ಬಂದಿಯ ಕಾಟ ತಪ್ಪಿಲ್ಲ. ಕೊರೊನಾ ಸಂಕಷ್ಟದಲ್ಲಿರುವ ರೈತರು ಭೂಮಿ ಉಳುಮೆ ಮಾಡಿಕೊಂಡು ಜೀವನ ಸಾಗಿಸಲು ಮುಂದಾದರೆ ಅರಣ್ಯ ಇಲಾಖೆ ಬಿಡುತ್ತಿಲ್ಲ.

ಸುಮಾರು 10-15 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದಿರುವ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಗುಬ್ಬಿ ತಾಲೂಕು ಗಂಗಯ್ಯನಪಾಳ್ಯದ ಗೋಮಾಳದಲ್ಲಿ ಸಾಗುವಳಿ ಮಾಡುತ್ತಿದ್ದ ಮೂವರು ರೈತರ ಮೇಲೆ ಪ್ರಕರಣ ದಾಖಲಿಸಿದೆ. ತುಮಕೂರು ತಾಲೂಕು ಶಂಭೋನಹಳ್ಳಿಯ ಸರ್ವೇ ನಂಬರ್ 39, 40 ಮತ್ತು 41ರಲ್ಲಿ ಸಾಗುವಳಿ ಮಾಡುತ್ತಿದ್ದ 36 ಮಂದಿ ರೈತರ ಮೇಲೆ ಅರಣ್ಯ ಇಲಾಖೆ ಬೆಲೆ ಬಾಳುವ ಮರಗಳನ್ನು ಕಡಿದಿದ್ದಾರೆ ಎಂದು ಕೇಸ್ ದಾಖಲಿಸಿದೆ.

ಶಂಭೋನಹಳ್ಳಿಯ ಮೂರು ಸರ್ವೇ ನಂಬರ್‌ಗಳಲ್ಲಿರುವ ಗೋಮಾಳದಲ್ಲಿ 36 ರೈತರು ಕಳೆದ ಮೂರು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಸೇರಿದ ಬಡ ರೈತರು ಜೀವನೋಪಾಯಕ್ಕಾಗಿ ಭೂಮಿ ಉಳುಮೆ ಮಾಡಿಕೊಂಡರೆ ಈಗ ಇವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇದರಿಂದ ಬಡ ರೈತರು ಹೆದರಿಕೊಂಡಿದ್ದಾರೆ. ಪೊಲೀಸರು ಗ್ರಾಮಕ್ಕೆ ಬಂದರೆ ರೈತರು ಬಚ್ಚಿಟ್ಟುಕೊಳ್ಳುವಂತಹ ಪರಿಸ್ಥಿತಿ ಬಂದಿದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಚಿಸದ ರೈತರೊಬ್ಬರು ಅಳಲು ತೋಡಿಕೊಂಡಿದ್ದಾರೆ. ಸಂಸದ ಜಿ.ಎಸ್. ಬಸವರಾಜು ಕೋರ ಪೊಲೀಸರಿಗೆ ಹೇಳಿ ಪ್ರಕರಣ ದಾಖಲಿಸುವಂತೆ ಮಾಡಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ.

ಶಂಭೋನಹಳ್ಳಿ ಗ್ರಾಮದ ಸರ್ವೇ ನಂಬರ್ 38ರಲ್ಲಿ ಬಲಾಢ್ಯರಿಗೆ ಸಾಗುವಳಿ ಚೀಟಿ ನೀಡಲಾಗಿದೆ. ಸಾಕಷ್ಟು ಜಮೀನು ಇರುವ ಭೂಮಾಲಿಕರಿಗೆ ಅಧಿಕಾರಿಗಳು ಲಂಚ ಪಡೆದು ಸಾಗುವಳಿ ಚೀಟಿ ನೀಡುತ್ತಿದ್ದಾರೆ. ಸ.ನ. 38ರಲ್ಲಿ ಒಂದೇ ಸಮುದಾಯದ ರೈತರಿಗೆ ಭೂಮಿ ಮಂಜೂರು ಮಾಡಿದೆ. ಹಾಗಾಗಿ ಹಿಂದುಳಿದವರು ಮತ್ತು ಪರಿಶಿಷ್ಟರು ಪಕ್ಕದಲ್ಲಿದ್ದರೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಸಂಸದರ ಮೇಲೆ ಒತ್ತಡ ತಂದು ಪ್ರಕರಣ ದಾಖಲಿಸುವಂತೆ ಮಾಡಲಾಗಿದೆ ಎಂದು ದೂರಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಸಿ.ಅಜ್ಜಪ್ಪ ನಿರಂತರ ಹೋರಾಟದ ಫಲವಾಗಿ ಕೆಲವು ಕಡೆ ಸಾಗುವಳಿ ಚೀಟಿ ನೀಡಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮುತುವರ್ಜಿಯಿಂದ ಕೆಲವು ರೈತರಿಗೆ ಸಾಗುವಳಿ ಚೀಟಿ ದೊರೆತಿವೆ.  ಚಿ.ನಾ.ಹಳ್ಳಿ, ಗುಬ್ಬಿ ಮತ್ತು ತುಮಕೂರು ತಾಲೂಕುಗಳಲ್ಲಿ 6-7 ಸಾವಿರ ಮಂದಿ ರೈತರಿಗೆ ಸಾಗುವಳಿ ಚೀಟಿ ನೀಡಲಾಗಿದೆ  ಆದರೆ  ಡಾ.ನಂಜುಂಡಪ್ಪ ವರದಿ ಪ್ರಕಾರ ಅತೀ ಹಿಂದುಳಿದ ತಾಲೂಕು ಗಳಾಗಿರುವ ಪಾವಗಡ, ಮಧುಗಿರಿ, ಶಿರಾ  ಕೊರಟಗೆರೆಯಲ್ಲಿ ಸಾಗುವಳಿ ಚೀಟಿ ನೀಡಿಲ್ಲ. ಜಮೀನು ಇರುವ ರೈತರಿಗೆ ಅಧಿಕಾರಿಗಳು ಸಾಗುವಳಿ ಭೂಮಿ ಮಂಜೂರು ಮಾಡುತ್ತಾರೆ. ಇದರಿಂದ ಭೂರಹಿತರಿಗೆ ಜಮೀನು ದೊರೆಯುತ್ತಿಲ್ಲ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಹಸಿರುಶಾಲು ಹೊದ್ದುಕೊಂಡು ರೈತಪರವೆಂದು ಹೇಳಿಕೊಳ್ಳುತ್ತಾರೆ. ರೈತರು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೊರೊನಾ ಸಂದರ್ಭವನ್ನು ಬಳಸಿಕೊಂಡು ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆ ಬ್ಬಿಸುವುದು, ಪ್ರಕರಣ ದಾಖಲಿಸುತ್ತಿದ್ದರೂ ತಡೆಯುವ ಕೆಲಸ ಮಾಡುತ್ತಿಲ್ಲ. ಕೇವಲ ತೋರಿಕೆಗಾಗಿ ಹಸಿರು ಶಾಲು ಹಾಕಿಕೊಂಡರೆ ಅದರಿಂದ ರೈತರಿಗೆ ಏನೂ ಪ್ರಯೋಜನವಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರ ಮೇಲೆ ನಡೆಯುತ್ತಿರುವ ಪೊಲೀಸ್ ಇಲಾಖೆ, ಅರಣ್ಯ ಇಲಾಖೆಗಳ ದಾಳಿ ಮತ್ತು ಕಿರುಕುಳ ನಿಲ್ಲಿಸಬೇಕು. ಒಕ್ಕಲೆಬ್ಬಿಸುವುದನ್ನು ಬಿಟ್ಟು ಸಾಗುವಳಿ ಚೀಟಿ ಕೊಡಬೇಕು. ಪೊಲೀಸ್ ಠಾಣೆಗಳಲ್ಲಿ ಬಡವರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಕೈಬಿಡಬೇಕು ಎಂದು ಸಾಗುವಳಿದಾರರು ಒತ್ತಾಯಿಸಿದ್ದಾರೆ.  ರೌಡಿಗಳು, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ಮೇಲಿನ ಪ್ರಕರಣಗಳನ್ನು  ಕೈಬಿಡುವ ಸರ್ಕಾರ ಬಡವರ ಮೇಲೆ ಪ್ರಕರಣಗಳನ್ನು ದಾಖಲಿಸುತ್ತದೆ ಎಂಬ ಆಕ್ರೋಶ ವ್ಯಕ್ತವಾಗಿದೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

Also Read: Save India´on Quit India Day: Nationwide Farmers, Trade Unions protests

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...